Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಯಾಲಿಸಿಸ್‌ನಲ್ಲಿರುವ ರ್ಯಾಗಿಂಗ್ ಬಲಿಪಶು

ಡಯಾಲಿಸಿಸ್‌ನಲ್ಲಿರುವ ರ್ಯಾಗಿಂಗ್ ಬಲಿಪಶು

ವಾರ್ತಾಭಾರತಿವಾರ್ತಾಭಾರತಿ18 Dec 2016 4:25 PM IST
share
ಡಯಾಲಿಸಿಸ್‌ನಲ್ಲಿರುವ ರ್ಯಾಗಿಂಗ್ ಬಲಿಪಶು

ತ್ರಿಶೂರು,ಡಿ.18: ಕೊಟ್ಟಾಯಂ ಸರಕಾರಿ ಪಾಲಿಟೆಕ್ನಿಕ್ ಇನ್‌ಸ್ಟಿಟ್ಯೂಟ್‌ನಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ರ್ಯಾಗಿಂಗ್‌ಗೊಳಗಾಗಿದ್ದ 22ರ ಹರೆಯದ ಕಿರಿಯ ವಿದ್ಯಾರ್ಥಿಯ ಮೂತ್ರಪಿಂಡಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಹೀಗಾಗಿ ಆತನನ್ನು ಇಲ್ಲಿಯ ಮದರ್ ಹಾಸ್ಪಿಟಲ್‌ನಲ್ಲಿ ಡಯಾಲಿಸಿಸ್‌ಗೊಳಪಡಿಸಲಾಗಿದೆ. ರ್ಯಾಗಿಂಗ್‌ಗೆ ಗುರಿಯಾಗಿದ್ದ ಇನ್ನೋರ್ವ ವಿದ್ಯಾರ್ಥಿಯನ್ನು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿ.2ರಂದು ರಾತ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಗಳು ತನ್ನನ್ನು ಮತ್ತು ಇತರ ಎಂಟು ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಐದು ಗಂಟೆಗಳಿಗೂ ಹೆಚ್ಚು ಕಾಲ ತಮ್ಮಿಂದ ವಿವಿಧ ಕಠಿಣ ವ್ಯಾಯಾಮಗಳನ್ನು ಮಾಡಿಸಿದ್ದರು ಎಂದು ತ್ರಿಶೂರು ಆಸ್ಪತ್ರೆಯಲ್ಲಿರುವ ಒ.ಎಸ್.ಅವಿನಾಶ್ ಹೇಳಿದ್ದಾರೆ.

ಅವಿನಾಶ್‌ನ ಮೂತ್ರಪಿಂಡಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆಸ್ಪತ್ರೆಯ ಪ್ರಧಾನ ವ್ಯವಸ್ಥಾಪಕ ಡಾ.ಅಬ್ದುಲ್ ಶಿಜಿ ತಿಳಿಸಿದರು.
 ಅವಿನಾಶ್‌ಗೆ ಈಗಾಗಲೇ ನಾಲ್ಕು ಬಾರಿ ಡಯಾಲಿಸಿಸ್ ಮಾಡಲಾಗಿದ್ದು, ಆತನ ದೇಹಸ್ಥಿತಿ ಈಗ ಉತ್ತಮಗೊಂಡಿದೆ ಎಂದರು.

 ಗಂಟೆಗಳ ಕಾಲ ವ್ಯಾಯಾಮ ಮಾಡಿ ನಾವು ಸುಸ್ತಾಗಿದ್ದೆವು. ನಮ್ಮಲ್ಲಿ ಕೆಲವರು ಕುಸಿದು ಬಿದ್ದರೂ ಅವರು ಬಿಡಲಿಲ್ಲ. ನೆಲದ ಮೇಲೆ ಈಜುತ್ತಿರುವಂತೆ ನಟಿಸಲು ನಮಗೆ ಹೇಳಲಾಗಿತ್ತು.ನಮ್ಮಲ್ಲಿ ಕೆಲವರನ್ನು ರೂಮೊಂದರಲ್ಲಿ ಕೂಡಿ ಹಾಕಿ ಹಾಡುವಂತೆ ಅವರು ಆದೇಶಿಸಿದ್ದರು. ಇದೆಲ್ಲ ಚಿತ್ರಹಿಂಸೆ ಐದು ಗಂಟೆಗಳ ಕಾಲ, ಬೆಳಗಿನ ಜಾವದವರೆಗೂ ನಡೆದಿತ್ತು ಎಂದು ಅವಿನಾಶ್ ಅಂದಿನ ಕರಾಳ ರಾತ್ರಿಯನ್ನು ನೆನಪಿಸಿಕೊಂಡರು.

ಮರುದಿನವೇ ಹುಟ್ಟೂರು ತ್ರಿಶೂರಿಗೆ ಮರಳಿದ ಅವಿನಾಶ್ ತೀವ್ರ ಅಸ್ವಸ್ಥಗೊಂಡಿದ್ದರು ಮತ್ತು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತನ್ನ ಮಗನ ಮೇಲೆ ರ್ಯಾಗಿಂಗ್ ನಡೆದಿತ್ತು ಎನ್ನುವುದು ಅವಿನಾಶ್ ತಂದೆಗೆ ಆತನ ಸ್ನೇಹಿತರು ದೂರವಾಣಿ ಮೂಲಕ ತಿಳಿಸಿದಾಗಲೇ ಗೊತ್ತಾಗಿದ್ದು. ತಕ್ಷಣ ಅವರು ಪೊಲೀಸ್ ದೂರು ದಾಖಲಿಸಿದ್ದರು.

ಅವಿನಾಶ ದಲಿತ ಕುಟುಂಬಕ್ಕೆ ಸೇರಿದ್ದು,ಹೆತ್ತವರಿಗೆ ಹೇಳಿಕೊಳ್ಳುವಂತಹ ಆದಾಯವಿಲ್ಲ.

ನನ್ನದು ಸಣ್ಣ ಕೆಲಸ,ಸಂಬಳ ಕಡಿಮೆ. ಮಗನ ವ್ಯೆದ್ಯಕೀಯ ವೆಚ್ಚವನ್ನು ಭರಿಸಲೂ ನನ್ನಿಂದ ಸಾಧ್ಯವಿಲ್ಲ. ಆರೋಪಿಗಳಿಗೆ ಶಿಕ್ಷೆಯಾಗಲೇಬೇಕು. ಇಂತಹ ಘಟನೆ ಪುನರಾವರ್ತನೆಯಾಗಕೂಡದು ಎಂದು ಒ.ಪಿ.ಶಿವದಾಸನ್ ಹೇಳಿದರು.

ರ್ಯಾಗಿಂಗ್ ನಡೆಸಿದ್ದ ಎಲ್ಲ ಒಂಬತ್ತೂ ಹಿರಿಯ ವಿದ್ಯಾರ್ಥಿಗಳು ತಲೆಮರೆಸಿ ಕೊಂಡಿದ್ದಾರೆ. ಪೊಲೀಸರು ಅವರ ಮನೆಗಳ ಮೇಲೆ ದಾಳಿಗಳನ್ನು ನಡೆಸಿದ್ದಾರೆ. ಆದರೆ ಅವರಿನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.

ಆರೋಪಿಗಳ ವಿರುದ್ಧ ಕೊಲೆ ಯತ್ನ, ರ್ಯಾಗಿಂಗ್ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಕೊಟ್ಟಾಯಂನ ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X