Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸಿಪಿ ವೆಂಕಟೇಶ್ ಪ್ರಸನ್ನ ವಿರುದ್ಧ ದೂರು

ಎಸಿಪಿ ವೆಂಕಟೇಶ್ ಪ್ರಸನ್ನ ವಿರುದ್ಧ ದೂರು

ನೋಟು ಬದಲಾವಣೆ ಹೆಸರಲ್ಲಿ 21.5 ಲಕ್ಷ ವಂಚನೆ

ವಾರ್ತಾಭಾರತಿವಾರ್ತಾಭಾರತಿ20 Dec 2016 5:30 PM IST
share
ಎಸಿಪಿ ವೆಂಕಟೇಶ್ ಪ್ರಸನ್ನ ವಿರುದ್ಧ ದೂರು

ಬೆಂಗಳೂರು, ಡಿ. 20: 500 ರೂ.ಮತ್ತು 1ಸಾವಿರ ರೂ.ನೋಟು ರದ್ದುಗೊಳಿಸಿದ್ದು, ಜನ ಸಾಮಾನ್ಯರಿಗೆ ಲಾಭ ಆಗಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಪೊಲೀಸ್ ಅಧಿಕಾರಿಗಳಿಗೆ ದೊಡ್ಡ ಮೊತ್ತದ ‘ಲಾಭ ತಂದುಕೊಟ್ಟ’ ಪ್ರಕರಣವೊಂದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ದಾಖಲೆಯಿಲ್ಲದ ಹಣವೆಂದು ವಶಪಡಿಸಿಕೊಂಡಿದ್ದ 72.50ಲಕ್ಷ ರೂ.ಗಳ ಪೈಕಿ 21.50ಲಕ್ಷ ರೂ.ಗಳನ್ನು ಬೆಂಗಳೂರಿನ ನಗರ ಅಪರಾಧ ವಿಭಾಗ(ಸಿಸಿಬಿ) ಎಸಿಪಿ ವೆಂಕಟೇಶ್ ಪ್ರಸನ್ನ, ಇನ್ಸ್‌ಪೆಕ್ಟರ್ ರಮೇಶ್ ರಾವ್ ಸೇರಿದಂತೆ 6 ಮಂದಿ ಪೊಲೀಸ್ ಸಿಬ್ಬಂದಿ ತಮ್ಮ ಜೇಬಿಗೆ ಇಳಿಸಿ ವಂಚಿಸಿದ್ದಾರೆಂದು ದಾವಣಗೆರೆ ಮೂಲದ ಎನ್. ಸತೀಶ್ ಮತ್ತು ಉತ್ತರಳ್ಳಿಯ ನಿವಾಸಿ ಸವಿತಾ ಎಂಬವರು ನಗರ ಪೊಲೀಸ್ ಆಯುಕ್ತ ಮೇಘರಿಕ್ ಅವರಿಗೆ ದೂರು ನೀಡಿದ್ದಾರೆ.

ಪ್ರಕರಣದ ವಿವರ:ದೂರುದಾರರಾದ ಸತೀಶ್ ಮತ್ತು ಸವಿತಾ ಅವರಿಗೆ, ಸುಹಾಸ್ ಮತ್ತು ವಿಜಯ್ ಎಂಬವರು ತಮ್ಮ ಬಳಿ ಅಮಾನ್ಯಗೊಂಡ 500 ರೂ. ಮತ್ತು 1ಸಾವಿರ ರೂ.ಗಳ 1.50 ಕೋಟಿ ರೂ.ನೋಟುಗಳಿದ್ದು, ಅವುಗಳನ್ನು ಬದಲಾಯಿಸಿ ಕೊಟ್ಟರೆ ಒಳ್ಳೆಯ ಕಮಿಷನ್ ನೀಡುವ ಆಸೆ ಹುಟ್ಟಿಸಿದ್ದಾರೆ.

ಆ ಕಾರಣ ದೂರುದಾರರು ತಮ್ಮ ಆಸ್ತಿ ಮತ್ತು ಆಭರಣಗಳನ್ನು ಅಡವಿಟ್ಟು 72.50 ಲಕ್ಷ ರೂ.ಗಳನ್ನು ನ.28ರಂದು ಕಾರೊಂದರಲ್ಲಿ ಇಲ್ಲಿನ ‘ನೈಸ್’ ರಸ್ತೆ ಸಿಗ್ನಲ್ ಬಳಿಗೆ ಬಂದಿದ್ದಾರೆ. ಈ ವೇಳೆ ಆ ಸ್ಥಳಕ್ಕೆ ಬಂದ ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ 72.50 ಲಕ್ಷ ರೂ.ಹಣವಿದ್ದ ಕಾರನ್ನು ವಶಪಡಿಸಿಕೊಂಡಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆ ಬಳಿಕ ಮಧ್ಯಾಹ್ನ 3ರಿಂದ 4:45ರ ವರೆಗೆ ನಗರದ ರಾಮಕೃಷ್ಣ ಆಶ್ರಮದ ಪಾರ್ಕಿಂಗ್ ಸ್ಥಳದಲ್ಲಿ ಕೂರಿಸಿಕೊಂಡು ನಂತರ 5ಗಂಟೆಯ ಸುಮಾರಿಗೆ ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಅನಂತರ ರಾತ್ರಿ 8ಗಂಟೆಯ ಸುಮಾರಿಗೆ ಗಿರಿನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

10:30ರ ಸುಮಾರಿಗೆ ಐಟಿ ಅಧಿಕಾರಿಗಳು ಬಂದಾಗ ಸಿಸಿಬಿ ಪೊಲೀಸರು 51 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಪ್ಪು ಮಾಹಿತಿ ನೀಡಿದ್ದು, 21.50 ಲಕ್ಷ ರೂ.ಗಳನ್ನು ವಂಚಿಸಿದ್ದಾರೆ. ಆ ಮೂಲಕ ಐಟಿ ಅಧಿಕಾರಿಗಳಿಗೆ ಪೊಲೀಸರು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಎಸಿಪಿ ವೆಂಕಟೇಶ್ ಪ್ರಸನ್ನ, ಇನ್ಸ್‌ಪೆಕ್ಟರ್ ರಮೇಶ್ ರಾವ್ ಹಾಗೂ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿ ತಮಗೆ 21.50 ಲಕ್ಷ ರೂ.ವಂಚನೆ ಮಾಡಿದ್ದು, ತಮ್ಮ ಬಳಿಯಿದ್ದ ಒಟ್ಟು 72.50 ಲಕ್ಷ ರೂ.ಗಳಿಗೂ ತಾವು ಸೂಕ್ತ ದಾಖಲೆಗಳನ್ನು ಹೊಂದಿದ್ದೇವೆ.

ಆದುದರಿಂದ ಎಸಿಪಿ ವೆಂಕಟೇಶ್ ಪ್ರಸನ್ನ ನೇತೃತ್ವದ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿ ತಂಡ ವಂಚಿಸಿರುವ 21.50 ಲಕ್ಷ ರೂ. ಹಣವನ್ನು ಕೊಡಿಸಬೇಕು. ಇಷ್ಟೊಂದು ದೊಡ್ಡ ಮೊತ್ತದ ಹಣ ಕೈತಪ್ಪಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ಇದರಿಂದ ಮಾನಸಿಕ ತೊಂದರೆಗೆ ಸಿಲುಕಿದ್ದು ಆತ್ಮಹತ್ಯೆಯೊಂದೆ ನಮ್ಮ ಮುಂದಿರುವ ದಾರಿಯಾಗಿದೆ.

ಆದುದರಿಂದ ತಾವು ಈ ಮೊತ್ತವನ್ನು ಸಿಸಿಬಿ ಎಸಿಪಿ ವೆಂಕಟೇಶ್ ಪ್ರಸನ್ನ ಮತ್ತು ಇನ್ಸ್‌ಪೆಕ್ಟರ್ ಮಹೇಶ್ ರಾವ್ ಅವರಿಂದ ಕೊಡಿಸಬೇಕು. ಜೀವ ಬೆದರಿಕೆ ಹಾಕಿರುವ ಅಧಿಕಾರಿಗಳಿಂದ ತಮಗೆ ಸೂಕ್ತ ರಕ್ಷಣೆ ನೀಡಬೇಕು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

‘ದೂರುದಾರರಿಬ್ಬರಿಗೂ ಎಸಿಪಿ ವೆಂಕಟೇಶ್ ಪ್ರಸನ್ನ ಮತ್ತು ಇನ್ಸ್‌ಪೆಕ್ಟರ್ ಮಹೇಶ್ ರಾವ್ ಅವರಿಂದ ಜೀವ ಬೆದರಿಕೆಯಿದ್ದು ರಕ್ಷಣೆ ನೀಡಬೇಕು. ಅಲ್ಲದೆ, ಅವರ 21.50 ಲಕ್ಷ ರೂ.ಹಣವನ್ನು ಕೂಡಲೇ ಹಿಂದಿರುಗಿಸಬೇಕು. ಆದರೆ, ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದು  ದೂರುದಾರರ ಪರ ವಕೀಲ ಹರೀಶ್ ನಾಯ್ಕ ಆರೋಪಿಸಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X