Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಾಯ ತೆರಿಗೆ ಪಾವತಿಸುವವರಿಗೆ ಶುಭ...

ಆದಾಯ ತೆರಿಗೆ ಪಾವತಿಸುವವರಿಗೆ ಶುಭ ಸುದ್ದಿ

ಈಗಿನ 2.50 ಲ.ರೂ.ನಿಂದ 4 ಲ.ರೂ.ಗೆ ಏರಿಕೆ?

ವಾರ್ತಾಭಾರತಿವಾರ್ತಾಭಾರತಿ20 Dec 2016 2:07 PM IST
share
ಆದಾಯ ತೆರಿಗೆ ಪಾವತಿಸುವವರಿಗೆ ಶುಭ ಸುದ್ದಿ

ಹೊಸದಿಲ್ಲಿ,ಡಿ.20: ವಿತ್ತಸಚಿವ ಅರುಣ್ ಜೇಟ್ಲಿ ಅವರು ಮುಂಬರುವ ಮುಂಗಡಪತ್ರದಲ್ಲಿ ನೋಟು ರದ್ದತಿಯಿಂದ ಸಾಕಷ್ಟು ಬವಣೆ ಅನುಭವಿಸಿರುವ ವೇತನವರ್ಗ ಮತ್ತು ಮಧ್ಯಮವರ್ಗದ ಜನರಿಗೆ ಸವಿಸುದ್ದಿಯೊಂದನ್ನು ನೀಡುವ ಸಾಧ್ಯತೆಗಳು ದಟ್ಟವಾಗಿವೆ. ಸರಕಾರವು ಭಾರತದ ಆದಾಯ ತೆರಿಗೆ ಸ್ವರೂಪವನ್ನು ಪುನರ್‌ಪರಿಶೀಲಿಸುತ್ತಿದೆ ಎಂದು ತಿಳಿದು ಬಂದಿದೆ.

ತೆರಿಗೆ ಹೇರಿಕೆಯ ಹಂತಗಳನ್ನು ಪರಿಷ್ಕರಿಸುವ ಮತ್ತು ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ 2.50 ಲ.ರೂ.ಗಳಿಂದ 4 ಲ.ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಸರಕಾರದ ಪರಿಶೀಲನೆಯಲ್ಲಿದ್ದು, ಇದಕ್ಕೆ ಹಸಿರು ನಿಶಾನೆ ದೊರಕಿದರೆ ಜನರಿಗೆ ಗಣನೀಯ ಪ್ರಮಾಣದಲ್ಲಿ ಹಣ ಉಳಿಯಲಿದೆ. ನೋಟು ರದ್ದತಿಯಿಂದುಂಟಾಗಿರುವ ತೊಂದರೆಗಳನ್ನು ಸಹಿಸಿಕೊಂಡಿರುವ ಪ್ರಾಮಾಣಿಕ ತೆರಿಗೆದಾತರಿಗೆ ಪುರಸ್ಕಾರದ ರೂಪದಲ್ಲಿ ಆದಾಯ ತೆರಿಗೆ ಮಿತಿ ಹೆಚ್ಚಲಿದೆ ಎನ್ನುವುದು ಆರ್ಥಿಕ ತಜ್ಞರ ವಿಶ್ಲೇಷಣೆ.

ಆದಾಯ ತೆರಿಗೆ ವಿನಾಯಿತಿ ಮಿತಿಯ ಏರಿಕೆಯೊಂದಿಗೆ ಆದಾಯದ ವಿವಿಧ ಹಂತಗಳಲ್ಲಿ ತೆರಿಗೆಯ ಪರಿಷ್ಕರಣೆಯಿಂದ ಜನರ ಕೈಯಲ್ಲಿ ಹೆಚ್ಚಿನ ದುಡ್ಡು ಓಡಾಡಲಿದೆ ಮತ್ತು ಇದು ಬಳಕೆದಾರ ವೆಚ್ಚದ ಜೊತೆ ಉಳಿತಾಯವನ್ನೂ ಹೆಚ್ಚಿಸಲಿದೆ.

ಪ್ರಸಕ್ತ ಮೂರು ಆದಾಯ ತೆರಿಗೆ ಹಂತಗಳಿವೆ. ವಾರ್ಷಿಕ 2.5 ಲ.ರೂ.ಗಳಿಗಿಂತ ಕಡಿಮೆ ಆದಾಯವಿರುವವರಿಗೆ ತೆರಿಗೆಯಿಂದ ಸಂಪೂರ್ಣ ವಿನಾಯಿತಿಯಿದೆ. 2.5-5 ಲ.ರೂ. ಆದಾಯವುಳ್ಳವರಿಗೆ ಶೇ.10, 5-10 ಲ.ರೂ.ಆದಾಯವುಳ್ಳವರಿಗೆ ಶೇ.20 ಮತ್ತು 10 ಲ.ರೂ.ಗಿಂತ ಹೆಚ್ಚಿನ ಆದಾಯವುಳ್ಳವರಿಗೆ ಶೇ.30 ತೆರಿಗೆಯನ್ನು ವಿಧಿಸಲಾಗುತ್ತಿದೆ. ಇದರ ಜೊತೆಗೆ ವಾರ್ಷಿಕ ಒಂದು ಕೋ.ರೂ.ಗೂ ಅಧಿಕ ಆದಾಯವುಳ್ಳವರು ಶೇ.12ರಷ್ಟು ಹೆಚ್ಚುವರಿ ಮೇಲ್ತೆರಿಗೆಯನ್ನು ಪಾವತಿಸಬೇಕಾಗಿದೆ. ಸರಕಾರದ ಅಂಕಿಅಂಶಗಳಂತೆ 2014-15ರಲ್ಲಿ 48,000 ಜನರು ಮಾತ್ರ ತೆರಿಗೆಗೆ ಅರ್ಹ ವಾರ್ಷಿಕ ಒಂದು ಕೋ.ರೂ.ಗೂ ಅಧಿಕ ವರಮಾನವನ್ನು ಘೋಷಿಸಿದ್ದರು.

ಹೊಸ ತೆರಿಗೆ ಹಂತಗಳು ಮತ್ತು ವಿಧಿಸಬಹುದಾದ ತೆರಿಗೆ ದರಗಳನ್ನು ಸರಕಾರವೀಗ ಪರಿಶೀಲಿಸುತ್ತಿದೆ. ವಾರ್ಷಿಕ 10 ಕೋ.ರೂ.ಗೂ ಅಧಿಕ ಗಳಿಕೆಯುಳ್ಳವರಿಗೆ ಇನ್ನಷ್ಟು ಹೆಚ್ಚಿನ ‘ಸೂಪರ್ ರಿಚ್’ ತೆರಿಗೆಯನ್ನು ಸರಕಾರವು ವಿಧಿಸಬಹುದು.

ನೋಟು ರದ್ದತಿಯ ಬಳಿಕ ಜನರು ಹೊಸ ವ್ಯವಸ್ಥೆಗೆ ಹೊಂದಿಕೊಳ್ಳಲು ಇನ್ನೂ ಪರದಾಡುತ್ತಿರುವುದರಿಂದ ಬಳಕೆದಾರ ವಸ್ತುಗಳಿಗಾಗಿ ವೆಚ್ಚಗಳು ಕಡಿಮೆಯಾಗಿವೆ. ಕುಟುಂಬಗಳು ಮಾಡುವ ವೆಚ್ಚ ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ಹೊಂದಿದೆ. ದೇಶದ ಜಿಡಿಪಿಗೆ ಅರ್ಧದಷ್ಟು ಕೊಡುಗೆಯನ್ನು ಕುಟುಂಬಗಳು ಮಾಡುವ ಬಳಕೆದಾರ ವೆಚ್ಚವೇ ನೀಡುತ್ತಿದೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X