Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯ ಪ್ರದೇಶದಲ್ಲಿ ಕೋಮು ಗಲಭೆ

ಮಧ್ಯ ಪ್ರದೇಶದಲ್ಲಿ ಕೋಮು ಗಲಭೆ

ಸಕಾಲದಲ್ಲಿ ಆರೆಸ್ಸೆಸ್ ಮುಖಂಡನ ಸಂಬಂಧಿಯನ್ನು ಕಾಪಾಡಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ15 Dec 2016 12:11 PM IST
share
ಮಧ್ಯ ಪ್ರದೇಶದಲ್ಲಿ ಕೋಮು ಗಲಭೆ

ಭೋಪಾಲ್, ಡಿ.15: ಆರೆಸ್ಸೆಸ್ ಮುಖಂಡನೊಬ್ಬನ ಸಂಬಂಧಿ ಯುವಕನೊಬ್ಬ ವಾಟ್ಸ್ ಅಪ್ ನಲ್ಲಿ ನೀಡಿದ್ದ ಇಸ್ಲಾಮ್ ವಿರೋಧಿ ಹೇಳಿಕೆ ಸಾಗರ ಪಟ್ಟಣದಲ್ಲಿ ಮತೀಯ ಹಿಂಸೆಗೆ ಕಾರಣವಾಗಿದ್ದು, ಈತನ ಮನೆಗೆ ದೊಡ್ಡ ಸಂಖ್ಯೆಯಲ್ಲಿ ಮುಸ್ಲಿಮರಿರುವ ಗುಂಪೊಂದು ಧಾವಿಸಿದೆಯೆಂದು ಮಾಹಿತಿ ಪಡೆದ ಪೊಲೀಸರು ಸಕಾಲದಲ್ಲಿ ಅಲ್ಲಿಗೆ ಧಾವಿಸಿ ಸನತ್ ಸೋನಿ ಎಂಬ ಆ ಯುವಕನನ್ನು ರಕ್ಷಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಈ ಯುವಕ ಆರೆಸ್ಸೆಸ್ ನಾಯಕ ದಿನೇಶ್ ಸೋನಿಯ ಸೋದರಳಿಯನಾಗಿದ್ದಾನೆ. ಪೊಲೀಸರು ಆತ ಹಾಗೂ ಆತನ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಈ ನಡುವೆ ಪ್ರತಿಭನಟನಾಕಾರರು ತೂರಿದ ಕಲ್ಲುಗಳಿಂದಾಗಿ ಪೊಲೀಸ್ ಅಧಿಕಾರಿ ಬಿ.ಎಂ.ತ್ರಿವೇದಿ ಸಹಿತ ಇನ್ನೊಬ್ಬ ಅಧಿಕಾರಿಗೆ ಗಾಯಗಳಾಗಿವೆ. ಸೋನಿ ಮನೆಯತ್ತ ಸುಮಾರು 1000 ಮುಸ್ಲಿಮರು ಪ್ರತಿಭಟಿಸುವ ಸಲುವಾಗಿ ಧಾವಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಸಮಯಕ್ಕೆ ಸರಿಯಾಗಿ ಬಾರದೇ ಹೋಗಿದ್ದರೆ, ಕೆಟ್ಟ ಘಟನೆಯೊಂದು ನಡೆದು ಹೋಗುತ್ತಿತ್ತು, ಎಂದು ಸ್ಥಳೀಯ ಬಿಜೆಪಿ ಶಾಸಕ ಶೈಲೇಂದ್ರ ಜೈನ್ ಹೇಳಿದ್ದಾರೆ.

ಸನತ್ ಸೋನಿಯ ವಾಟ್ಸ್ ಅಪ್ ಕಮೆಂಟ್ ಹಿನ್ನೆಲೆಯಲ್ಲಿ ಉಂಟಾದ ಹಿಂಸಾಚಾರದ ಸಂಬಂಧ ಪೊಲೀಸರು ಮೂವರು ಮುಸ್ಲಿಮರನ್ನು ಎನ್ ಎಸ್ ಎ ಕಾಯ್ದೆನ್ವಯ ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಹಿಂಸಾಚಾರದ ಸಂಬಂಧ ಈಗಾಗಲೇ ಹಲವು ಮುಸ್ಲಿಮರ ವಿರುದ್ಧ ಪ್ರಕರಣ ದಾಖಲಾಗಿದೆ.

ತರುವಾಯ ಪರ್ಕೊಟ ಪ್ರದೇಶದಲ್ಲಿರುವ ಆರೆಸ್ಸೆಸ್ ಕಚೇರಿ ಬಳಿ ದೊಡ್ಡ ಸಂಖ್ಯೆಯಲ್ಲಿ ಸೇರಿದ ಬಿಜೆಪಿ ಹಾಗೂ ಆರೆಸ್ಸೆಸ್ ನಾಯಕರು ಸದರ್ ಪ್ರದೇಶದಲ್ಲಿ ಆರೋಪಿಗಳಿಗಾಗಿ ಪೊಲೀಸರು ಶೋಧಿಸಬೇಕೆಂದು ಆಗ್ರಹಿಸಿದರು. ಸಾಗರ ಎಸ್ಪಿ ಸಚಿನ್ ಅತುಲ್ಕರ್ ಮಧ್ಯ ರಾತ್ರಿಯ ಹೊತ್ತಿಗೆ ಆರೆಸ್ಸೆಸ್ ಕಚೇರಿಗೆ ತೆರಳಿ ಅಲ್ಲಿದ್ದ ನಾಯಕರಿಂದ ಮನವಿ ಸ್ವೀಕರಿಸಿದರು.

ನಗರದಲ್ಲಿ ಯಾವುದೇ ಮೆರವಣಿಗೆ ನಡೆಸಲು ಅನುಮತಿಯಿಲ್ಲ ಎಂದು ಎಸ್ಪಿ ಹೇಳಿದ್ದಾರೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆಯೆಂದು ತಿಳಿದು ಬಂದಿದೆ.

ಆದರೆ ಬಂಧಿತರ ವಿರುದ್ಧ ಎನ್ ಎಸ್ ಎ ಅನ್ವಯ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಅನುಮತಿ ಅಗತ್ಯವಾಗಿದ್ದು ಈ ಬಗ್ಗೆ ಇಲ್ಲಿಯವರೆಗೆ ಅವರು ಯಾವುದೇ ಹೇಳಿಕೆ ನೀಡಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X