Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.19ರಂದು ಅಂತರಾಷ್ಟ್ರೀಯ ದರ್ಜೆಯ...

ಡಿ.19ರಂದು ಅಂತರಾಷ್ಟ್ರೀಯ ದರ್ಜೆಯ ಈಜುಕೊಳ ಅಲೋಶಿಯಸ್ ಕಾಲೇಜು ಆವರಣದಲ್ಲಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Dec 2016 10:36 PM IST
share
ಡಿ.19ರಂದು ಅಂತರಾಷ್ಟ್ರೀಯ ದರ್ಜೆಯ ಈಜುಕೊಳ  ಅಲೋಶಿಯಸ್ ಕಾಲೇಜು ಆವರಣದಲ್ಲಿ ಉದ್ಘಾಟನೆ

  ಮಂಗಳೂರು,ಡಿ.16:ನಗರದ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಬಳಸುವ ಮಾದರಿಯ ಅಂತರಾಷ್ಟ್ರೀಯ ದರ್ಜೆಯ ಈಜುಕೊಳವನ್ನು ಡಿ,19ರಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯಧ್ಯಕ್ಷ ವಂ.ಜೆರೋಮ್ ಸ್ಟಾನ್ಲಿಶಿಯಸ್ ಡಿ ಸೋಜ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಅರೋಗ್ಯ ಸಚಿವ ಯು.ಟಿ.ಖಾದರ್ ಹಾಗೂ ಮಿನಿ ಈಜು ಕೊಳವನ್ನು ಯನೆಪೋಯ ವಿಶ್ವ ವಿದ್ಯಾನಿಲಯದ ಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞ ಉದ್ಘಾಟಿಸಲಿದ್ದಾರೆ ಎಂದು ಈಜುಕೊಳ ನಿರ್ಮಾಣ ಸಮಿತಿಯ ಸಂಚಾಲಕ ಎನ್.ಜಿ.ಮೋಹನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

     ಒಟ್ಟು 8.25 ಕೊಟಿ ರೂ ವೆಚ್ಚದಲ್ಲಿ 50ಮೀಟರ್ ಉದ್ದ 20 ಮೀಟರ್ ಅಗಲದ ಎಂಟು ಪಥಗಳ ಈಜುಕೊಳ ನಿರ್ಮಾಣಗೊಂಡಿದೆ. ಪಕ್ಕದಲ್ಲಿ ಚಿಕ್ಕ ಮಕ್ಕಳಿಗಾಗಿ ಮಿನಿ ಈಜುಕೊಳವನ್ನು ನಿರ್ಮಿಸಲಾಗಿದೆ ಅದನ್ನು ಇದೇ ಸಂದರ್ಭದಲ್ಲಿ ಉದ್ಘಾಟಿ ಸಲಾಗುವುದು.

        ಮಿನಿ ಈಜುಕೊಳಕ್ಕೆ ಹಳೆ ವಿದ್ಯಾರ್ಥಿ ಸಂಘ 26ಲಕ್ಷ ರೂ ದೇಣಿಗೆ ನೀಡಿದೆ.ಯುಜಿಸಿ ಒಂದು ಕೋಟಿ ರೂ ಅನುದಾನ ನೀಡಿದೆ.ಸುಸಜ್ಜಿತ ಈಜು ಕೊಳದಲ್ಲಿ ನೀರಿನ ಶುದ್ದೀಕರಣಕ್ಕಾಗಿ ಓರೆನ್ ಶುದ್ಧೀಕರಣ ವ್ಯವಸ್ಥೆ ,ಗ್ಯಾಲರಿ,ವಿಶ್ರಾಂತಿ ಕೊಠಡಿ,ವಾಹನ ನಿಲುಗಡೆ ಪ್ರದೇಶವನ್ನು ನಿರ್ಮಿಸಲಾಗಿದೆ.ಈ ಈಜುಕೊಳದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯನ್ನು ಹಮ್ಮಿಕೊಳ್ಳಲು ಅನುಕೂಲವಾಗುವಂತೆ ಮೂಲ ಸೌಕರ್ಯಗಳನ್ನು ಒಳಗೊಂಡಿದೆ ಎಂದು ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ವಂ.ಸ್ವೀಬರ್ಟ್ ಡಿ ಸಿಲ್ವ ತಿಳಿಸಿದ್ದಾರೆ.

        ಡಿ.19ರಂದು ಸಂಜೆ 3.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದ ಬಳಿಕ ಈಜುಕೊಳ ಮುಂದೆ ನಿಗದಿ ಪಡಿಸಿದ ದಿನಾಂಕದಿಂದ ಬೆಳಗ್ಗೆ 6.30ರಿಂದ ರಾತ್ರಿ 8.45ರವರೆಗೆ ವಿವಿಧ ಬ್ಯಾಚ್‌ಗಳಲ್ಲಿ ಈಜು ತರಬೇತಿಗೆ ಅವಕಾಶ ಲ್ಪಿಸಲಾಗುವುದು ನಡೆಯಲಿದೆ. ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಈಜುಪಟುಗಳನ್ನು ರೂಪಿಸಲು ಈ ಈಜುಕೊಳ ಸಹಕಾರಿಯಾಗಬಹುದು.ಸಾರ್ವಜನಿಕರಿಂದಲೂ ಸದಸ್ಯತ್ವ ಶುಲ್ಕ ಸಂಗ್ರಹಿಸಿ ಈಜು ತರಬೇತಿಯನ್ನು ನೀಡಲಾಗುವುದು.ಅತ್ಯಂತ ಆಧುನಿಕ ರೀತಿಯ ನೀರಿನ ಶುದ್ಧೀಕರಣ ವ್ಯವಸ್ಥೆ ಹೊಂದಿರುವ ದೇಶದ ಕೆಲವೇ ಈಜುಕೊಳಗಳಲ್ಲಿ ಇದು ಒಂದಾಗಿದೆ.ಪೂರ್ಣಾವಧಿಯಲ್ಲಿ ಲೈಫ್ ಗಾರ್ಡ್‌ಗಳು ಈಜುಕೊಳದ ಬಳಿ ಇರುತ್ತಾರೆ ಎಂದು ಸಂಚಾಲಕ ಮೋಹನ್ ತಿಳಿಸಿದ್ದಾರೆ.

 ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಶಾಸಕ ಅಭಯ ಚಂದ್ರ ಜೈನ್,ಜೆ.ಆರ್.ಲೋಬೊ,ಗಣೇಶ್ ಕಾರ್ಣಿಕ್,ಐವನ್ ಡಿ ಸೋಜ, ರೆಕ್ಟರ್ ವಂ,
ಡಿಯೋನಿಸಿಯಸ್ ವಾಝ್, ಹಾಗೂ ಯುಜಿಸಿ ಸೇರಿದಂತೆ ಇತರ ಸಂಸ್ಥೆಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೋಹನ್ ತಿಳಿಸಿದ್ದಾರೆ.
 ಸುದ್ದಿಗೋಷ್ಠಿಯಲ್ಲಿ ವಂ.ರಿಚಾರ್ಡ್ ಗೊನ್ಸಾಲ್ವೀಸ್,ಸಂತ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಂತ ಅಲೊಶಿಯಸ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಅರ್ಚಿಬಾಲ್ಡ್ ಮಿನೇಜಸ್ ,ಕಾರ್ಯದರ್ಶಿ ನವೀನ್ ಮಸ್ಕರೆನಸ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X