Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಾವಿತ್ರಿಯಾಗಿ ಸಮಂತಾ

ಸಾವಿತ್ರಿಯಾಗಿ ಸಮಂತಾ

ವಾರ್ತಾಭಾರತಿವಾರ್ತಾಭಾರತಿ15 Dec 2016 11:03 PM IST
share
ಸಾವಿತ್ರಿಯಾಗಿ ಸಮಂತಾ

ಜೀವಂತ ದಂತಕತೆಯೆನಿಸಿದ್ದ ತೆಲುಗು ಚಿತ್ರರಂಗದ ಮಹೋನ್ನತ ನಟಿ ಸಾವಿತ್ರಿಯ ಬದುಕು ಈಗ ಬೆಳ್ಳಿತೆರೆಯಲ್ಲಿ ಮೂಡಿಬರಲಿದೆ. ಅತ್ತಾರೆಂಟಿಕಿ ದಾರೆದಿ,ದೂಕುಡು ಮತ್ತಿತರ ಸರಣಿ ಹಿಟ್ ಚಿತ್ರಗಳ ಮೂಲಕ ತೆಲುಗಿನಲ್ಲಿ ಚಿನ್ನದ ಹುಡುಗಿ ಎಂದೇ ಜನಪ್ರಿಯಳಾಗಿರುವ ಸಮಂತಾ, ಸಾವಿತ್ರಿಯ ಪಾತ್ರದಲ್ಲಿ ನಟಿಸಲಿದ್ದಾರೆ. ‘ಯೆವಡೆ ಸುಬ್ರಹ್ಮಣ್ಯಂ’ ಖ್ಯಾತಿಯ ನಾಗ್ ಅಶ್ವಿನ್, ಸಾವಿತ್ರಿಯನ್ನು ನಿರ್ದೇಶಿಸಲಿದ್ದಾರೆ.

ಗತಕಾಲದ ಮೇರು ನಟರಾದ ಎನ್‌ಟಿಆರ್ ಹಾಗೂ ಅಕ್ಕಿನೇನಿ ನಾಗೇಶ್ವರ್ ರಾವ್ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದ ಸಾವಿತ್ರಿ ಅತ್ಯಂತ ಯಶಸ್ವಿ ನಟಿಯೆನಿಸಿದ್ದರು. ಸಾವಿತ್ರಿಯ ಬಯೋಪಿಕ್ ಚಿತ್ರದಲ್ಲಿ ಎನ್‌ಟಿಆರ್ ಹಾಗೂ ಅಕ್ಕಿನೇನಿ ಅವರ ಪಾತ್ರಗಳನ್ನು ಕ್ರಮವಾಗಿ ಜೂನಿಯರ್ ಎನ್‌ಟಿಆರ್ ಹಾಗೂ ನಾಗಚೈತನ್ಯ ನಿರ್ವಹಿಸಲಿದ್ದಾರೆ.

ಈ ವರ್ಷ ಸಮಂತಾ ಅಭಿನಯದ ಮೂರೇ ಚಿತ್ರಗಳು ಬಿಡುಗಡೆಯಾಗಿವೆ. ಸೂಪರ್ ಹಿಟ್ ಚಿತ್ರ ಜನತಾ ಗ್ಯಾರೇಜ್ ಬಳಿಕ ಸಮಂತಾ ಯಾವುದೇ ಹೊಸ ಚಿತ್ರಕ್ಕೆ ಕಾಲ್ ಶೀಟ್ ನೀಡಿಲ್ಲ. ಟಾಲಿವುಡ್‌ನಲ್ಲಿ ತನಗೆ ಅಭಿನಯ ಪ್ರತಿಭೆಗೆ ಅವಕಾಶ ನೀಡುವಂತಹ ಚಿತ್ರಗಳು ದೊರೆಯುತ್ತಿಲ್ಲವೆಂದು ಸಮಂತಾ ಬಹಿರಂಗವಾಗಿ ಅಳಲು ತೋಡಿಕೊಂಡಿದ್ದರು. ಇದೀಗ ಸಾವಿತ್ರಿ ಚಿತ್ರದ ಮೂಲಕ ಸಮಂತಾಗೆ ತನ್ನ ಅಭಿನಯ ಸಾಮರ್ಥ್ಯವನ್ನು ಪ್ರದರ್ಶಿಸಲು ಸದವಕಾಶವೊಂದು ದೊರೆತಿದೆ.

ತೆಳ್ಳಗೆ ಇರುವ ಸಮಂತಾ, ಸಾವಿತ್ರಿಯಾಗಿ ನಟಿಸಲು ತನ್ನ ದೇಹತೂಕವನ್ನು ತುಸುಹೆಚ್ಚಿಕೊಳ್ಳಬೇಕಿದ್ದು, ಇದಕ್ಕಾಗಿ ಆಕೆ ತಯಾರಾಗುತ್ತಿದ್ದಾರಂತೆ. ಈ ಮೊದಲು ಸಾವಿತ್ರಿ ಪಾತ್ರಕ್ಕೆ ನಿತ್ಯಾಮೆನನ್ ಹೆಸರು ಕೇಳಿ ಬಂದಿತ್ತಾದರೂ, ಅಂತಿಮವಾಗಿ ಅದು ಸಮಂತಾ ಪಾಲಾಗಿದೆ. ಬೆಸ್ಟ್ ಆಫ್ ಲಕ್ ಸಮಂತಾ...

share
ವಾರ್ತಾಭಾರತಿ
ವಾರ್ತಾಭಾರತಿ
Next Story
X