ಭಟ್ಕಳ: ಉರ್ದು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟ

ಭಟ್ಕಳ , ಡಿ. 18 : ಪಾಲಕರನ್ನು ತಮ್ಮ ಮಕ್ಕಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ರೂಪಿಸಲು ಶಿಕ್ಷಿತರನ್ನಾಗಿ ಮಾಡುತ್ತಾರೆ. ಮಕ್ಕಳ ತಮ್ಮ ಪಾಲಕ ಕನಸನ್ನು ನನಸಾಗಿಸಬೇಕೆಂದು ಭಟ್ಕಳ ಪೊಲೀಸ್ ವೃತ್ತಾಧಿಕಾರಿ ಸುರೇಶ್ ನಾಯಕ್ ಹೇಳಿದರು.
ಅವರು ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳು ತಮ್ಮ ಮಾತಾಪಿತರಿಗೆ ದುಖಃವನ್ನುಂಟು ಮಾಡುವ ಯಾವುದೇ ಕಾರ್ಯಗಳಿಂದ ತಮ್ಮನ್ನು ತಡೆದುಕೊಳ್ಳಬೇಕೆಂದು ಅವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಸೈಯ್ಯದ್ ಅಬ್ದುಲ್ ರಹ್ಮಾನ್ ಬಾತಿನ್, ಕ್ರೀಡೆ ಶಿಕ್ಷಣದ ಒಂದು ಭಾಗವಾಗಿದ್ದು , ಕ್ರೀಡೆಯಿಂದ ಉತ್ತಮ ಆರೋಗ್ಯ ಹಾಗೂ ಮನಸ್ಸು ವಿಕಸಿತಗೊಳ್ಳುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳುತ್ತಾರೆ ಎಂದರು.
ವಿದ್ಯಾರ್ಥಿ ಖುಬೈಬ್ ಅಕ್ರಮಿಯ ಕುರಾನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
ಮುಹಮ್ಮದ್ ಅವೂನ್ ನದ್ವಿ ಸ್ವಾಗತಿಸಿದರು. ಅಬ್ದುಲ್ ರಷೀದ್ ಧನ್ಯವಾದ ಅರ್ಪಿಸಿದರು.
ಅಬ್ದುಲ್ ಹಫೀರ್ ಹಾಗೂ ಅಬ್ದುಲ ರಷೀದ್ ಮಿರ್ಜಾನಿ ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಶಬ್ಬಿರ್ ಆಹ್ಮದ್ ದಫೆದಾರ್ ಸೇರಿದಂತೆ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ವಿವಿಧ ಪದಾಧಿಕಾರಿಗಳು ಉಪಸ್ಥಿತಿದ್ದರು.







