Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಲೆನಾಡಿನಲ್ಲಿ ಮುಂದುವರಿದ ವಾರ್ದಾ...

ಮಲೆನಾಡಿನಲ್ಲಿ ಮುಂದುವರಿದ ವಾರ್ದಾ ಚಂಡಮಾರುತ ಎಫೆಕ್ಟ್

ಎಲ್ಲೆಡೆ ತುಂತುರು ಮಳೆ-ಉಷ್ಣಾಂಶದಲ್ಲಿ ದಿಢೀರ್ ಕುಸಿತ!

ವಾರ್ತಾಭಾರತಿವಾರ್ತಾಭಾರತಿ14 Dec 2016 11:12 PM IST
share

ಶಿವಮೊಗ್ಗ, ಡಿ. 14: ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಅಬ್ಬರಿಸುತ್ತಿರುವ ‘ವಾರ್ದಾ’ ಚಂಡಮಾರುತದ ಎಫೆಕ್ಟ್ ಮಲೆನಾಡಿನ ಮೇಲೆಯೂ ಪರಿಣಾಮ ಬೀರಿದ್ದು, ಸತತ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಬಹುತೇಕ ಎಲ್ಲೆಡೆ ತುಂತುರು ಮಳೆಯಾಗುತ್ತಿದೆ. ಮತ್ತೊಂದೆಡೆ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ದಿಢೀರ್ ಆಗಿ ಉಷ್ಣಾಂಶದ ಪ್ರಮಾಣದಲ್ಲಿ ತೀವ್ರ ಕುಸಿತ ಉಂಟಾಗಿದೆ. ಶೀತ ಮಾರುತಗಳ ವೇಗ ತೀವ್ರವಾಗಿದ್ದು, ಮೊದಲೇ ಚಳಿಯಿಂದ ತತ್ತರಿಸಿದ್ದ ಮಲೆನಾಡಿಗರು ಇದೀಗ ‘ವಾರ್ದಾ’ ಚಂಡಮಾರುತ ಸೃಷ್ಟಿಸಿರುವ ಹವಾಮಾನ ವೈಪರೀತ್ಯದಿಂದ ಅಕ್ಷರಶಃ ದಿನವಿಡೀ ಗಡಗಡ ನಡುಗುವಂತಾಗಿದೆ!


ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ‘ವಾರ್ದಾ’ ಚಂಡಮಾರುತದ ತೀವ್ರತೆ ಕಡಿಮೆಯಾಗಿದೆ. ಮತ್ತೊಂದೆಡೆ ಈ ಚಂಡಮಾರುತವು ವಾಯುಭಾರ ಕುಸಿತ ಸೃಷ್ಟಿಸಿದ್ದು, ಇದರಿಂದ ರಾಜ್ಯದ ಒಳನಾಡು ಹಾಗೂ ಕರಾವಳಿಯ ಪ್ರದೇಶಗಳಲ್ಲಿ ಮುಂದಿನ ಒಂದೆರೆಡು ದಿನಗಳ ಕಾಲ ತುಂತುರು ಮಳೆ, ಮೋಡ ಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ಮಾಹಿತಿ ನೀಡುತ್ತಿವೆ. ಶಿವಮೊಗ್ಗ ನಗರದಲ್ಲಿ ಸತತ ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ.

ಮಂಗಳವಾರ ಕಡಿಮೆಯಿದ್ದ ಮಳೆಯ ತೀವ್ರತೆ ತಡರಾತ್ರಿಯಿಂದ ಚುರುಕುಗೊಂಡಿದೆ. ಆಗಾಗ್ಗೆ ತುಂತುರು ವರ್ಷಧಾರೆಯಾಗುತ್ತಿದೆ. ಉಷ್ಣಾಂಶದಲ್ಲಿ ಗಣನೀಯ ಪ್ರಮಾಣದ ಕುಸಿತ ಉಂಟಾಗಿದ್ದು, ಹಗಲು ವೇಳೆಯಲ್ಲಿಯೂ ನಾಗರಿಕರು ಗಡಗಡ ನಡುಗುವಂತಹ ಸ್ಥಿತಿ ಸೃಷ್ಟಿಯಾಗಿದೆ. ಇದೇ ಸ್ಥಿತಿ: ಜಿಲ್ಲೆಯ ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ, ತೀರ್ಥಹಳ್ಳಿ, ಹೊಸನಗರ ತಾಲೂಕು ಕೇಂದ್ರಗಳು ಸೇರಿದಂತೆ ಪ್ರಮುಖ ಹೋಬಳಿ ಕೇಂದ್ರಗಳಾದ ಹೊಳೆಹೊನ್ನೂರು, ಹಾರ್ನಳ್ಳಿ, ಆಯನೂರು, ಕುಂಸಿ, ಆನಂದಪುರಂ, ಶಿರಾಳಕೊಪ್ಪ, ಆನವಟ್ಟಿ ಸೇರಿದಂತೆ ಇತರ ಪ್ರಮುಖ ಪ್ರದೇಶಗಳಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಉಷ್ಣಾಂಶದಲ್ಲಿ ಇಳಿಕೆಯಾಗಿರುವ ವರದಿಗಳು ಬಂದಿವೆ.

ಸಂಕಷ್ಟ: ಜಿಲ್ಲೆಯ ಹಲವೆಡೆ ಕೆಲ ರೈತರು ಭತ್ತ ಕಟಾವು ಕಾರ್ಯದಲ್ಲಿ ತೊಡಗಿದ್ದಾರೆ. ಪ್ರಸ್ತುತ ಬೀಳುತ್ತಿರುವ ತುಂತುರು ಮಳೆಯಿಂದ ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಬೆಳೆ ಸಂರಕ್ಷಣೆಗೆ ಹರಸಾಹಸ ನಡೆಸುವಂತಾಗಿದೆ. ಮತ್ತೊಂದೆಡೆ ಕಟಾವು ಹಂತದಲ್ಲಿರುವ ಭತ್ತದ ಬೆಳೆಗೂ ಪ್ರಸ್ತುತ ಬೀಳುತ್ತಿರುವ ತುಂತುರು ಮಳೆಯು ಹಾನಿಯುಂಟು ಮಾಡುವ ಆತಂಕ ಬೆಳೆಗಾರರಲ್ಲಿ ಆವರಿಸಿದೆ.

ಭತ್ತದ ಕೃಷಿಗೆ ಚಂಡಮಾರುತದ ಪೆಟ್ಟು ರೈತ ಕಂಗಾಲು
ಮೂಡಿಗೆರೆ: ಮಲೆನಾಡಿನಲ್ಲಿ ‘ವಾರ್ದಾ’ ಚಂಡಮಾರುತದ ತಂಗಾಳಿಯ ಮಳೆ ಹೊಡೆತಕ್ಕೆ ಭತ್ತ ಕೃಷಿಕರನ್ನು ಕಂಗಾಲುಗೊಳಿಸಿದೆ. ಮಲೆನಾಡಿನಲ್ಲಿ ಭತ್ತ ಕೊಯ್ಲು ಹಂತದಲ್ಲಿದ್ದು, ಕಟಾವು ಮಾಡಿದ ಹಲವು ರೈತರ ಬೆಳೆ ಮಳೆ ಸುರಿದ ಪರಿಣಾಮದಿಂದ ನಷ್ಟ ಉಂಟಾಗಿದೆ.
  ತಮಿಳುನಾಡಿನಲ್ಲಿ ಬೀಸಿದ ‘ವಾರ್ದಾ’ ಚಂಡಮಾರುತಕ್ಕೆ ಮಳೆಯ ಹೊಡೆತ ಮಾತ್ರವಲ್ಲದೇ ಭತ್ತದ ಕೃಷಿ ಮಾಡಿದ ಸಣ್ಣ ರೈತರು ಭತ್ತ ಕಟಾವು ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಟ್ಟಿಗೆಹಾರದ ತರುವೆ, ಬಣಕಲ್ ಸುತ್ತಮುತ್ತ ಭತ್ತ ಬೆಳೆದಿರುವ ರೈತರು ಮಳೆಯಿಲ್ಲದೇ ಸಂಕಷ್ಟ ಎದುರಾಗಿ ಕೊನೆಗೂ ಭತ್ತದ ಬೆಳೆ ಮೇಲೇರುತ್ತಿದ್ದಂತೆ ‘ವಾರ್ದಾ’ ಚಂಡಮಾರುತದಿಂದ ಅವರ ಕೃಷಿ ಬದುಕಿಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ.


 ಕೊಟ್ಟಿಗೆಹಾರದ ತರುವೆಯಲ್ಲಿ ಸುಮಾರು 50 ಎಕರೆ ಜಮೀನಿನಲ್ಲಿ ರೈತರು ಭತ್ತದ ಕೃಷಿ ಮಾಡಿದು,್ದ ಕೊಯ್ಲು ಸಮಯದಲ್ಲಿ ಮಳೆ ಸುರಿದು ಭತ್ತ ನೆಲಸಮವಾಗಿದೆ. ಭತ್ತದ ಕೃಷಿಯನ್ನೇ ನಂಬಿದ್ದ ರೈತರಿಗೆ ಚಂಡಮಾರುತದ ಪರಿಣಾಮ ಗಾಯದ ಮೇಲೆ ಬರೆ ಎಳೆದಂತಾಗಿದೆ.
 ಮಲೆನಾಡಿನಲ್ಲಿ ಕಾಫಿ ಬೆಳೆಗಾರರಿಗೂ ಕೂಡ ಮಳೆಯಿಂದ ಆಪತ್ತು ಸಂಭವಿಸಿದೆ. ಈಗ ಕಾಫಿ ಬೆಳೆಯ ಕೊಯ್ಲು ಇರುವುದರಿಂದ ಮಳೆಯಿಂದ ನೆಲಕ್ಕೆ ಕಾಫಿ ಹಣ್ಣು ಬೀಳುವ ಸಂಭವವಿದೆ. ಒಟ್ಟಾರೆ ಕಾಫಿ ಬೆಳೆಗಾರರಿಗೂ ಚಂಡಮಾರುತದ ಪೆಟ್ಟು ತಗಲಿದೆ. ಭತ್ತದ ಕೃಷಿಯ ನಷ್ಟ ಸಂಭವಿಸಿದ ರೈತರನ್ನು ಗುರುತಿಸಿ ಸರಕಾರ ಪರಿಹಾರದತ್ತ ಸೂಕ್ತ ವ್ಯವಸ್ಥೆ ಮಾಡಬೇಕೆಂದು ರೈತರು ಸರಕಾರವನ್ನು ಒತ್ತಾಯಿಸಿದ್ದಾರೆ.


ಚಂಡಮಾರುತದ ಪರಿಣಾಮದಿಂದ ಭತ್ತದ ಕೃಷಿ ಅವಲಂಬಿಸಿ ಬದುಕುತ್ತಿದ್ದ ರೈತರು ಬೀದಿಪಾಲಾಗುವ ಸಂಭವವಿದೆ. ಮಳೆಯಿಂದ ಭತ್ತ ಕೃಷಿಯ ಬೆಳೆಗಾರರು ಭತ್ತ ಕೊಯ್ಲು ಮಾಡಿ ಸಂಕಷ್ಟಕ್ಕೆ ಎದುರಾಗಿದ್ದಾರೆ. ಸರಕಾರ ಸಣ್ಣ ರೈತರ ಸಮಸ್ಯೆಗಳಿಗೆ ಮಧ್ಯ ಪ್ರವೇಶಿಸಿ ನಷ್ಟದ ಪರಿಹಾರ ನೀಡುವಲ್ಲಿ ಸಹಕರಿಸಬೇಕು. ಭತ್ತದ ಬೆಳೆಯ ನಷ್ಟ ಸಂಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X