Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ಯಾಂಪಸ್‍ಗಳಲ್ಲಿ ಮಾದಕ ಜಾಲ: ಕ್ರಮಕ್ಕೆ...

ಕ್ಯಾಂಪಸ್‍ಗಳಲ್ಲಿ ಮಾದಕ ಜಾಲ: ಕ್ರಮಕ್ಕೆ ಆಗ್ರಹಿಸಿ ಎಸ್‍ಐಓ ಮನವಿ

ವಾರ್ತಾಭಾರತಿವಾರ್ತಾಭಾರತಿ17 Dec 2016 6:01 PM IST
share
ಕ್ಯಾಂಪಸ್‍ಗಳಲ್ಲಿ  ಮಾದಕ ಜಾಲ: ಕ್ರಮಕ್ಕೆ ಆಗ್ರಹಿಸಿ  ಎಸ್‍ಐಓ ಮನವಿ

ಮಂಗಳೂರು, ಡಿ.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹಲವಾರು ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‍ಐಓ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ದ.ಕ. ಜಿಲ್ಲಾಧಿಕಾರಿ ಕೆ.ಜಿ.ಜಗದೀಶ್ ರವರಿಗೆ ಮನವಿ ಸಲ್ಲಿಸತು.

ಜಿಲ್ಲೆಯಲಿ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ಜಾಲವು ಇಂದು ಕ್ಯಾಂಪಸ್ ನೊಳಗೆ ಕಾಲಿಟ್ಟಿದ್ದು, ವಿದ್ಯಾರ್ಥಿ ಸಮುದಾಯವನ್ನು ತೀವ್ರವಾಗಿ ಬಾಧಿಸಿರುವುದು ಎಸ್‍ಐಓ ಗಮನಿಸಿದೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಕಳೆದ ಎರಡು ವಾರಗಳಿಂದ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ವರದಿಯಾಗಿರುವ ಹಲವು ಪ್ರಕರಣಗಳು ಸಾಕ್ಷಿಯಾಗಿವೆ.

ಕ್ಯಾಂಪಸ್, ಹಾಸ್ಟೆಲ್, ಅತಿಥಿಗೃಹ(ಪಿಜಿ) ಮುಂತಾದ ಕಡೆಗಳಲ್ಲಿ ಪರಿಸ್ಥಿತಿ ಗಂಭೀರಮಟ್ಟಕ್ಕೆ ತಲುಪುತ್ತಿದೆ. ಈ ಕುರಿತು ಶೀಘ್ರವಾಗಿ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯ ಕ್ಯಾಂಪಸ್‍ಗಳು ಮತ್ತು ವಿದ್ಯಾರ್ಥಿ-ಯುವ ಸಮುದಾಯವು ಸಮಾಜಕ್ಕೆ ಮಾರಕವಾಗುವ ಸ್ಥಿತಿಯನ್ನು ಎದುರಿಸಬೇಕಾದೀತು ಎಂದು ಎಸ್ ಐ ಓ ಮನವಿಯಲ್ಲಿ ಎಚ್ಚರಿಸಿದೆ. ಅಲ್ಲದೆ, ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ, ಎಸ್‍ಐಓವು 9 ಬೇಡಿಕೆಗಳನ್ನು ಮುಂದಿಡುತ್ತಿದ್ದು, ಈ ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿದೆ.
1. ಮಾದಕ ಪದಾರ್ಥಗಳ ಮಾರಾಟ ಜಾಲದ ಮೂಲವನ್ನು ಪತ್ತೆ ಹಚ್ಚಿ, ಶೀಘ್ರವೇ ಅದರ ನಿರ್ಮೂಲನೆ ಮಾಡಬೇಕು.

2. ಮಂಗಳೂರು ನಗರದ ಹೊರವಲಯದಿಂದ ಕ್ಯಾಂಪಸ್‍ಗಳಿಗೆ ಮಾದಕ ಪದಾರ್ಥಗಳನ್ನು ತಲುಪಿಸುವ ಮಧ್ಯವರ್ತಿಗಳ ಜಾಲವನ್ನು ತಡೆಯಬೇಕು ಮತ್ತು ಅವರನ್ನು ಕಾನೂನು ರೀತಿಯಲ್ಲಿ ಶಿಕ್ಷಿಸಬೇಕು.

3. ಕ್ಯಾಂಪಸ್‍ಗಳಲ್ಲಿರುವ Anti Drug Cell ಅನ್ನು ಬಲಪಡಿಸಬೇಕು ಮತ್ತು ಅದರ ಕಾರ್ಯ ಚಟುವಟಿಕೆಯನ್ನು ಫಲಪ್ರದಗೊಳಿಸುವಂತೆ ನಿಗಾ ವಹಿಸಬೇಕು.

4. ಕೇರಳ ಮಾದರಿ Anti Drug ಪೊಲೀಸ್ ಕಾರ್ಯಾಚರಣೆಯನ್ನು(ವಿದ್ಯಾರ್ಥಿಗಳ ಹೆಸರು ಬಯಲು ಮಾಡದೆ ಕ್ಯಾಂಪಸ್ ಮುಖ್ಯಸ್ಥರು ಮತ್ತು ವಿದ್ಯಾರ್ಥಿಯ ಪೋಷಕರ ಮಧ್ಯಸ್ಥಿಕೆಯಲ್ಲಿ ಅದನ್ನು ಪರಿಹರಿಸಬೇಕು.) ನಡೆಸಬೇಕು.

5. ಮಾದಕ ವ್ಯಸನಿಗಳ ಪುನರ್ವಸತಿಯ ಕುರಿತು ಪೊಲೀಸ್ ಇಲಾಖೆಯು ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಾಗೃತಿಗಾಗಿ ನಿರಂತರ ಶ್ರಮಿಸಬೇಕು.

6. ಜಿಲ್ಲೆಯಾದ್ಯಂತ ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಈ ಅಪರಾಧದ ಬಗೆಗಿನ ಕಾನೂನು ಜಾಗೃತಿಯನ್ನು ಮೂಡಿಸಬೇಕು.

7. ನಗರದಲ್ಲಿ ಮತ್ತು ನಗರದ ಹೊರವಲಯದಲ್ಲಿ ಮಾದಕ ವ್ಯಸನದ ಪ್ರಭಾವ ಹೆಚ್ಚಾಗುತ್ತಿದೆಯೋ ಅಲ್ಲಿ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕ ಮತ್ತು ವಿದ್ಯಾರ್ಥಿ ನಾಯಕರ ಸಭೆಯನ್ನು ಆಯೋಜಿಸಿ ಪರಿಹಾರ ಕಾರ್ಯಗಳ ಕುರಿತು ಚರ್ಚಿಸಬೇಕು.

8. ಶಾಲಾ ಕಾಲೇಜಿನ 100 ಮೀಟರ್ ಅಂತರದಲ್ಲಿ ಬೀಡಿ, ಸಿಗರೇಟು, ಗುಟ್ಕಾ, ಮದ್ಯಪಾನ ಮುಂತಾದವುಗಳ ನಿಷೇಧ ಕಾನೂನು ಇದ್ದರೂ ಹಲವೆಡೆ ಅದರ ಮಾರಾಟ ನಡೆಯುತ್ತಿರುವುದು ಗಮನಿಸಬಹುದಾಗಿದೆ ಇದನ್ನು ಶೀಘ್ರವಾಗಿ ತಡೆಗಟ್ಟವಂತೆ ಮಾಡಬೇಕು.

9. ಜಿಲ್ಲೆಯಾದ್ಯಂತ ವ್ಯಾಪಕವಾಗುತ್ತಿರುವ ಮಾದಕ ವ್ಯಸನದ ಪ್ರಭಾವದ ಕುರಿತು ಕಾನೂನು ತಜ್ಞರು, ಸಮಾಜ ಸೇವಕರು, ಸಂಶೋಧನಾ ವಿದ್ಯಾಥಿಗಳು ಮತ್ತು ಬುದ್ಧಿ ಜೀವಿಗಳನ್ನೊಳಗೊಂಡ ಒಂದು ತಂಡದಿಂದ ಜಿಲ್ಲೆಯ ಅಧ್ಯಯನ, ಪರಿಸ್ಥಿಯ ಅವಲೋಕನ ಮತ್ತು ಪರಿಹಾರ ಕಾರ್ಯಗಳ ಕುರಿತು ತೀರ್ಮಾನಗಳನ್ನು ಕೈಗೊಳ್ಳಬೇಕು.

ಎಸ್ ಐ ಓ ದ.ಕ. ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಮುಹಮ್ಮದ್ ಇರ್ಷಾದ್ ವೇಣೂರ್, ಮಂಗಳೂರು ಶಾಖೆ ಅಧ್ಯಕ್ಷ ಮುಂಝಿರ್ ಕಂದಕ್, ಮಿಹಾಲ್ ಸಯೀದ್, ಅಫ್ನಾನ್ ಹಸನ್ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X