ಮಂಗಳೂರಿನಲ್ಲಿ ತುಂತುರು ಮಳೆ
ಮಂಗಳೂರು, ಡಿ.13: ಚೆನ್ನೈಗೆ ಅಪ್ಪಳಿಸಿರುವ ವಾರ್ದಾ ಚಂಡಮಾರುತದ ಪರಿಣಾಮವಾಗಿ ಇಂದು ಮಂಗಳೂರು ಸೇರಿದಂತೆ ದ.ಕ. ಜಿಲ್ಲೆಯ ಹಲವೆಡೆ ತುಂತುರು ಮಳೆ ಯಾಗಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ನಗರದಲ್ಲಿ ಮಧ್ಯಾಹ್ನ ಹಾಗೂ ಸಂಜೆ ಹೊತ್ತಿಗೆ ತುಂತುರು ಮಳೆಯಾಗಿದೆ. ಜಿಲ್ಲೆಯ ಕೆಲವೆಡೆಗಳಲ್ಲೂ ದಿನವಿಡೀ ಮೋಡ ಕವಿದ ವಾತಾವರಣವಿದ್ದು ಸಂಜೆಯ ವೇಳೆ ಮಳೆ ಸುರಿದಿದೆ.
ವಾರ್ದಾ ಚಂಡಮಾರುತದ ಪರಿಣಾಮ ಕರ್ನಾಟಕ ಕರಾವಳಿಯಲ್ಲಿ ನಾಳೆಯೂ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿತ್ತು.
Next Story