ಚಿಕಿತ್ಸೆ ಲಕಾರಿಯಾಗದೆ ಯುವಕ ಮೃತ್ಯು
ಕಾಸರಗೋಡು, ಡಿ.18: ಸ್ಕೂಟರ್ ಮತ್ತು ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಕುಂಬಳೆ ಕಳತ್ತೂರಿನ ಸಿರಾಜುದ್ದೀನ್(25) ಮೃತಪಟ್ಟವರು. ಡಿ.15ರಂದು ಬಂದ್ಯೋಡು ಪೆರ್ಮುದೆ ರಸ್ತೆಯ ಅಡ್ಕ ಸಮೀಪ ಅಪಘಾತ ನಡೆದಿತ್ತು. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story