Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ವಿರುದ್ಧ ಮಮತಾ, ಕೇಜ್ರಿವಾಲ್ ದಾಳಿ

ಮೋದಿ ವಿರುದ್ಧ ಮಮತಾ, ಕೇಜ್ರಿವಾಲ್ ದಾಳಿ

ರಾಜಕೀಯ ಪಕ್ಷಗಳ ಕಪ್ಪು ಹಣಕ್ಕೆ ತೆರಿಗೆ ವಿನಾಯಿತಿ

ವಾರ್ತಾಭಾರತಿವಾರ್ತಾಭಾರತಿ17 Dec 2016 11:48 PM IST
share

ಹೊಸದಿಲ್ಲಿ,ಡಿ.17: ರಾಜಕೀಯ ಪಕ್ಷಗಳು ಬ್ಯಾಂಕುಗಳಲ್ಲಿ ಹಳೆಯ ನೋಟುಗಳಲ್ಲಿ ಜಮೆ ಮಾಡಿರುವ ಮೊತ್ತಕ್ಕೆ ತೆರಿಗೆ ವಿನಾಯಿತಿಯನ್ನು ನೀಡುವ ಮೋದಿ ಸರಕಾರದ ನಿರ್ಧಾರವನ್ನು ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಪ್ರಶ್ನಿಸಿದ್ದಾರೆ.

ಸರಕಾರವು ತನ್ನ ನಿರ್ಧಾರವನ್ನು ಈ ಸಮಯದಲ್ಲಿ ಪ್ರಕಟಿಸಿರುವುದು ‘ಗುಪ್ತ ಉದ್ದೇಶ’ವನ್ನು ಸೂಚಿಸುತ್ತದೆ ಎಂದು ಮಮತಾ ಹೇಳಿದರು.
ನೋಟು ರದ್ದತಿ ಎಂದರೆ ಅದು ಎಲ್ಲರಿಗೂ ಅನ್ವಯಿಸುತ್ತದೆ ಮತ್ತು ನಿಯಮಗಳು ಎಲ್ಲರಿಗೂ ಒಂದೇ ಎನ್ನುವುದನ್ನು ಅವರು ಸ್ಪಷ್ಟಪಡಿಸುವ ಅಗತ್ಯವಿದೆ. ಜನಸಾಮಾನ್ಯರಿಗೆ ಮತ್ತು ರಾಜಕೀಯ ಪಕ್ಷಗಳಿಗೆ ನಿಯಮಗಳು ಬೇರೆಯೇ ಎಂದು ಸರಣಿಟ್ವೀಟ್‌ಗಳಲ್ಲಿ ಪ್ರಶ್ನಿಸಿರುವ ಅವರು, ಗುಪ್ತ ಉದ್ದೇಶವೊಂದು ಇರಬಹುದು ಎನ್ನುವುದನ್ನು ಈ ನಿರ್ಧಾರವನ್ನು ಪ್ರಕಟಿಸಿರುವ ಸಮಯವು ಸೂಚಿಸುತ್ತದೆ. ಅವರು ಒಂದು ರಾಜಕೀಯ ಪಕ್ಷದ ಕಾರ್ಯಕರ್ತರಿಗೆ ಗುಪ್ತಸಂದೇಶ ನೀಡಲು ಪ್ರಯತ್ನಿಸುತ್ತಿದ್ದಾರೆಯೇ? ಈಗೇಕೆ ಇಂತಹ ಗೊಂದಲ ಮೂಡಿಸುವ ಮತ್ತು ದಾರಿ ತಪ್ಪಿಸುವ ಹೇಳಿಕೆಗಳು ಹೊರಬರುತ್ತಿವೆ? ಅವರು ಸ್ಪಷ್ಟನೆಯನ್ನು ನೀಡಬೇಕು ಎಂದಿದ್ದಾರೆ.
 ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳ ತನಿಖೆಗಾಗಿ ಆಯೋಗವೊಂದನ್ನು ನೇಮಿಸಬೇಕೆಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ. ಕೇಂದ್ರದ ತೆರಿಗೆ ವಿನಾಯಿತಿ ನಿರ್ಧಾರಕ್ಕೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಡುವೆ ಭೇಟಿಗೂ ಸಂಬಂಧವಿದೆ ಎಂದು ಅವರು ಹೇಳಿದ್ದಾರೆ.
ಜನಸಾಮಾನ್ಯರು 2.5 ಲ.ರೂ.ಗಳನ್ನು ಠೇವಣಿ ಮಾಡಿದರೆ ಅದನ್ನು ತನಿಖೆ ಮಾಡಲಾಗುತ್ತದೆ. ಆದರೆ ಸರಕಾರದ ಈ ನಿರ್ಧಾರದ ಬಳಿಕ ರಾಜಕೀಯ ಪಕ್ಷಗಳು 2,500 ಕೋ.ರೂ.ಠೇವಣಿ ಮಾಡಿದರೂ ಆ ಬಗ್ಗೆ ತನಿಖೆ ನಡೆಯುವುದಿಲ್ಲ. ಇದು ತಪ್ಪು ಎಂದಿರುವ ಕೇಜ್ರಿವಾಲ್, ಕಳೆದ ಐದು ವರ್ಷಗಳಲ್ಲಿ ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳ ಬಗ್ಗೆ ತನಿಖೆ ನಡೆಸಲು ಆಯೋಗವೊಂದನ್ನು ರಚಿಸುವಂತೆ ನಾವು ಆಗ್ರಹಿಸುತ್ತೇವೆ ಎಂದಿದ್ದಾರೆ.
ನೋಟು ರದ್ದತಿಯ ಬಳಿಕ ಎಲ್ಲ ರಾಜಕೀಯ ಪಕ್ಷಗಳು ಬ್ಯಾಂಕುಗಳಲ್ಲಿ ಜಮೆ ಮಾಡಿರುವ ಹಣದ ವಿವರಗಳನ್ನು ಬಹಿರಂಗಗೊಳಿಸುವಂತೆ ಕೇಂದ್ರವನ್ನು ಆಗ್ರಹಿಸಿದ ಅವರು, ತೆರಿಗೆ ವಿನಾಯಿತಿಗಾಗಿ ‘‘ 20,000 ರೂ.ಗಿಂತ ಕಡಿಮೆ ದೇಣಿಗೆ ಮಿತಿ ’’ಯನ್ನು ತೆಗೆದುಹಾಕುವಂತೆ ಸೂಚಿಸಿದರು. ಪಕ್ಷಗಳು ಸ್ವೀಕರಿಸುವ ಪ್ರತಿಪೈಸೆಯೂ ಘೋಷಣೆಯಾಗಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X