Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಭಾರತದ ಶಿಕ್ಷಣ ಸಮಸ್ಯೆಉಲ್ಬಣ

ಭಾರತದ ಶಿಕ್ಷಣ ಸಮಸ್ಯೆಉಲ್ಬಣ

ಪ್ರತಿ ಆರು ಬೋಧಕ ಹುದ್ದೆಗಳಲ್ಲಿ ಒಂದು ಖಾಲಿ!

ವಾರ್ತಾಭಾರತಿವಾರ್ತಾಭಾರತಿ18 Dec 2016 3:13 PM IST
share
ಭಾರತದ ಶಿಕ್ಷಣ ಸಮಸ್ಯೆಉಲ್ಬಣ

ದೇಶದ 36 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟಾರೆಯಾಗಿ ನೋಡಿದರೆ, ಜಾರ್ಖಂಡ್ ರಾಜ್ಯದ ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಕೊರತೆ ವ್ಯಾಪಕವಾಗಿದೆ. ಅಲ್ಲಿನ ಪ್ರೌಢಶಾಲೆಗಳಲ್ಲಿ ಶೇ.70ರಷ್ಟು ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಶೇ.38ರಷ್ಟು ಶಿಕ್ಷಕರ ಕೊರತೆ ಇದೆ.

ದೇಶದಲ್ಲಿ ಶಿಕ್ಷಣ ರಂಗ ಹಲವು ಸಮಸ್ಯೆಗಳ ಗೂಡಾಗಿದ್ದು, ಸರಕಾರಿ ಶಾಲೆಗಳ ಸ್ಥಿತಿಯಂತೂ ಅಧೋಗತಿ. ಲೋಕಸಭೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಅವರು ಇತ್ತೀಚೆಗೆ ಲೋಕಸಭೆಗೆ ನೀಡಿದ ಮಾಹಿತಿ ಸರಕಾರಿ ಶಾಲೆಗಳ ವಾಸ್ತವ ಸ್ಥಿತಿಗೆ ಕನ್ನಡಿ ಹಿಡಿಯುತ್ತದೆ. ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶೇ.18 ಹಾಗೂ ಸರಕಾರಿ ಪ್ರೌಢಶಾಲೆಗಳಲ್ಲಿ ಶೇ.15ರಷ್ಟು ಶಿಕ್ಷಕ ಹುದ್ದೆಗಳು ಖಾಲಿ ಇವೆ ಎಂದು ಜಾವಡೇಕರ್ ಬಹಿರಂಗಪಡಿಸಿದ್ದಾರೆ.

ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಸರಕಾರಿ ಶಾಲೆಗಳಲ್ಲಿ ಪ್ರತಿ ಆರು ಶಿಕ್ಷಕ ಹುದ್ದೆಗಳ ಪೈಕಿ ಒಂದು ಖಾಲಿ. ದೇಶದಲ್ಲಿ ಒಟ್ಟಾರೆಯಾಗಿ ಹತ್ತು ಲಕ್ಷಕ್ಕೂ ಹೆಚ್ಚು ಶಿಕ್ಷಕ ಹುದ್ದೆಗಳು ಖಾಲಿ ಬಿದ್ದಿವೆ. ಇದು ದೇಶದ ಸರಾಸರಿ ಖಾಲಿ ಹುದ್ದೆಗಳ ವಿವರ. ಇದರ ಒಳಹೊಕ್ಕು ನೋಡಿದರೆ, ಕಡಿಮೆ ಪ್ರಮಾಣದ ಸಾಕ್ಷರತೆ ಇರುವ ರಾಜ್ಯಗಳಲ್ಲಿ ಶಿಕ್ಷಕರ ಕೊರತೆ ಇನ್ನಷ್ಟು ಹೆಚ್ಚು. 2015-16ನೆ ಸಾಲಿನ ಶಿಕ್ಷಣ ಇಲಾಖೆಯ ವರದಿ ಪ್ರಕಾರ, ದೇಶದಲ್ಲಿ ಶಾಲೆಗೆ ತೆರಳುವ 26 ಕೋಟಿ ಮಕ್ಕಳ ಪೈಕಿ ಶೇ.55ರಷ್ಟು ಮಂದಿ ಸರಕಾರಿ ಶಾಲೆೆಗಳಲ್ಲಿ ಕಲಿಯುತ್ತಿದ್ದಾರೆ. ಶೇ.45ರಷ್ಟು ಮಕ್ಕಳು ಖಾಸಗಿ ಶಾಲೆಗಳಿಗೆ ಹೋಗುತ್ತಾರೆ.

ದೇಶದ 36 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟಾರೆ ಯಾಗಿ ನೋಡಿದರೆ, ಜಾರ್ಖಂಡ್ ರಾಜ್ಯದ ಪ್ರೌಢ ಶಿಕ್ಷಣ ವ್ಯವಸ್ಥೆಯಲ್ಲಿ ಶಿಕ್ಷಕರ ಕೊರತೆ ವ್ಯಾಪಕವಾಗಿದೆ. ಅಲ್ಲಿನ ಪ್ರೌಢಶಾಲೆಗಳಲ್ಲಿ ಶೇ.70ರಷ್ಟು ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಶೇ.38ರಷ್ಟು ಶಿಕ್ಷಕರ ಕೊರತೆ ಇದೆ.

ಉತ್ತರ ಪ್ರದೇಶದ ಸೆಕೆಂಡರಿ ಶಾಲೆಗಳ ಶಿಕ್ಷಕ ಹುದ್ದೆಗಳಲ್ಲಿ ಶೇ.50ರಷ್ಟು ಖಾಲಿ ಇದ್ದರೆ, ಬಿಹಾರ ಹಾಗೂ ಗುಜರಾತ್‌ನಲ್ಲಿ ಶೇ.33ರಷ್ಟು ಶಿಕ್ಷಕ ಹುದ್ದೆಗಳು ಭರ್ತಿಯಾಗಿಲ್ಲ.

 ಶಿಕ್ಷಕರ ಕೊರತೆಗೆ ಮುಖ್ಯ ಕಾರಣ ಎಂದರೆ, ನಿಯಮಿತವಾಗಿ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳದಿರುವುದು. ಹುದ್ದೆಗಳಿಗೆ ಮಂಜೂರಾತಿ ನೀಡದಿರುವುದು, ಗೊಂದಲಕಾರಿ ನೇಮಕಾತಿ ನೀತಿ, ಕೆಲ ವಿಷಯಗಳಿಗೆ ತಜ್ಞ ಶಿಕ್ಷಕರ ಕೊರತೆ ಹಾಗೂ ಸಣ್ಣ ಶಾಲೆಗಳಿರುವುದರಿಂದ ಇರುವ ಶಿಕ್ಷಕರು ಹರಿದು ಹಂಚಿ ಹೋಗಿರುವುದು ಕೂಡಾ ಇದಕ್ಕೆ ಕಾರಣವಾಗಿದೆ. ದೇಶದಲ್ಲಿ ಸುಮಾರು 60 ಲಕ್ಷ ಶಿಕ್ಷಕ ಹುದ್ದೆಗಳು ಸರಕಾರಿ ಶಾಲೆಗಳಲ್ಲಿದ್ದು, ಈ ಪೈಕಿ ಒಂಬತ್ತು ಲಕ್ಷ ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಹಾಗೂ ಪ್ರೌಢಶಾಲೆಗ ಳಲ್ಲಿ ಒಂದು ಲಕ್ಷದಷ್ಟು ಶಿಕ್ಷಕ ಹುದ್ದೆಗಳು ಖಾಲಿ ಬಿದ್ದಿವೆ. ಅಂದರೆ ಒಟ್ಟು 10 ಲಕ್ಷ ಶಿಕ್ಷಕ ಹುದ್ದೆಗಳು ಖಾಲಿ. ಹಿಂದಿ ಮಾತನಾಡುವ ದೊಡ್ಡ ರಾಜ್ಯಗಳಾದ ಬಿಹಾರ, ಜಾರ್ಖಂಡ್ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 33 ಕೋಟಿ ಮಂದಿ ವಾಸವಿದ್ದಾರೆ. ದೇಶದ ಒಟ್ಟು ಶಿಕ್ಷಕರ ಕೊರತೆಯಲ್ಲಿ ಈ ಭಾಗದ ಪಾಲು ಶೇ.25ರಷ್ಟು. ಅಂದರೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಸೇರಿ ಈ ಭಾಗದಲ್ಲಿ ಶೇ.26ರಷ್ಟು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ತದ್ವಿರುದ್ಧವಾಗಿ ಗೋವಾ, ಒಡಿಶಾ ಹಾಗೂ ಸಿಕ್ಕಿಂ ರಾಜ್ಯಗಳಲ್ಲಿ ಯಾವ ಪ್ರಾಥಮಿಕ ಶಿಕ್ಷಕ ಹುದ್ದೆಯೂ ಖಾಲಿ ಇಲ್ಲ.

ಅಸ್ಸಾಂ, ಹಿಮಾಚಲ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕ್ರಮವಾಗಿ ಶೇ.3.9, 3.9 ಮತ್ತು 2ರಷ್ಟು ಹುದ್ದೆಗಳು ಮಾತ್ರ ಖಾಲಿ ಇವೆ. ಅಂದರೆ ಇಲ್ಲಿ ಶಿಕ್ಷಕ ಹುದ್ದೆಗಳುಬಹುತೇಕ ಭರ್ತಿಯಾಗಿವೆ. ಅಂತೆಯೇ ಮಿಜೋರಾಂ ಹಾಗೂ ಸಿಕ್ಕಿಂನ ಪ್ರೌಢಶಾಲೆ ಗಳಲ್ಲಿ ಯಾವ ಶಿಕ್ಷಕ ಹುದ್ದೆಯೂ ಖಾಲಿ ಇಲ್ಲ. ಒಟ್ಟಾರೆಯಾಗಿ ಹೇಳುವುದಾದರೆ, ಹಿಂದಿ ಮಾತನಾಡುವ ಪ್ರದೇಶಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಇಡೀ ದೇಶದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಇಲ್ಲದ ಏಕೈಕ ರಾಜ್ಯವೆಂದರೆ ಸಿಕ್ಕಿಂ.

ಹಿಂದಿ ಮಾತನಾಡುವ ಉತ್ತರ ರಾಜ್ಯಗಳ ದೊಡ್ಡ ನಗರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ, ಅಂದರೆ ದಿಲ್ಲಿ ಹಾಗೂ ಚಂಡಿಗಡದಂಥ ಪ್ರದೇಶಗಳಲ್ಲಿ ಕೂಡಾ ದೊಡ್ಡ ಪ್ರಮಾಣದಲ್ಲಿ ಶಿಕ್ಷಕರ ಕೊರತೆ ಇರುವುದು, ಹಿಂದಿ ಪ್ರದೇಶಗಳ ಸ್ಥಿತಿಗೆ ಕನ್ನಡಿ ಹಿಡಿಯುತ್ತದೆ. ಎರಡೂ ನಗರಗಳಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶೇ.25ರಷ್ಟು ಶಿಕ್ಷಕ ಹುದ್ದೆಗಳು ಖಾಲಿ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X