Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಪಕ್ಷಗಳಿಗೆ ಹೊಸ ವಿನಾಯಿತಿ...

ರಾಜಕೀಯ ಪಕ್ಷಗಳಿಗೆ ಹೊಸ ವಿನಾಯಿತಿ ಪ್ರಕಟಿಸಿದ ಕೇಂದ್ರ ಸರ್ಕಾರ

ವಾರ್ತಾಭಾರತಿವಾರ್ತಾಭಾರತಿ16 Dec 2016 10:14 PM IST
share
ರಾಜಕೀಯ ಪಕ್ಷಗಳಿಗೆ ಹೊಸ ವಿನಾಯಿತಿ ಪ್ರಕಟಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ, ಡಿ.16: ಕಠಿಣ ಕಾನೂನುಗಳ ಮೂಲಕ ಕಾಳಧನಿಕರ ಬೆಂಡೆತ್ತಲು ಕೇಂದ್ರ ಸರಕಾರ ಮುಂದಾಗಿರುವಂತೆಯೇ, ರಾಜಕೀಯ ಪಕ್ಷಗಳ ಹೆಸರಿನಲ್ಲಿ ಅಕ್ರಮ ಹಣವನ್ನು ತಡೆಗಟ್ಟುವ ಸೂಕ್ತ ಕ್ರಮವೊಂದನ್ನು ಜಾರಿಗೆ ತರಲು ಪ್ರಯಾಸ ಪಡುತ್ತಿದೆ.

ರಾಜಕೀಯ ಪಕ್ಷಗಳು ತಮ್ಮ ಬ್ಯಾಂಕ್ ಖಾತೆಯಲ್ಲಿ ಅಮಾನ್ಯಗೊಂಡಿರುವ ಕರೆನ್ಸಿ ನೋಟುಗಳಲ್ಲಿ ಇಡುವ ಠೇವಣಿಗಳಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗುವುದು ಎಂದು ವಿತ್ತ ಸಚಿವಾಲಯದ ಕಾರ್ಯದರ್ಶಿ ಅಶೋಕ್ ಲವಾಸ ತಿಳಿಸಿದ್ದಾರೆ. ಸರಳವಾಗಿ ಹೇಳುವುದಾದರೆ, ರಾಜಕೀಯ ಪಕ್ಷಗಳು ಅಮಾನ್ಯಗೊಂಡಿರುವ ಕರೆನ್ಸಿ ನೋಟುಗಳನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟರೆ ಈ ಬಗ್ಗೆ ಯಾವುದೇ ಪರಿಶೀಲನೆ ನಡೆಸಲಾಗುವುದಿಲ್ಲ ಎಂದು ಸರಕಾರ ತಿಳಿಸಿದಂತಾಗಿದೆ.

ಪಕ್ಷದ ಹೆಸರಿನಲ್ಲಿ ಇರುವ ಬ್ಯಾಂಕ್ ಖಾತೆಗಳಲ್ಲಿ ಹಣ ಠೇವಣಿ ಇಟ್ಟರೆ ತೆರಿಗೆ ವಿನಾಯಿತಿ ಇದೆ. ಆದರೆ ವೈಯಕ್ತಿಕವಾಗಿ ಇಡುವ ಠೇವಣಿಗಳು ಸರಕಾರದ ‘ರಾಡಾರ್’ನಿಂದ ತಪ್ಪಿಸಿಕೊಳ್ಳಲಾರವು. ವೈಯಕ್ತಿಕವಾಗಿ ಇಡಲಾಗುವ ಎಲ್ಲಾ ಠೇವಣಿಗಳ ಮಾಹಿತಿಯೂ ಸರಕಾರಕ್ಕೆ ದೊರಕುತ್ತದೆ ಎಂದು ಆದಾಯ ಇಲಾಖೆಯ ಕಾರ್ಯದರ್ಶಿ ಹಸ್‌ಮುಖ್ ಅಧಿಯಾ ಹೇಳಿದ್ದಾರೆ.

ಆದಾಯತೆರಿಗೆ ಕಾಯ್ದೆಯ ಸೆಕ್ಷನ್ 13ಎ ಪ್ರಕಾರ ರಾಜಕೀಯ ಪಕ್ಷಗಳಿಗೆ ಆದಾಯ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ. ಆಸ್ತಿ ಅಥವಾ ಇತರ ಮೂಲಗಳಿಂದ , ವೈಯಕ್ತಿಕ ದೇಣಿಗೆ ಮುಂತಾದವುಗಳಿಂದ ಬರುವ ಆದಾಯ ಇದರಲ್ಲಿ ಸೇರಿದೆ. ಇಲ್ಲಿ ಯಾವುದೇ ಆರ್ಥಿಕ ಮಿತಿ ಇರುವುದಿಲ್ಲ. ಹೀಗೆ ತೆರಿಗೆ ವಿನಾಯಿತಿ ಪಡೆಯುವ ಆದಾಯದ ಮೊತ್ತವನ್ನು ರಾಜಕೀಯ ಪಕ್ಷಗಳ ಆದಾಯ ಲೆಕ್ಕಹಾಕುವ ವೇಳೆ ಪರಿಗಣಿಸುವಂತಿಲ್ಲ. ಆದರೆ ರಾಜಕೀಯ ಪಕ್ಷಗಳು ತಮ್ಮ ಲೆಕ್ಕಪತ್ರವನ್ನು ಚಾರ್ಟರ್ಡ್ ಅಕೌಂಟೆಂಟ್ ಬಳಿ ಪರಿಶೋಧನೆ ನಡೆಸಿದರೆ ಮಾತ್ರ ಈ ತೆರಿಗೆ ವಿನಾಯಿತಿ ಸೌಲಭ್ಯ ಲಭ್ಯವಾಗುತ್ತದೆ.

ಕೃಷಿಕರು ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸುವ ಸಂದರ್ಭ, ತನ್ನ ಆದಾಯವು 2.5 ಲಕ್ಷಕ್ಕಿಂತ ಕಡಿಮೆ ಇರುವುದಾಗಿ ಫಾರ್ಮ್ 60ರಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಕೃಷಿಕರು ಫಾರ್ಮ್ 60 ನೀಡಿದರೆ, ಪಾನ್ ಕಾರ್ಡ್‌ನ ಅಗತ್ಯವಿಲ್ಲ ಎಂದು ಹಸ್‌ಮುಖ್ ಅಧಿಯಾ ತಿಳಿಸಿದ್ದಾರೆ. ತೆರಿಗೆ ಅಧಿಕಾರಿಗಳು 2.5 ಲಕ್ಷ ರೂ.ಗಿಂತ ಕಡಿಮೆ ಇರುವ ಠೇವಣಿಗಳ ಬಗ್ಗೆ ಅನಗತ್ಯವಾಗಿ ಪರಿಶೀಲನೆ ನಡೆಸಬಾರದು ಎಂದವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X