Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನಪಾಕ್ಕೆ ಕುಡಿಯುವ ನೀರಿಗೆ ಹೊಸ ಕಿಂಡಿ...

ಮನಪಾಕ್ಕೆ ಕುಡಿಯುವ ನೀರಿಗೆ ಹೊಸ ಕಿಂಡಿ ಅಣೆಕಟ್ಟಿನಿಂದ ಪರಿಹಾರ: ಬಿ.ರಮಾನಾಥ ರೈ

ಆಸುಪಾಸಿನ ಗ್ರಾಮಗಳಿಗೂ ನೀರು ಪೂರೈಕೆಗೆ ಆದ್ಯತೆ

ವಾರ್ತಾಭಾರತಿವಾರ್ತಾಭಾರತಿ20 Dec 2016 3:44 PM IST
share
ಮನಪಾಕ್ಕೆ ಕುಡಿಯುವ ನೀರಿಗೆ ಹೊಸ ಕಿಂಡಿ ಅಣೆಕಟ್ಟಿನಿಂದ ಪರಿಹಾರ: ಬಿ.ರಮಾನಾಥ ರೈ

75ಕೋಟಿ ರೂ ವೆಚ್ಚದ ಕಿಂಡಿ ಅಣೆಕಟ್ಟು ಯೋಜನೆ ಪೂರ್ಣ,  ನಾಲ್ಕೂವರೆ ಮೀಟರ್ ನೀರು ಸಂಗ್ರಹ.

ಮಂಗಳೂರು,ಡಿ.20: ಮಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ತುಂಬೆ ಹಳೆ ಡ್ಯಾಂ ಬಳಿ ನೇತ್ರಾವತಿ ನದಿಗೆ ಅಡ್ಡಲಾಗಿರುವ ನಿರ್ಮಿಸಲಾಗಿರುವ 75.50 ಕೋಟಿ ರೂ.ಯೋಜನೆಯ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದೆ. ಪ್ರಸಕ್ತ ಸುಮಾರು ನಾಲ್ಕೂವರೆ ಮೀಟರ್ ನೀರು ಶೇಖರಣೆಯಾಗಿರುವ ಸಂದರ್ಭದಲ್ಲಿ ರಾಜ್ಯ ಪರಿಸರ, ಜೀವಿಶಾಸ್ತ್ರ ಮತ್ತು ಅರಣ್ಯ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಇಂದು ಬಾಗಿನ ಅರ್ಪಿಸಿದರು.

ಹಿಂದಿನ ಅಣೆಕಟ್ಟಿನಲ್ಲಿ ನೀರಿನ ಸೋರಿಕೆ ಹೆಚ್ಚುತ್ತಾ ಸಾಗಿದ ಪರಿಣಾಮವಾಗಿ ಹೊಸ ಕಿಂಡಿ ಅಣೆಕಟ್ಟು ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಬೇಕಾಯಿತು. ಈ ಯೋಜನೆ 2007ರಲ್ಲಿ ಆರಂಭಗೊಂಡು ನಿಧಾನ ಗತಿಯಲ್ಲಿ ಸಾಗುತ್ತಿತ್ತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ರಾಜ್ಯದ ನಗರಾಭಿವೃದ್ಧಿ ಸಚಿವರಾದ ಬಳಿಕ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಈ ಯೋಜನೆಗೆ ಹೆಚ್ಚುವರಿ ಹಣ ಮಂಜೂರು ಮಾಡಲು ಕಾರಣರಾಗಿದ್ದಾರೆ. ಈ ಯೋಜನೆಯ ಸಂದರ್ಭದಲ್ಲಿ ನೀರು ಸರಬರಾಜಾಗುವ ಪ್ರದೇಶದ ನೇತ್ರಾವತಿ ನದಿ ತೀರದ ಜನರಿಗೆ ಕುಡಿಯುವ ನೀರು ಒದಗಿಸಲು ಹೆಚ್ಚಿನ ಗಮನಹರಿಸಬೇಕು ಎನ್ನುವ ನಿಟ್ಟಿನಲ್ಲಿ ಎಡಿಬಿ ಯೋಜನೆಯಲ್ಲಿ ಸುಮಾರು 10 ಕೋಟಿ ರೂ ವೆಚ್ಚದ ಕಾಮಗಾರಿ ಕೈಗೊಳ್ಳಲಾಗುವುದು. ನೀರು ಪ್ರಕೃತ್ತಿ ದತ್ತವಾಗಿ ದೇವರು ಸಕಲ ಜೀವ ರಾಶಿಗಳಿಗೆ ನೀಡಿದ ಸಂಪತ್ತು ಅದನ್ನು ಹಂಚಿ ಮಿತವಾಗಿ ಬಳಸಬೇಕಾಗಿದೆ. ಪರಿಸರದ ರಕ್ಷಣೆ, ಜೀವಿಗಳ ರಕ್ಷಣೆ ನೀರಿನ ಸಂರಕ್ಷಣೆ ಜೊತೆಯಾಗಿ ಸಾಗಬೇಕು ಎಂದು ರಮಾನಾಥ ರೈ ತಿಳಿಸಿದರು. ಕರಾವಳಿಯಲ್ಲಿ ಅಂತರ್ಜಲಮಟ್ಟವನ್ನು ಏರಿಸಲು ಅಲ್ಲಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವ ಪಶ್ಚಿಮವಾಹಿನಿ ಯೋಜನೆ ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರದ ಯೋಜನೆಯಾಗಬಹುದು. ಪ್ರಸಕ್ತ ಈ ಯೋಜನೆಯಿಂದ ಸಂತ್ರಸ್ತರಾಗುವ ಕೃಷಿಕರಿಗೆ, ಭೂಮಿಯ ಮಾಲಕರಿಗೆ ಪರಿಹಾರವನ್ನು ನೀಡಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ರಮಾನಾಥ ರೈ ತಿಳಿಸಿದರು.

1970ರಲ್ಲಿ ಪ್ರಥಮ ಯೋಜನೆ

ತುಂಬೆಯ ಬಳಿ ನೇತ್ರಾವತಿ ನದಿಗೆ 1970ರಲ್ಲಿ ಹಳೆ ಕಿಂಡಿ ಅಣೆಕಟ್ಟು ನಿರ್ಮಿಸಿ ಕರ್ನಾಟಕ ಸರಕಾರದ ಅಧೀನದಲ್ಲಿದ್ದ ಎಂಸಿಎಫ್ ಕಾರ್ಖಾನೆಗೆ ನೀರು ಸರಬರಾಜು ಮಾಡಲು ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿದೆ.ಬಳಿಕ ಮಂಗಳೂರು ಮಹಾನಗರವಾಗಿ ವಿಸ್ತಾರವಾದ ಬಳಿಕ ಮಂಗಳೂರಿಗೆ ಕುಡಿಯುವ ನೀರಿನ ಬಳಕೆಗಾಗಿ ಈ ಯೋಜನೆಯಿಂದಲೇ ನೀರು ಬಳಸಲಾಗುತಿತ್ತು.2007ರಲ್ಲಿ ಹೊಸ ಕಿಂಡಿ ಅಣೆಕಟ್ಟು ನಿರ್ಮಿಸಲು 40 ಕೋಟಿ ರೂ ಯೋಜನೆ ವರ್ಷಗಳು ಕಳೆದ ನಂತರ ಯೋಜನೆಯ ಮೊತ್ತ ಹೆಚ್ಚುತ್ತಾ 2014ರಲ್ಲಿ 75.50 ಕೋಟಿ ರೂಗಳಿಗೆ ಏರಿಕೆಯಾಗಿದೆ.ಈ ಯೋಜನೆ ಮಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ.ತುಂಬೆಯಿಂದ ಉಳ್ಳಾಲ, ಕೊಣಾಜೆ,ಮುಲ್ಕಿಯವರೆಗೂ ಕುಡಿಯುವ ನೀರಿನ ಪೂರೈಕೆಗೆ ಸಂಬಂಧಿಸಿದ ಮಹತ್ವದ ಯೋಜನೆಯಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ. ಮಂಗಳೂರು ನಗರದಲ್ಲಿ ನೀರು ಸರಬರಾಜಾಗುತ್ತಿರುವ ಸಂದರ್ಭದಲ್ಲಿ ಆಗುತ್ತಿರುವ ಶೇ.10ರಷ್ಟು ಸೋರಿಕೆಯನ್ನು ತಡೆದರೆ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದು ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು.
          
ಮಂಗಳೂರು ಮೇಯರ್ ಹರಿನಾಥ್ ಮಾತನಾಡುತ್ತಾ ತುಂಬೆ ಕಿಂಡಿ ಅಣೆಕಟ್ಟಿನ ನೀರಿನ ಸಂಗ್ರಹದಲ್ಲಿ ಮುಳುಗಡೆಯಾಗುವ ಸುಮಾರು 12 ಎಕ್ರೆ ಖಾಸಗಿ ಭೂಮಿಯ 18 ರೈತರ ಕುಟುಂಬಗಳಿಗೆ ವಾರ್ಷಿಕ ಬಾಡಿಗೆ ಒಟ್ಟು 16ಲಕ್ಷ 20 ಸಾವಿರ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಶಾಸಕರಾದ ಐವನ್ ಡಿ ಸೋಜ, ಮೊಹಿಯುದ್ದೀನ್ ಬಾವ,ಬಂಟ್ವಾಳ ಪುರಸಭೆಯ ಅಧ್ಯಕ್ಷ ರಾಮಕೃಷ್ಣ ಆಳ್ವಾ,ಉಪಾಧ್ಯಕ್ಷ ಮುಹಮ್ಮದ್,ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ,ಮನಪಾ ಉಪಾಧ್ಯಕ್ಷೆ ಸುಮಿತ್ರಾ ಕರಿಯ,ಮನಪಾ ಮುಖ್ಯ ಸಚೇತಕ ಶಶಿಧರ ಹೆಗ್ಡೆ, ಮನಪಾ ವಿಪಕ್ಷ ನಾಯಕಿ ರೂಪಾ ಡಿ.ಬಂಗೇರಾ, ಮನಪಾ ಕಮೀಷನರ್ ಮುಹಮ್ಮದ್ ನಝೀರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್,ಕಳ್ಳಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ರತ್ನಾ,ತುಂಬೆ ಪಂಚಾಯತ್ ಅಧ್ಯಕ್ಷೆ ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X