Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕುಗಳಲ್ಲಿ 5,000 ರೂ.ಗಿಂತ ಹೆಚ್ಚಿನ...

ಬ್ಯಾಂಕುಗಳಲ್ಲಿ 5,000 ರೂ.ಗಿಂತ ಹೆಚ್ಚಿನ ಹಳೆಯ ನೋಟುಗಳ ಠೇವಣಿಗೆ ಡಿ.30ರವರೆಗೆ ಒಂದು ಬಾರಿ ಮಾತ್ರ ಅವಕಾಶ

ವಾರ್ತಾಭಾರತಿವಾರ್ತಾಭಾರತಿ19 Dec 2016 1:26 PM IST
share
ಬ್ಯಾಂಕುಗಳಲ್ಲಿ 5,000 ರೂ.ಗಿಂತ ಹೆಚ್ಚಿನ ಹಳೆಯ ನೋಟುಗಳ ಠೇವಣಿಗೆ ಡಿ.30ರವರೆಗೆ ಒಂದು ಬಾರಿ ಮಾತ್ರ ಅವಕಾಶ

ಹೊಸದಿಲ್ಲಿ,ಡಿ.19: ಬ್ಯಾಂಕ್ ಖಾತೆಗಳಲ್ಲಿ 5,000 ರೂ.ಗೂ ಹೆಚ್ಚಿನ ಹಳೆಯ ನೋಟುಗಳ ಠೇವಣಿಯ ಮೇಲೆ ಸೋಮವಾರ ಹೊಸ ನಿರ್ಬಂಧವನ್ನು ಹೇರಿರುವ ಆರ್‌ಬಿಐ, ಇಂತಹ ಠೇವಣಿಗೆ ಡಿ.30ರವರೆಗೆ ಒಮ್ಮೆ ಮಾತ್ರ ಅವಕಾಶವಿದೆ ಎಂದು ಹೇಳಿದೆ. ಹಳೆಯ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮಾ ಮಾಡಲು ನೀಡಿರುವ ಗಡುವು ಡಿ.30ಕ್ಕೆ ಅಂತ್ಯಗೊಳ್ಳುತ್ತದೆ. ಈ ಮೊದಲು ಏಕೆ ಜಮಾ ಮಾಡಿಲ್ಲ ಎನ್ನುವುದಕ್ಕೆ ಗ್ರಾಹಕರು ಬ್ಯಾಂಕಿನ ಇಬ್ಬರು ಅಧಿಕಾರಿಗಳಿಗೆ ತೃಪ್ತಿಕರ ಉತ್ತರ ನೀಡಿದ ಬಳಿಕವೇ 5,000 ರೂ.ಗಿಂತ ಹೆಚ್ಚಿನ ಹಳೆಯ ನೋಟುಗಳನ್ನು ಸ್ವೀಕರಿಸಲಾಗುವುದು ಎಂದೂ ಅದು ತಿಳಿಸಿದೆ.

 ನೂತನ ನಿರ್ಬಂಧದಿಂದ ನುಣುಚಿಕೊಳ್ಳಲು ಒಂದು ಖಾತೆಯಲ್ಲಿ ಹಳೆಯ ನೋಟುಗಳಲ್ಲಿ 5,000 ರೂ.ಗಿಂತ ಕಡಿಮೆ ಮೊತ್ತವನ್ನು ಹಲವು ಬಾರಿ ಠೇವಣಿಯರಿಸುವುದಕ್ಕೂ ಆರ್‌ಬಿಐ ಅಂಕುಶವನ್ನಿಟ್ಟಿದೆ. ಒಂದಕ್ಕಿಂತ ಹೆಚ್ಚು ಬಾರಿ ಸಣ್ಣ ಠೇವಣಿಗಳ ಸಂಚಿತ ಮೊತ್ತ 5,000 ರೂ.ಗಳನ್ನು ಮೀರಿದರೆ ಗ್ರಾಹಕರು ಬ್ಯಾಂಕ್ ಅಧಿಕಾರಿಗಳಿಗೆ ತೃಪ್ತಿಕರ ವಿವರಣೆಯನ್ನು ನೀಡಬೇಕಾಗುಇತ್ತದೆ ಮತ್ತು ಅವರು ಡಿ.30ರ ವರೆಗೆ ತಮ್ಮ ಬ್ಯಾಂಕ್ ಖಾತೆಯಲ್ಲಿ ಮತ್ತೆ ಹಳೆಯ ನೋಟುಗಳನ್ನು ಜಮಾ ಮಾಡುವಂತಿಲ್ಲ. ಆದರೆ ಹೊಸ ಕಪ್ಪುಹಣ ಕ್ಷಮಾದಾನ ಯೋಜನೆ ಪಿಎಂಜಿಕೆವೈ ಅಡಿ ಎಷ್ಟು ಮೊತ್ತದ ಹಳೆಯ ನೋಟುಗಳನ್ನಾದರೂ ಜಮೆ ಮಾಡಬಹುದು ಎಂದು ಆರ್‌ಬಿಐ ಅಧಿಸೂಚನೆಯಲ್ಲಿ ತಿಳಿಸಿದೆ. ಡಿ.30ರವರೆಗೆ ಒಂದು ಬಾರಿ ಮಾತ್ರ 5,000 ರೂ.ವರೆಗೆ ಹಳೆಯ ನೋಟುಗಳಲ್ಲಿ ಜಮಾ ಮಾಡುವವರಿಗೆ ಯಾವುದೇ ರಗಳೆಯಿಲ್ಲ.

ಹಳೆಯ ನೋಟುಗಳ ಠೇವಣಿಗೆ ಅಂತಿಮ ದಿನಾಂಕ ಸಮೀಪಿಸುತ್ತಿದೆ. ಹೀಗಾಗಿ ಬ್ಯಾಂಕ್ ಖಾತೆಗಳಲ್ಲಿ ದೊಡ್ಡ ಮೊತ್ತದ ಕಪ್ಪುಹಣ ಜಮೆಯಾಗುವುದನ್ನು ತಡೆಯುವುದು ಆರ್‌ಬಿಐನ ಹೊಸ ನಿರ್ಬಂಧದ ಉದ್ದೇಶವಾಗಿದೆ. ಗಡುವು ಅಂತ್ಯಗೊಳ್ಳಲು ಕೇವಲ 11 ದಿನಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಹೊಸ ನಿರ್ಬಂಧಗಳು ಸೀಮಿತ ಠೇವಣಿಗಳಿಗೆ ಮಾತ್ರ ಅವಕಾಶ ಕಲ್ಪಿಸುತ್ತವೆ ಮತ್ತು ಇಂತಹ ಠೇವಣಿಗಳ ಮೇಲೆ ನಿಕಟ ನಿಗಾ ಇರಿಸಲಾಗುತ್ತದೆ. 5,000 ರೂ.ಗಿಂತ ಹೆಚ್ಚಿನ ಹಳೆಯ ನೋಟುಗಳನ್ನು ಕೆವೈಸಿ ಪಾಲನೆಯಾಗಿರುವ ಬ್ಯಾಂಕ್ ಖಾತೆಗಳಲ್ಲಿ ಮಾತ್ರ ಜಮಾ ಮಾಡಬಹುದು ಎಂದೂ ಆರ್‌ಬಿಐ ಹೇಳಿದೆ.

ನ.8ರಂದು ನೋಟು ರದ್ದತಿಯನ್ನು ಪ್ರಕಟಿಸುವ ಮೂಲಕ ಸರಕಾರವು ಚಲಾವಣೆಯಲ್ಲಿದ್ದ 5.44 ಲ.ಕೋ.ರೂ.ವೌಲ್ಯದ ಶೇ.86ರಷ್ಟು ನೋಟುಗಳನ್ನು ಹಿಂದೆಗೆದುಕೊಂಡಿತ್ತು. ಈವರೆಗೆ ಸುಮಾರು 13 ಲ.ಕೋ.ರೂ.ಗಳ ಹಳೆಯ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ವಾಪಸ್ ಆಗಿವೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X