Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯೊಳಗೆ ಸಂಕಟ ಸೃಷ್ಟಿಸಿದ ನೋಟು...

ಬಿಜೆಪಿಯೊಳಗೆ ಸಂಕಟ ಸೃಷ್ಟಿಸಿದ ನೋಟು ರದ್ದತಿ

ಸಂಸದರಿಂದ ಗೊಣಗಾಟ ಶುರು

ವಾರ್ತಾಭಾರತಿವಾರ್ತಾಭಾರತಿ13 Dec 2016 11:49 PM IST
share

 ಹೊಸದಿಲ್ಲಿ, ಡಿ.13: ಕೇಂದ್ರ ಸರಕಾರದ ನೋಟು ರದ್ದತಿ ಕ್ರಮ- ಮೊದಲಾಗಿ ಕಾಳಧನ ನಿಯಂತ್ರಣದ ಬಗ್ಗೆ ಮಾತನಾಡಿ ನಂತರ ಕ್ಯಾಶ್ ಲೆಸ್ ಇಕಾನಮಿಯತ್ತ ವಾಲಿ ಈಗ ಡಿಜಿಟಲ್ ವ್ಯವಹಾರಗಳಿಗೆ ಒತ್ತು ನೀಡಬೇಕೆಂದು ಕರೆ ನೀಡಲು ಆರಂಭಿಸಿದ ರೀತಿ ಪಕ್ಷದ ಸಂಸದರಲ್ಲಿ ಒಂದು ರೀತಿಯ ಸಂಕಟ ಸೃಷ್ಟಿಸಿದೆ. ಜನರು ನಗದು ಕೊರತೆಯಿಂದ ಅನುಭವಿಸುತ್ತಿರುವ ಸಮಸ್ಯೆಗಳು ಬ್ಯಾಂಕುಗಳು ಮತ್ತು ಎಟಿಎಂಗಳ ಮುಂದೆ ಅವರು ನಿಲ್ಲುತ್ತಿರುವ ಸರತಿ ಸಾಲುಗಳಿಂದಾಗಿ ಎಲ್ಲಿ ಅವರ ಕೋಪ ತಮ್ಮ ಮೇಲೆ ತಿರುಗುವುದೋ ಎಂಬ ಭಯ ಹಲವು ಸಂಸದರನ್ನು ಕಾಡಲು ಆರಂಭಿಸಿವೆಯೆಂದು ಮೂಲಗಳು ತಿಳಿಸುತ್ತವೆ.
ಈಗಾಗಲೇ ಬಿಜೆಪಿ ಸಂಸದರ ಒಂದು ಗುಂಪು ತಮ್ಮ ಹೆಸರು ಬಹಿರಂಗಪಡಿಸಬಾರದೆಂಬ ಷರತ್ತಿನ ಮೇರೆಗೆ ತನ್ನ ಅಸಹನೆಯನ್ನು ತೋಡಿಕೊಂಡಿದೆಯೆಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿಯೊಂದು ತಿಳಿಸಿದೆ. ಸಣ್ಣ ವ್ಯಾಪಾರಸ್ಥರು, ಕಾರ್ಮಿಕರು, ತರಕಾರಿ ಮಾರಾಟಗಾರರು ಮತ್ತಿತರ ಸಣ್ಣ ವಹಿವಾಟುದಾರರು ನಗದು ಕೊರತೆಯಿಂದ ಎದುರಿಸುತ್ತಿರುವ ಸಮಸ್ಯೆ ಹಾಗೂ ಇತರ ಕ್ಷೇತ್ರಗಳಲ್ಲಿ ಉದ್ಯೋಗ ಕಡಿತದ ಭಯ ಜನರಲ್ಲಿ ಅಸಹನೆ ಮೂಡಿಸಿದೆಯೆಂದು ಈ ಸಂಸದರು ಒಪ್ಪಿಕೊಂಡಿದ್ದಾರೆಂದು ಮೂಲಗಳು ತಿಳಿಸುತ್ತವೆ.
ವಿವಿಧ ರಾಜ್ಯಗಳು ಮುಖ್ಯವಾಗಿ ಚುನಾವಣೆ ನಡೆಯಲಿರುವ ಉತ್ತರಪ್ರದೇಶದ ಪಕ್ಷದ ನಾಯಕರು ಬಹಿರಂಗವಾಗಿ ಗೊಣಗಾಟ ಆರಂಭಿಸಿದ್ದು ಈ ಬಗ್ಗೆ ಪಕ್ಷದ ಸಭೆಗಳಲ್ಲಿ ಮಾತನಾಡಲಾರಂಭಿಸಿದ್ದಾರೆ. ಇದನ್ನು ಗಮನದಲ್ಲಿರಿಸಿ ಪಕ್ಷ ನಾಯಕತ್ವ ತನ್ನ ಚುನಾವಣಾ ತಂತ್ರಗಾರಿಕೆಯ ಬಗ್ಗೆ ಇನ್ನಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.
‘‘ನೋಟು ಅಮಾನ್ಯದಿಂದ ಭಾರತ ಡಿಜಿಟಲ್ ಆರ್ಥಿಕತೆಯತ್ತ ಸಾಗಬಹುದು ಎಂಬ ಸರಕಾರದ ವಾದವನ್ನು ಒಪ್ಪುವುದು ಕಷ್ಟ’’ ಎಂದು ಸಂಸದರೊಬ್ಬರು ಹೇಳಿದ್ದಾರೆ. ಈಗಲೂ ಹಲವೆಡೆ ವಿದ್ಯುತ್ ಮತ್ತು ಮೊಬೈಲ್ ಸಂಪರ್ಕದ ವಿಚಾರಗಳಲ್ಲಿ ಸಮಸ್ಯೆಯಿದೆ. ಹೀಗಿರುವಾಗ ಸಣ್ಣ ಅಂಗಡಿದಾರರಿಗೆ ನಾವು ಹೇಗೆ ಡಿಜಿಟಲ್ ತಂತ್ರಜ್ಞಾನವನ್ನು ಅಪ್ಪಿಕೊಳ್ಳಿ ಎಂದು ಹೇಳುವುದು?’’ ಎಂದು ಅವರು ಪ್ರಶ್ನಿಸಿದ್ದಾರೆ.
ತರುವಾಯ ಹಿಂಪಡೆಯಲ್ಪಟ್ಟ ಹೆಚ್ಚಿನ ನೋಟುಗಳು ಮತ್ತೆ ಬ್ಯಾಂಕುಗಳಿಗೆ ವಾಪಸಾಗಬಹುದೆಂಬ ವರದಿಗಳು ಸಂಸದರನ್ನು ಮತ್ತಷ್ಟು ನಿರಾಸೆಗೊಳಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X