Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಹುಸಂಸ್ಕೃತಿಯನ್ನು ಒಪ್ಪದವರಿಂದ ಏಕರೂಪ...

ಬಹುಸಂಸ್ಕೃತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ

ಮುಸ್ಲಿಂ ಮಹಿಳೆಯರಿಂದ ಶರೀಅತ್ ಸಂರಕ್ಷಣಾ ಸಮಾವೇಶ

ಮುಹಮ್ಮದ್ ಇರ್ಷಾದ್ ವೇಣೂರುಮುಹಮ್ಮದ್ ಇರ್ಷಾದ್ ವೇಣೂರು20 Dec 2016 6:11 PM IST
share
ಬಹುಸಂಸ್ಕೃತಿಯನ್ನು ಒಪ್ಪದವರಿಂದ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಷಡ್ಯಂತ್ರ: ಸಬೀಹಾ ಫಾತಿಮಾ

ಮಂಗಳೂರು, ಡಿ.20 : ನಮ್ಮ ದೇಶವು ವಿವಿಧ ಧರ್ಮ, ಭಾಷೆ, ಆಚಾರಗಳನ್ನು ಆಚರಿಸುತ್ತಾ ನಾವು ಒಂದೇ ಸಂವಿಧಾನದಡಿಯಲ್ಲಿ ಬದುಕುತ್ತಿದ್ದೇವೆ. ಆದರೆ ದೇಶದ ಬಹುಸಂಸ್ಕೃತಿಯನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲದ ಸ್ವಯಂಘೋಷಿತ ದೇಶಪ್ರೇಮಿಗಳಿಂದ ಏಕರೂಪ ನಾಗರಿಕ ಸಂಹಿತೆಯ ಜಾರಿಗೆ ಷಡ್ಯಂತ್ರ ಮಾಡಲಾಗುತ್ತಿದೆ. ಆದ್ದರಿಂದ ಪ್ರಜ್ಞಾವಂತ ದೇಶದ ನಾಗರಿಕರು ಇದನ್ನು ಒಕ್ಕೊರಲಿನಿಂದ ವಿರೋಧಿಸಬೇಕಾದ ಅಗತ್ಯತೆ ಇದೆ ಎಂದು ಅನುಪಮ ಮಹಿಳಾ ಮಾಸಿಕ ಉಪಸಂಪಾದಕಿ, ಜಮಾಅತೆ ಇಸ್ಲಾಮೀ ಹಿಂದ್‍ನ ಸಬೀಹಾ ಫಾತಿಮಾ ಎಚ್ಚರಿಸಿದರು.  

ಅವರು ಕೇಂದ್ರ ಸರಕಾರವು ತರಲು ಉದ್ದೇಶಿಸಿರುವ ಏಕರೂಪ ನಾಗರಿಕ ಸಂಹಿತೆಯ ವಿರುದ್ಧ ಇಂದು  ಮುಸ್ಲಿಂ ಸೆಂಟ್ರಲ್ ಕಮಿಟಿ ಮಂಗಳೂರಿನ ಪುರಭವನದಲ್ಲಿ ಮುಸ್ಲಿಂ ಮಹಿಳೆಯರಿಗಾಗಿ ಆಯೋಜಿಸಿದ್ದ ಶರೀಅತ್ ಸಂರಕ್ಷಣಾ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು.

ಬ್ರಿಟೀಷರು ಭಾರತಕ್ಕೆ ಕಾಲಿಡುವುದಕ್ಕಿಂತ ಮುಂಚೆ ನಮ್ಮ ದೇಶವನ್ನಾಳಿದ್ದ ಹಲವಾರು ಮುಸ್ಲಿಂ ರಾಜರುಗಳ ಕೊಡುಗೆಯನ್ನು ಮರೆಮಾಚಲಾಗುತ್ತಿದೆ. ಈ ಮೂಲಕ ದೇಶದ ಇತಿಹಾಸವನ್ನು ತಿರುಚಿಸಲಾಗುತ್ತಿದೆ. ಬ್ರಿಟೀಷರು ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಈ ದೇಶವನ್ನು ಆಳಿದ್ದರು. ಅದನ್ನೇ ಇಂದು ನಮ್ಮ ದೇಶದಲ್ಲಿ ಮುಂದುವರಿಸಲು ಹವಣಿಸಲಾಗುತ್ತಿದೆ ಎಂದರು.

ಪರ್ಸನಲ್ ಲಾ ಎಂಬ ವಿಚಾರ ಕೇವಲ ಮುಸ್ಲಿಮರಿಗೆ ಮಾತ್ರ ಇಲ್ಲ. ಅದು ಹಿಂದೂ ಬಾಂಧವರಿಗೂ, ಕ್ರೈಸ್ತರಿಗೂ ಸೇರಿದಂತೆ ಇದೆ ಎಂಬುವುದು ಎಲ್ಲರೂ ತಿಳಿಯಬೇಕಾಗಿದೆ. ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಎಲ್ಲರೂ ಅಧ್ಯಯನ ನಡೆಸಬೇಕಾದ ಅಗತ್ಯತೆ ಇದೆ ಎಂದ ಅವರು, ಇಸ್ಲಾಮೀ ಶರೀಅತ್‍ನ ನಿಯಮಗಳು ಸರಿಯಾದ ರೀತಿಯಲ್ಲಿ ಅರಿತುಕೊಂಡು ಪ್ರತಿಯೊಂದು ಮುಸ್ಲಿಂ ಕುಟುಂಬ ಪಾಲಿಸಿದಲ್ಲಿ ಬದಲಾವಣೆ ಖಂಡಿತ ಸಾಧ್ಯವಿದೆ ಎಂದು ಸಬೀಹಾ ಫಾತಿಮಾ ಅಭಿಪ್ರಾಯಪಟ್ಟರು.

ತಲಾಖ್ ನಿಂದ ನಮ್ಮ ದೇಶದ ಮುಸ್ಲಿಂ ಮಹಿಳೆಯರು ಅನ್ಯಾಯಕ್ಕೊಳಗಾಗುತ್ತಿದ್ದಾರೆ ಎಂದು ಹೇಳುತ್ತಾ ಮುಸ್ಲಿಂ ಮಹಿಳೆಯರ ಬಗ್ಗೆ ವಿಪರೀತ ಕಾಳಜಿ ತೋರಿಸುವ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದಲ್ಲಿ ದಿನನಿತ್ಯ ಕೇಳಿಬರುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯ,  ಮದ್ಯಪಾನದಿಂದಾಗುತ್ತಿರುವ ಹಲವು ವಿದ್ಯಮಾನಗಳ ಸಹಿತ ವಿವಿಧ ಸಮಸ್ಯೆಗಳ ಅರಿವಿಲ್ಲದಿರುವುದು ವಿಪರ್ಯಾಸ ಎಂದು ಹೇಳಿದರು.
 

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ಮುಹಮ್ಮದ್ ಇರ್ಷಾದ್ ವೇಣೂರು
ಮುಹಮ್ಮದ್ ಇರ್ಷಾದ್ ವೇಣೂರು
Next Story
X