Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಂತಾವರ ಕನ್ನಡ ಸಂಘದ ತಿಂಗಳ ಸರಣಿ...

ಕಾಂತಾವರ ಕನ್ನಡ ಸಂಘದ ತಿಂಗಳ ಸರಣಿ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 Dec 2016 6:42 PM IST
share
ಕಾಂತಾವರ ಕನ್ನಡ ಸಂಘದ ತಿಂಗಳ ಸರಣಿ ಉಪನ್ಯಾಸ ಕಾರ್ಯಕ್ರಮ

ಮೂಡುಬಿದಿರೆ,ಡಿ.14 : ಕವಿ ಕೆ.ಎಸ್.ನರಸಿಂಹ ಸ್ವಾಮಿಯವರು ಶೃಂಗಾರದ ಹೊರಭಾಗವನ್ನು ಸೆರೆಹಿಡಿದಂತೆ ಶೃಂಗಾರದ ಆಂತರ್ಯದ ಒಳನೋಟಗಳನ್ನು ತನ್ನ ಕಾವ್ಯಗಳ ಮೂಲಕ ಸೆರೆಹಿಡಿದ ದಾರ್ಶನಿಕ ವಿದ್ವತ್ತಿನ ಕವಿ ಸಾಂತ್ಯಾರು ವೆಂಕಟರಾಜರು ಎಂಬುದಾಗಿ ಖ್ಯಾತ ಸಾಹಿತಿ, ವಿಮರ್ಶಕ  ಡಾ. ಬಿ.ಜನಾರ್ದನ ಭಟ್ ತಿಳಿಸಿದರು.

ಕಾಂತಾವರ ಕನ್ನಡ ಸಂಘದ ತಿಂಗಳ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ’ಸಾಂತ್ಯಾರು ವೆಂಕಟರಾಜ ಅವರ ಕಾವ್ಯದ ಮರುಓದು’ ಎಂಬ ಕುರಿತು ಮಾತನಾಡಿದರು.

      ಸಂಸ್ಕೃತದ ಬಹುದೊಡ್ಡ ವಿದ್ವಾಂಸರಾಗಿದ್ದ ಅವರು 1929ರಿಂದ 55 ವರ್ಷಗಳ ಕಾಲ ಅದ್ಭುತವಾದ ಕಾವ್ಯಗಳನ್ನು ಸೃಷ್ಟಿಸಿದ್ದಲ್ಲದೆ ಕಾದಂಬರಿ, ನಾಟಕ ಹಾಗೂ ಕಥನ ಕಾವ್ಯಗಳ ರಚನೆಯಲ್ಲಿಯೂ ಪ್ರಸಿದ್ಧರಾಗಿದ್ದರು. ಛಂದಸ್ಸಿನ ಬಗ್ಗೆ ಬಲವಾದ ಹಿಡಿತವಿದ್ದುದರಿಂದ ಅದರ ಬಗ್ಗೆ ಸಾಕಷ್ಟು ಪ್ರಯೋಗಗಳನ್ನು ನಡೆಸಿದ್ದ ಅವರು ಪ್ರಾರಂಭದಲ್ಲಿ ಹಳೆಗನ್ನಡ ಛಾಯೆಯಲ್ಲಿ ಕವನಗಳನ್ನು ರಚಿಸಿದರೂ ನಂತರ ಆಧುನಿಕತೆಗೂ ತೆರೆದುಕೊಂಡವರು. ಏಳು ವರ್ಷಗಳ ಕಾಲ ’ವೀರಭೂಮಿ’ ಎಂಬ ಪತ್ರಿಕೆಯನ್ನೂ ನಡೆಸಿ ಅನೇಕ ಪ್ರತಿಭೆಗಳನ್ನು ಬೆಳೆಸಿದರು.

      ಪ್ರಕೃತಿ ಮತ್ತು ಹಳ್ಳಿಯ ಜೀವನದ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದ ಅವರು ಶೃಂಗಾರದ ಬಗೆಗಿನ ಅಪೂರ್ವ ಭಾವಗೀತೆಗಳನ್ನು ರಚಿಸುವುದರ ಜೊತೆಗೆ ಅನೇಕ ನಾಟಕಗಳಿಗೆ ಗೀತೆರಚನೆ ಮಾಡಿದ್ದರು ಮತ್ತು ತುಳುವಿನಲ್ಲಿಯೂ ಪದ್ಯಗಳನ್ನು ಬರೆಯುತ್ತಿದ್ದರು. ಅದ್ಭುತ ರೂಪಕ ಶಕ್ತಿಯನ್ನು ಮತ್ತು ತಾತ್ವಿಕ ನೆಲೆಯನ್ನು ತನ್ನ ಕಾವ್ಯಗಳಲ್ಲಿ ತುಂಬುತ್ತಿದ್ದ ಅವರು ಕನ್ನಡದ ಬಹುಮುಖ್ಯ ಕವಿಯಾಗಿದ್ದರೂ ನಿರ್ಲಕ್ಷಕ್ಕೊಳಪಟ್ಟರು ಎಂದರು.

      ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ವಿಠಲ ಬೇಲಾಡಿಯವರು ಕಾರ್ಯಕ್ರಮ ನಿರ್ವಹಿಸಿದರು. ಡಾ.ನಾ.ಮೊಗಸಾಲೆಯವರು ಸ್ವಾಗತಿಸಿ, ಸದಾನಂದ ನಾರಾವಿ ಅವರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X