Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕಾರವಾರ: ತಳ್ಳುಗಾಡಿ ವ್ಯಾಪಾರಕ್ಕೆ...

​ಕಾರವಾರ: ತಳ್ಳುಗಾಡಿ ವ್ಯಾಪಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ17 Dec 2016 10:55 PM IST
share

ಕಾರವಾರ, ಡಿ.17: ನಗರದ ಪಿಕಳೆ ಆಸ್ಪತ್ರೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ತಳ್ಳುವ ಗೂಡಂಗಡಿಗಳನ್ನಿಟ್ಟುಕೊಂಡು ಜೀವನ ನಿರ್ವಹಣೆ ಮಾಡುತ್ತಿರುವವರ ತಳ್ಳುಗಾಡಿಗಳನ್ನು, ಡ್ರೈವ್ ಇನ್ ಹೊಟೇಲ್ ಎದುರು ನಿರ್ಮಿಸಿರುವ ಫುಡ್‌ಕೋರ್ಟ್‌ಗೆಸ್ಥಳಾಂತರ ಮಾಡಲು ಜಿಲ್ಲಾಡಳಿತ ಯೋಜಿಸಿದೆ. ಆದರೆ ತಮ್ಮನ್ನು ಇರುವ ಸ್ಥಳದಲ್ಲೇ ತಳ್ಳುಗಾಡಿಗಳನ್ನು ನಡೆಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ತಳ್ಳುಗಾಡಿ ವ್ಯಾಪಾರಸ್ಥರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.


ತಳ್ಳುವ ಗೂಡಂಗಡಿಕಾರರು ಆಸ್ಪತ್ರೆ, ಸರಕಾರಿ ಕಚೇರಿ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಎಳನೀರು, ತಂಪು ಪಾನೀಯ ಇನ್ನಿತರ ಅಗತ್ಯದ ವಸ್ತುಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಆದರೆ ರಸ್ತೆ ಪಕ್ಕದಿಂದ ಕಡಲ ತೀರದಲ್ಲಿರುವ ಫುಡ್‌ಕೋರ್ಟ್‌ಗೆ ಸ್ಥಳಾಂತರ ಮಾಡಿದರೆ ತಳ್ಳುಗಾಡಿ ವ್ಯಾಪಾರಿಗಳಿಗೆ ವ್ಯಾಪಾರವಿಲ್ಲದಂತಾಗುತ್ತದೆ ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. ಬೀದಿ ಬದಿ ವ್ಯಾಪಾರಿಗಳನ್ನು ಕಡಲತೀರದಲ್ಲಿ ವ್ಯಾಪಾರ ನಡೆಸಲು ಸೂಚಿಸಲಾಗಿದೆ.

ಆದರೆ ಅಲ್ಲಿ ವ್ಯಾಪಾರ ನಡೆಸಲು ಜನರೇ ಇರುವುದಿಲ್ಲ. ಕಡಲ ತೀರದಲ್ಲಿ ಬಿಸಿಲ ಧಗೆಗೆ ಬೆಳಗ್ಗೆಯಿಂದ ಸಂಜೆವರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರಾಗಲಿ, ಪ್ರವಾಸಿಗರಾಗಲಿ ಆಗಮಿಸುವುದಿಲ್ಲ. ಸಂಜೆ ಕೆಲ ಹೊತ್ತು ಬಿಟ್ಟರೆ ಜನಸಂಪರ್ಕ ತೀರಾ ಕಡಿಮೆ ಇರುತ್ತದೆ.

ಅಲ್ಲದೆ ತುಂಬಾ ಬಿಸಿಲು ಇರುವುದರಿಂದ ಮತ್ತು ಸಮುದ್ರ ತೀರದಲ್ಲಿರುವುದರಿಂದ ವ್ಯಾಪಾರ ನಡೆಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ಮಾನವಿಯತೆ ನೆಲೆಯಲ್ಲಿ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸಿ, ಇದ್ದ ಸ್ಥಳದಲ್ಲಿಯೇ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸ್ವಚ್ಛವಾಗಿಟ್ಟುಕೊಂಡು ವ್ಯಾಪಾರ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಇನ್ನೊಮ್ಮೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದು ತಳ್ಳುಗಾಡಿ ವ್ಯಾಪಾರಿಗಳ ಆಗ್ರಹವಾಗಿದೆ.


ಮನವಿ ಸಲ್ಲಿಸುವ ನಿಯೋಗದಲ್ಲಿ ಕಾಶಿನಾಥ ಪತ್ರೆಕರ್, ನಾರಾಯಣ ಗೌಡ, ಗುರು. ವಿ. ನಾಯ್ಕ, ಮಂಜುಳಾ, ವರಲಕ್ಷ್ಮೀ, ಜಯಲಕ್ಷ್ಮೀ, ಪಾಂಡುರಂಗ ನಾಯ್ಕ, ವಿರೇಶ ಬೆಟಗೇರಿ, ಧರ್ಮೇಂದ್ರ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X