Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್‌ರ ಪ್ರಧಾನಿ ಭೇಟಿಯಿಂದ ವಿಪಕ್ಷಗಳ...

ರಾಹುಲ್‌ರ ಪ್ರಧಾನಿ ಭೇಟಿಯಿಂದ ವಿಪಕ್ಷಗಳ ಒಗ್ಗಟ್ಟು ಭಂಗ!

ವಾರ್ತಾಭಾರತಿವಾರ್ತಾಭಾರತಿ16 Dec 2016 6:11 PM IST
share
ರಾಹುಲ್‌ರ ಪ್ರಧಾನಿ ಭೇಟಿಯಿಂದ ವಿಪಕ್ಷಗಳ ಒಗ್ಗಟ್ಟು ಭಂಗ!

ಹೊಸದಿಲ್ಲಿ, ಡಿ.16: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಅವರ ಈ ಭೇಟಿಯಿಂದಾಗಿ ಸಂಸತ್ತಿನ ಚಳಿಗಾಲದ ಅಧಿವೇಶನ ಪೂರ್ತಿ ಜಾಗ್ರತೆಯಿಂದ ಕಾಯ್ದುಕೊಂಡು ಬಂದಿದ್ದ ವಿಪಕ್ಷಗಳ ಒಗ್ಗಟ್ಟಿಗೆ ಭಾರೀ ಧಕ್ಕೆಯಾಗಿದೆ. ನೋಟು ನಿಷೇಧದ ವಿರುದ್ಧ ಪ್ರತಿಭಟಿಸಲು ಇಂದು ವಿಪಕ್ಷಗಳು ರಾಷ್ಟ್ರಪತಿ ಭವನದೆಡೆಗೆ ಮೆರವಣಿಗೆ ಹೊರಡುವ ಸ್ವಲ್ಪ ಮೊದಲು ರಾಹುಲ್‌ರಿಂದ ಈ ಹೊಡೆತ ಬಿದ್ದಿದೆ.

ಎಡಪಕ್ಷಗಳು, ಸಮಾಜವಾದಿ ಪಕ್ಷ, ಬಿಎಸ್ಪಿ, ಎನ್‌ಸಿ ಹಾಗೂ ಡಿಎಂಕೆ ಪಕ್ಷಗಳು, ಸಂಸತ್ ಆವರಣದ ಗಾಂಧಿ ಪ್ರತಿಮೆಯ ಬಳಿಯಿಂದ ಮೆರವಣಿಗೆ ಆರಂಭವಾಗುವ ಸ್ವಲ್ಪ ಮೊದಲು ಒಂದೊಂದಾಗಿ ಪ್ರತಿಭಟನೆಯಿಂದ ಹೊರ ಬಂದವು.

ಇತರ ವಿಪಕ್ಷಗಳನ್ನು ಸೇರಿಸಿಕೊಳ್ಳದೆಯೇ ರಾಹುಲ್, ಪ್ರಧಾನಿಯ ಭೇಟಿಯಾದುದು ಅವುಗಳಿಗೆ ಬೇಸರ ತರಿಸಿದೆ. ಕಾಂಗ್ರೆಸ್‌ನ ಇತರ ಹಿರಿಯ ನಾಯಕರೊಂದಿಗೆ ಪ್ರಧಾನಿಯನ್ನು ಭೇಟಿಯಾದ ರಾಹುಲ್, ಉತ್ತರಪ್ರದೇಶದ ತನ್ನ ಚುನಾವಣಾ ಅಭಿಯಾನದ ವೇಳೆ ಭೇಟಿಯಾಗಿದ್ದ ರೈತರ ದುಃಸ್ಥಿತಿಯನ್ನು ಪ್ರಸ್ತಾವಿಸಿದರು.

ಪ್ರಧಾನಿಯನ್ನು ರಾಹುಲ್ ಭೇಟಿಯಾಗಿರುವ ಬಗ್ಗೆ ಕಿಡಿಗಾರಿರುವ ಬಿಎಸ್ಪಿ ಹಾಗೂ ಉತ್ತರಪ್ರದೇಶದಲ್ಲಿ ಮರು ಆಯ್ಕೆ ಬಯಸುತ್ತಿರುವ ಎಸ್ಪಿ, ತಮಗೆ ರೈತರ ದುಸ್ಥಿತಿಯ ಬಗ್ಗೆ ಕಳವಳವಿಲ್ಲವೇ? ಎಂದು ಪ್ರಶ್ನಿಸಿವೆ.

ನೋಟು ರದ್ದತಿಯ ವಿರುದ್ಧ 15 ವಿಪಕ್ಷಗಳು ಒಂದಾಗಿ ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ಪೂರ್ತಿ ಕೋಲಾಹಲವೆಬ್ಬಿಸಿ, ಯಾವುದೇ ಕಲಾಪ ನಡೆಯದಂತೆ ಮಾಡಿದ್ದವು. ಇಂದು ಅಧಿವೇಶನ ಕೊನೆಗೊಂಡಿದೆ.

ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ವಿಪಕ್ಷಗಳಾದ ಟಿಎಂಸಿ, ಜೆಡಿಯು ಹಾಗೂ ಆರ್‌ಜೆಡಿ ಪಕ್ಷಗಳ ನಿಯೋಗವೊಂದು ನೋಟು ರದ್ದತಿಯ ವಿಷಯದಲ್ಲಿ ರಾಷ್ಟ್ರಪತಿಯನ್ನು ಭೇಟಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ವೈಯಕ್ತಿಕ ಭ್ರಷ್ಟಾಚಾರದ ಬಗ್ಗೆ ತನ್ನಲ್ಲಿ ಮಾಹಿತಿಯಿದೆಯೆಂದು ಎರಡು ದಿನಗಳ ಹಿಂದೆ ಘೋಷಿಸಿದ್ದ ರಾಹುಲ್‌ರ ಬೆನ್ನಿಗೆ ದೃಢವಾಗಿ ನಿಂತಿದ್ದ ಎಡ ಹಾಗೂ ಇತರ ಪಕ್ಷಗಳು ಈಗ ಕಳಚಿಕೊಂಡಿವೆ.

ರಾಹುಲ್‌ರೊಂದಿಗಿನ ತನ್ನ ಭೇಟಿಯ ವೇಳೆ ಪ್ರಧಾನಿ ಮೋದಿ, ತಾವು ಯಾವಾಗಲೂ ಇದೇ ರೀತಿ ಭೇಟಿಯಾಗುತ್ತಿರಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಹೃದಯಗಳು ಭೇಟಿಯಾಗುವುದಿಲ್ಲವಾದರೂ ತಾವು ಕನಿಷ್ಠ ಸಹಕಾರ ನೀಡಿ ಕೈಕುಲುಕ ಬಲ್ಲೆವೆಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X