Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಹ್ಮದ್ ಅನ್ವರ್‌ಗೆ ಸಂತಾಪ ಸೂಚಕ ಸಭೆ

ಅಹ್ಮದ್ ಅನ್ವರ್‌ಗೆ ಸಂತಾಪ ಸೂಚಕ ಸಭೆ

ವಾರ್ತಾಭಾರತಿವಾರ್ತಾಭಾರತಿ14 Dec 2016 8:06 PM IST
share
ಅಹ್ಮದ್ ಅನ್ವರ್‌ಗೆ ಸಂತಾಪ ಸೂಚಕ ಸಭೆ

ಮಂಗಳೂರು, ಡಿ.14: ಕವಿ, ಪತ್ರಕರ್ತ, ಛಾಯಾಗ್ರಾಹಕ ಅಹ್ಮದ್ ಅನ್ವರ್‌ಗೆ ಮುಸ್ಲಿಮ್ ಲೇಖಕರ ಸಂಘದ ಆಶ್ರಯದಲ್ಲಿ ಬುಧವಾರ ನಗರದ ರವೀಂದ್ರ ಕಲಾಭವನದಲ್ಲಿ ಸಂತಾಪ ಸೂಚಕ ಸಭೆ ಜರಗಿತು.

ಸಂಘದ ಅಧ್ಯಕ್ಷ ಉಮರ್ ಯು.ಎಚ್. ಮಾತನಾಡಿ, ಅಹ್ಮದ್ ಅನ್ವರ್‌ರ ಸಾಹಿತ್ಯದಲ್ಲಿ ಸಾರಸ್ವತ ಲೋಕದ ಪಕ್ವತೆಗಿಂತ ಮಾನವತೆಯ ತುಡಿತ ಎದ್ದು ಕಾಣುತ್ತಿವೆ. ಅನಾರೋಗ್ಯದಿಂದ ಹಾಸಿಗೆ ಹಿಡಿದ ಬಳಿಕವೂ ಬರೆಯುವ ಹುಮ್ಮಸ್ಸು ಇತ್ತು. ಬರೆಯುವ ಶಕ್ತಿ ಕಳಕೊಂಡರೂ ಕೂಡ ತನ್ನ ಪತ್ನಿಯ ಮೂಲಕ ಬರೆಯಿಸುತ್ತಿದ್ದುದನ್ನು ಮರೆಯಲು ಸಾಧ್ಯವಿಲ್ಲ ಎಂದರು.

ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ರಹೀಂ ಟೀಕೆ ಮಾತನಾಡಿ, ಅಹ್ಮದ್ ಅನ್ವರ್‌ರ ಅಗಲಿಕೆ ನಿರೀಕ್ಷಿತವಾಗಿದ್ದರೂ ಕೂಡ ಆ ಕಟು ವಾಸ್ತವವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಅನ್ವರ್‌ರಂತಹ ಪ್ರತಿಭಾವಂತರು ಬೇಕು ಎಂಬುದನ್ನು ಅದು ಸೂಚಿಸುತ್ತಿದೆ. ಕಳೆದ ನಾಲ್ಕೈದು ವರ್ಷದಿಂದ ಅವರು ಸದಾ ಸಂಘರ್ಷದ ಬದುಕು ಸಾಗಿಸುತ್ತಿದ್ದರು. ಚೇತರಿಕೆಯ ಮಧ್ಯೆ ಸಾಹಿತ್ಯ ಕೃತಿಗಳಿಗೆ ಪ್ರತಿಕ್ರಿಯಿಸುವ ಮನಸ್ಸು ಇತ್ತು ಎಂದರು.

ಪತ್ರಕರ್ತ ಎನ್.ವಿ. ಪೌಲೋಸ್ ಮಾತನಾಡಿ, ಸದಾ ನಗುಮುಖದ ಅಹ್ಮದ್ ಅನ್ವರ್ ಸ್ನೇಹಜೀವಿಯಾಗಿದ್ದರು. ಭೇಟಿಯಾದಾಗಲೆಲ್ಲಾ ಹಲವು ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದರು ಎಂದು ಹೇಳಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಎಂ.ಬಿ. ಅಬ್ದುರ್ರಹ್ಮಾನ್ ಮಾತನಾಡಿ, ಕಳೆದ 20 ವರ್ಷದ ನಮ್ಮ ನಡುವಿನ ಒಡನಾಟದಲ್ಲಿ ಅವರು ಎಂದೂ ಯಾರನ್ನೂ ನೋಯಿಸಿದ್ದನ್ನು ನಾನು ಕಂಡಿಲ್ಲ, ಕೇಳಿಲ್ಲ. ಸಮಾಜದ ಹುಳುಕುಗಳನ್ನು ಎತ್ತಿ ತೋರಿಸುವ ಮನೋಭಾವ ಅವರಲ್ಲಿತ್ತು ಎಂದರು.

ಅನುಪಮ ಮಾಸಿಕದ ಸಂಪಾದಕಿ ಶಹನಾಝ್ ಎಂ. ಮಾತನಾಡಿ, ಅನ್ವರ್ ಸದಾ ನನಗೆ ಮಾರ್ಗದರ್ಶಕರಾಗಿದ್ದರು. ನನ್ನ ಬರಹಗಳಿಗೆ ಟೀಕೆಗಳು ವ್ಯಕ್ತವಾದಾಗ ಸಮಾಧಾನಪಡಿಸುತ್ತಿದ್ದರು. ಮನೆಯಲ್ಲಿ ಯಾರೇ ಅಸೌಖ್ಯಕ್ಕೀಡಾದರೂ ಕೂಡ ಎಲ್ಲ ರೀತಿಯ ಸಂಕಟಗಳನ್ನು ಅನುಭವಿಸುತ್ತಿದ್ದುದು ಮಹಿಳೆಯರು. ಅದಕ್ಕೆ ಅನ್ವರ್‌ರ ಪತ್ನಿ ಶಾಹಿದಾ ಕೂಡ ಹೊರತಲ್ಲ. ಆದರೆ, ಅವರೆಂದೂ ಕೂಡ ತನ್ನ ನೋವನ್ನು ಇತರರ ಮುಂದೆ ತೋರಿಸಿಕೊಡುತ್ತಿರಲಿಲ್ಲ. ಎಲ್ಲವನ್ನೂ ಸಹನೆಯಿಂದ ಎದುರಿಸಿ ಪತಿಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು ಎಂದರು.

ಅಹ್ಮದ್ ಅನ್ವರ್ ರಚಿಸಿದ ‘ನೀನಾರಿಗಾದೆ ಮಾನವ’ ಪದ್ಯವನ್ನು ಕವಿ ಹುಸೈನ್ ಕಾಟಿಪಳ್ಳ ಹಾಡಿದರು. ಸನ್ಮಾರ್ಗ ಪತ್ರಿಕೆಯ ಸಂಪಾದಕ ಎ.ಕೆ. ಕುಕ್ಕಿಲ, ಯುನಿವೆಫ್ ಕರ್ನಾಟಕದ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ, ಶಾಂತಿಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಪತ್ರಕರ್ತ ಆರೀಫ್ ಪಡುಬಿದ್ರೆ, ಲೇಖಕ ರಶೀದ್ ವಿಟ್ಲ ಅನಿಸಿಕೆ ವ್ಯಕ್ತಪಡಿಸಿದರು.

ಅನಸ್ ಮುಹಿಯ್ಯುದ್ದೀನ್ ಕಿರಾಅತ್ ಪಠಿಸಿದರು. ಮುಹಮ್ಮದ್ ಇರ್ಶಾದ್ ವೇಣೂರು ಭಾವಾನುವಾದ ವಾಚಿಸಿದರು. ಕೆ.ಎಂ. ಶರೀಫ್ ದುಆ ಮಾಡಿದರು. ಸಂಘದ ಉಪಾಧ್ಯಕ್ಷ ಬಿ.ಎ. ಮುಹಮ್ಮದಲಿ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾಭ್ಯಾಸಕ್ಕೆ ಸದಾ ಪ್ರೋತ್ಸಾಹಿಸುತ್ತಿದ್ದ ಅಪ್ಪ ಯಾವ ಕಾರಣಕ್ಕೂ ವಿದ್ಯಾಭ್ಯಾಸ ಮೊಟಕುಗೊಳಿಸಬಾರದು ಎಂದು ಎಚ್ಚರಿಸುತ್ತಿದ್ದರು. ಅವರು ನನಗೆ ಸದಾ ಮಾದರಿಯಾಗಿದ್ದರು.

ಸಲ್ಮಾನ್, (ಅಹ್ಮದ್ ಅನ್ವರ್‌ರ ಪುತ್ರ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X