Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಪತಿಯ ಕೃತ್ಯಕ್ಕೆ ಹೆಂಡತಿಯನ್ನು ಬಂಧಿಸಿದ...

​ಪತಿಯ ಕೃತ್ಯಕ್ಕೆ ಹೆಂಡತಿಯನ್ನು ಬಂಧಿಸಿದ ಅಬಕಾರಿ ಅಧಿಕಾರಿಗಳು

ಮಹಿಳೆಯ ವಿರುದ್ಧ ಕಳ್ಳಭಟ್ಟಿ ತಯಾರಿಕೆಯ ಸುಳ್ಳು ಆರೋಪ

ವಾರ್ತಾಭಾರತಿವಾರ್ತಾಭಾರತಿ18 Dec 2016 11:32 PM IST
share
​ಪತಿಯ ಕೃತ್ಯಕ್ಕೆ ಹೆಂಡತಿಯನ್ನು ಬಂಧಿಸಿದ ಅಬಕಾರಿ ಅಧಿಕಾರಿಗಳು


ಅಧಿಕಾರಿಗಳ ವರ್ತನೆ ಖಂಡಿಸಿ ಪ್ರತಿಭಟನೆ
ಶಿಕಾರಿಪುರ, ಡಿ.18: ಕಳ್ಳಭಟ್ಟಿ ತಯಾರಿಕೆಯ ಸುಳ್ಳು ಆರೋಪದ ನೆಪದಲ್ಲಿ ಅಮಾಯಕ ಮಹಿಳೆಯನ್ನು ಮಗುವಿನ ಜೊತೆಯಲ್ಲಿ ಕರೆತಂದು ಅಬಕಾರಿ ಕಚೇರಿಯಲ್ಲಿ ಕೂರಿಸಿಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಣಜಾರ್ ಸಮಾಜದ ನೂರಾರು ಸದಸ್ಯರು ಅಬಕಾರಿ ಕಚೇರಿ ಮುಂಭಾಗದಲ್ಲಿ ಅಧಿಕಾರಿಗಳ ವರ್ತನೆಯನ್ನು ಖಂಡಿಸಿ ಪ್ರತಿಭಟಿಸಿದ ಘಟನೆ ಶನಿವಾರ ನಡೆಯಿತು.


  ತಾಲೂಕಿನ ಮಳವಳ್ಳಿ ತಾಂಡಾದ ರೈತ ಮಹಿಳೆ ಶೋಭಾಬಾಯಿ ಮತ್ತು ಆಕೆಯ ವರ್ಷದ ಮಗುವನ್ನು ಮನೆಯಲ್ಲಿ ಕಳ್ಳಭಟ್ಟಿ ತಯಾರಿಸಿ ಕೊಡದಲ್ಲಿ ಸಂಗ್ರಹಿಸಿರುವ ಆರೋಪದಡಿ ವಶಕ್ಕೆ ಪಡೆದು ಅಬಕಾರಿ ಕಚೇರಿಯಲ್ಲಿ ಕುಳ್ಳಿರಿಸಲಾಗಿದ್ದು, ಮಗುವಿನ ಆಕ್ರಂದನವನ್ನು ಆಲಿಸಿದ ಬಣಜಾರ್ ಸಮುದಾಯದ ನೂರಾರು ಸದಸ್ಯರು ಅಬಕಾರಿ ಕಚೇರಿಗೆ ಧಾವಿಸಿ ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರು.


 ತಾಲೂಕು ಬಣಜಾರ್ ಸಮಾಜದ ಮುಖಂಡ ರಾಘವೇಂದ್ರನಾಯ್ಕ ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಕಠಿಣ ಕ್ರಮಕ್ಕೆ ಹಲವು ಬಾರಿ ಮನವಿ ಮಾಡಲಾಗಿದ್ದು, ಖಚಿತ ಮಾಹಿತಿ ನೀಡಿ ಲಿಖಿತ ದೂರು ನೀಡಿದರೂ ಕ್ರಮ ಕೈಗೊಳ್ಳಲಾಗದ ಅಧಿಕಾರಿಗಳು ಕುಟುಂಬದ ಸದಸ್ಯರ ತಪ್ಪಿಗೆ ಅಮಾಯಕ ಮಹಿಳೆ ಹಾಗೂ ಮುಗ್ಧ ಮಗುವನ್ನು ವಶಕ್ಕೆ ಪಡೆದಿರುವುದು ಅಮಾನವೀಯ ಕ್ರಮವಾಗಿದೆ ಎಂದು ದೂರಿದರು.


 ಅಬಕಾರಿ ಇನ್‌ಸ್ಪೆೆಕ್ಟರ್ ಗಿರೀಶ್ ಮಾತನಾಡಿ, ಇದೀಗ ವಶಕ್ಕೆ ಪಡೆಯಲಾದ ಮಹಿಳೆಯ ಪತಿ ಹೊಳೆಯನಾಯ್ಕ, ಮಾವ ಚಂದ್ರನಾಯ್ಕ ನಿರಂತರವಾಗಿ ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿಕೊಂಡಿದ್ದು, ಈಗಾಗಲೇ ಇವರ ವಿರುದ್ಧ ಪೊಲೀಸ್ ಹಾಗೂ ಅಬಕಾರಿ ಇಲಾಖೆಯಲ್ಲಿ ಹಲವು ದೂರು ದಾಖಲಾಗಿದೆ ಎಂದು ತಿಳಿಸಿ ಅಕ್ರಮ ಕಳ್ಳಭಟ್ಟಿ ತಯಾರಿಕೆಯನ್ನು ಸ್ಥಗಿತಗೊಳಿಸುವಂತೆ ಹಲವು ಬಾರಿ ತಿಳುವಳಿಕೆ ಹಾಗೂ ಎಚ್ಚರಿಕೆಯನ್ನು ನೀಡಿದರೂ ಕಾನೂನಿಗೆ ವಿರುದ್ಧ್ದವಾದ ದಂಧೆಯಲ್ಲಿ ಸಕ್ರಿಯವಾಗಿದು,್ದ ಈ ದಿಸೆಯಲ್ಲಿ ಪತ್ನಿಯನ್ನು ವಶಕ್ಕೆ ಪಡೆಯಲಾಗಿದೆ. ಕೆಲ ಕಾನೂನು ಕ್ರಮದ ನಂತರ ವಾಪಸ್ ಕಳುಹಿಸುವುದಾಗಿ ತಿಳಿಸಿದರು.


  ನಂತರದಲ್ಲಿ ಪತಿಯ ಕೃತ್ಯಕ್ಕೆ ಅಮಾಯಕ ಪತ್ನಿ ಹಾಗೂ ಮಗುವನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಅಧಿಕಾರಿಗಳು ಹಾಗೂ ಬಣಜಾರ್ ಮುಖಂಡರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆದು ಮಹಿಳೆಯ ಬಿಡುಗಡೆ ನಂತರ ಮಾತ್ರ ಸ್ಥಳದಿಂದ ತೆರಳುವುದಾಗಿ ಪಟ್ಟು ಹಿಡಿದರು.ನಂತರದಲ್ಲಿ ಅಧಿಕಾರಿಗಳ ರಕ್ಷಣೆಯಲ್ಲಿ ವಾಪಸ್ ಸ್ವಗ್ರಾಮಕ್ಕೆ ಕಳುಹಿಸಲಾಯಿತು.


  ಈ ಸಂದರ್ಭದಲ್ಲಿ ತಾಲೂ ು ಬಣಜಾರ್ ಸಮಾಜದ ಅಧ್ಯಕ್ಷ ಸುರೇಶನಾಯ್ಕ,ಮುಖಂಡ ಜಯಾನಾಯ್ಕ,ಮಂಜಾ ನಾಯ್ಕ,ಗಜೇಂದ್ರನಾಯ್ಕ,ಗಿರೀಶನಾಯ್ಕ, ರಮೇಶನಾಯ್ಕ, ಹರೀಶನಾಯ್ಕ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X