Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಫಿದಾವಿತ್‌ನಲ್ಲಿ ಸುಳ್ಳು ಸಾಕ್ಷ ನೀಡಿದ...

ಅಫಿದಾವಿತ್‌ನಲ್ಲಿ ಸುಳ್ಳು ಸಾಕ್ಷ ನೀಡಿದ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್

ಕ್ಷಮೆ ಕೋರುವಂತೆ ಸುಪ್ರೀಂಕೋರ್ಟ್ ತಾಕೀತು

ವಾರ್ತಾಭಾರತಿವಾರ್ತಾಭಾರತಿ15 Dec 2016 5:59 PM IST
share
ಅಫಿದಾವಿತ್‌ನಲ್ಲಿ ಸುಳ್ಳು ಸಾಕ್ಷ ನೀಡಿದ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್

ಹೊಸದಿಲ್ಲಿ, ಡಿ.16: ಬಿಸಿಸಿಐ ಹಾಗೂ ಲೋಧಾ ಸಮಿತಿ ಪ್ರಕರಣದ ಸಂಬಂಧಿಸಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಸಲ್ಲಿಸಿರುವ ಅಫಿದಾವಿತ್‌ನಲ್ಲಿ ಸುಳ್ಳು ಸಾಕ್ಷ ನೀಡಿರುವುದು ಸಾಬೀತಾಗಿದೆ. ಈ ತಪ್ಪಿಗೆ ಠಾಕೂರ್ ಜೈಲು ಪಾಲಾಗಬೇಕು ಇಲ್ಲವೇ ನ್ಯಾಯಾಲಯದ ಕ್ಷಮೆ ಕೋರಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಬಿಸಿಸಿಐ ಪರ ವಕೀಲರಾದ ಕಪಿಲ್ ಸಿಬಲ್ ವಿಚಾರಣೆ ವೇಳೆ ಹಾಜರಿದ್ದು, ತಾವು ಕ್ಷಮೆ ಯಾಚಿಸಲು ಸಿದ್ಧ ಎಂದು ಹೇಳಿದ್ದಾರೆ. ಬಿಸಿಸಿಐ ತಾನು ಶಿಫಾರಸು ಮಾಡಿರುವ ಸುಧಾರಣೆಗಳನ್ನು ಅನುಷ್ಠಾನಕ್ಕೆ ತರುತ್ತಿಲ್ಲ ಎಂದು ಲೋಧಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಗುರುವಾರ ಕೈಗೆತ್ತಿಕೊಂಡಿತು.

ಲೋಧಾ ಸಮಿತಿಯ ಶಿಫಾರಸಿನ ಬಗ್ಗೆ ಐಸಿಸಿ ಮುಖ್ಯಕಾರ್ಯಾಧ್ಯಕ್ಷ ರಿಚರ್ಡ್‌ಸನ್‌ರೊಂದಿಗೆ ನಡೆಸಿದ ಮಾತುಕತೆಯ ಬಗ್ಗೆ ಅಫಿದಾವಿತ್ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಅಕ್ಟೋಬರ್‌ನಲ್ಲಿ ನೀಡಿದ ಆದೇಶದಲ್ಲಿ ಠಾಕೂರ್‌ಗೆ ತಿಳಿಸಿತ್ತು. ಬಿಸಿಸಿಐನಲ್ಲಿ ಸಿಎಜಿ ನೇಮಕ ಮಾಡಬೇಕೆಂದು ಲೋಧಾ ಸಮಿತಿಯ ಶಿಫಾರಸಿನ ಸಂಬಂಧ ಐಸಿಸಿಯನ್ನು ಠಾಕೂರ್ ಸಂಪರ್ಕಿಸಿದ್ದರು.

ನಾನು ಐಸಿಸಿಯಿಂದ ಪತ್ರ ನೀಡುವಂತೆ ಕೇಳಿಲ್ಲ. ಲೋಧಾ ಸಮಿತಿಯ ಸುಧಾರಣೆಗಳನ್ನು ಜಾರಿಗೆ ತಂದರೆ ಬಿಸಿಸಿಐನ ಆಡಳಿತದಲ್ಲಿ ಸರಕಾರ ಮಧ್ಯಪ್ರವೇಶ ಮಾಡಿದಂತಾಗುತ್ತದೆಯೇ ಎಂಬ ಬಗ್ಗೆ ಐಸಿಸಿ ಚೇರ್ಮನ್ ಬಳಿ ಸ್ಪಷ್ಟೀಕರಣ ಕೇಳಿದ್ದೆ ಎಂದು ಅಫಿದಾವಿತ್‌ನಲ್ಲಿ ಠಾಕೂರ್ ತಿಳಿಸಿದ್ದಾರೆ. ಐಸಿಸಿ ಚೇರ್ಮನ್ ಮನೋಹರ್‌ರಿಂದ ಅಭಿಪ್ರಾಯ ಕೇಳಿದ್ದೇನೆ ಎಂದು ಅಫಿದಾವಿತ್‌ನಲ್ಲಿ ಸುಳ್ಳು ಸಾಕ್ಷ ಹೇಳಿದ್ದಾರೆ ಎಂದು ಲೋಧಾ ಸಮಿತಿ ಪರ ವಾದಿಸಿದ ಸುಬ್ರಹ್ಮಣ್ಯ ಅವರು ಜಸ್ಟಿಸ್ ಟಿಎಸ್ ಠಾಕೂರ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದರು.

ಬಿಸಿಸಿಐಗೆ ಸ್ವತಂತ್ರ ಆಡಿಟರ್ ಜನರಲ್‌ರನ್ನು ನೇಮಕ ಮಾಡಬೇಕೆಂಬ ಲೋಧಾ ಸಮಿತಿಯ ಶಿಫಾರಸಿನ ಬಗ್ಗೆ ಇನ್ನೊಂದು ವಾರದಲ್ಲಿ ಅಭ್ಯರ್ಥಿಯ ಹೆಸರನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಲೋಧಾ ಸಮಿತಿಯ ಕೇಂದ್ರ ಮಾಜಿ ಗೃಹ ಕಾರ್ಯದರ್ಶಿ ಪಿ.ಕೆ. ಪಿಳ್ಳೈ ಅವರನ್ನು ಸ್ವತಂತ್ರ ಆಡಿಟರ್ ಜನರಲ್ ನೇಮಕ ಮಾಡಬೇಕೆಂದು ಮನವಿ ಮಾಡಿತ್ತು. ಇದಕ್ಕೆ ಬಿಸಿಸಿಐ ಆಕ್ಷೇಪ ವ್ಯಕ್ತಪಡಿಸಿದೆ.

ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಜ.3ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X