Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏಕ ನಾಗರಿಕ ಸಂಹಿತೆಯು ಬಿಜೆಪಿಯ ಚುನಾವಣಾ...

ಏಕ ನಾಗರಿಕ ಸಂಹಿತೆಯು ಬಿಜೆಪಿಯ ಚುನಾವಣಾ ಪ್ರಣಾಳಿಕೆಯೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದಲ್ಲ

ನ್ಯಾಷನಲ್ ವಿಮೆನ್ಸ್ ಫ್ರಂಟ್ ನ ಶಾಹಿದಾ ಅಸ್ಲಂ

ವಾರ್ತಾಭಾರತಿವಾರ್ತಾಭಾರತಿ20 Dec 2016 7:21 PM IST
share
ಏಕ ನಾಗರಿಕ ಸಂಹಿತೆಯು ಬಿಜೆಪಿಯ ಚುನಾವಣಾ ಪ್ರಣಾಳಿಕೆಯೇ ಹೊರತು ಮಹಿಳೆಯರ ಮೇಲಿನ ಕಾಳಜಿಯಿಂದಲ್ಲ

ಮಂಗಳೂರು, ಡಿ.20 :   ಏಕ ನಾಗರಿಕ ಸಂಹಿತೆಯನ್ನು ಜಾರಿಗೆ ತರುವುದು ಬಿಜೆಪಿಯ ಚುಣಾವಣಾ ಸಂದರ್ಭದ ಚುಣಾವಣಾ ಪ್ರಣಾಳಿಕೆಯಾಗಿದೆ. ಇದು ಲಿಂಗ ಅಸಮಾನತೆಯಿಂದಾಗಲಿ,  ಮುಸ್ಲಿಂ ಮಹಿಳೆಯ ಮೇಲಿನ ಅನುಕಂಪವಾಗಲಿ ಅಲ್ಲ. ಎಲ್ಲವನ್ನು ಮೊದಲೇ ನಿರ್ಧರಿಸಿದಂತೆ ಸಿದ್ಧಪಡಿಸಿದ ಚಿತ್ರಕತೆಯಾಗಿದೆ ಎಂದು ನ್ಯಾಷನಲ್  ವುಮೆನ್ಸ್ ಫ್ರಂಟ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಶಾಹಿದಾ ಅಸ್ಲಂ ಹೇಳಿದರು.

ಅವರು ಮಂಗಳೂರಿನಲ್ಲಿ ನಡೆದ ಮುಸ್ಲಿಂ ಶರೀಯತ್ ಸಂರಕ್ಷಣಾ ಮಹಿಳಾ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಈಗಲೂ ದೇಶದ ಅರ್ಧದಷ್ಟು ಮಹಿಳೆಯರು ಅನಕ್ಷರಸ್ಥರಾಗಿದ್ದಾರೆ. ದಲಿತರು, ಹಿಂದುಳಿದವರು ಮುಖ್ಯವಾಹಿನಿಗೆ ಬರದಂತೆ ತಡೆಯಲಾಗುತ್ತಿವೆ. ಶರಾಬಿನಿಂದ ಮಹಿಳೆಯರ ಮೇಲಾಗುವ ನಾಶ, ನಷ್ಟಗಳು  ಹೇಳಲಾಗದಷ್ಟಿವೆ. ಇವೆಲ್ಲವೂ ರಾಜ್ಯ ನಿರ್ದೇಶನ ತತ್ವಗಳಡಿಯಲ್ಲಿ ಬರುತ್ತದೆ. ಆದರೆ ಸರಕಾರ ಇವುಗಳನ್ನು ಜಾರಿಗೊಳಿಸಲು ಕಾಳಜಿಯನ್ನು ವಹಿಸುತ್ತಿಲ್ಲ ಎಂದು ಮಹಿಳೆಯರ ನಿಜವಾದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.

ಏಕ ನಾಗರಿಕ ಸಂಹಿತೆ ನಿರ್ದಿಷ್ಟವಾದ ರಾಜಕೀಯ ಅಜೆಂಡಾವಾಗಿದೆ. ಇದನ್ನು ಸಂವಿಧಾನಾತ್ಮಕವಾಗಿ ಮತ್ತು ಪ್ರಾಯೋಗಿಕವಾಗಿ ಜಾರಿಗೆ ತರಲಲು ಅಸಾಧ್ಯ ಎಂಬುದು ಅವರಿಗೆ ತಿಳಿದಿದೆ. ಆದರೂ ರಾಷ್ಟ್ರೀಯತೆಗೆ ಮುಖ್ಯ ತಡೆ ಮುಸ್ಲಿಮರು ಎಂಬ ಅಪಪ್ರಚಾರವನ್ನು ನಡೆಸಲಾಗುತ್ತಿದೆ. ಈ ಮೂಲಕ ಬಹುಸಂಖ್ಯಾತ ಹಿಂದೂಗಳನ್ನು ಏಕೀಕೃತಗೊಳಿಸುವುದು ಇವರ ಷಡ್ಯಂತ್ರವಾಗಿದೆ ಎಂದು ಹೇಳಿದರು.

ಹಿಂದೂಗಳ ಮಧ್ಯೆ ಇರುವ ವೈವಿಧ್ಯತೆಯು ಹೇಗೆ ಭಾರತದ ರಾಷ್ಟ್ರೀಯತೆಗೆ ತಡೆಯಾಗಿಲ್ಲವೋ,  ಹಾಗೆಯೇ ಮುಸ್ಲಿಮರ ವೈಯಕ್ತಿಕ ಕಾನೂನು ರಾಷ್ಟ್ರೀಯತೆಗೆ ಇಲ್ಲಿಯವರೆಗೆ ತಡೆಯಾಗಿಲ್ಲ. ಇನ್ನು ಮುಂದೆಯೂ ತಡೆಯಾಗಲಾರದು. ಯಾಕೆಂದರೆ ಮುಸ್ಲಿಂ ವೈಯಕ್ತಿಕ ಕಾನೂನು ಎನ್ನುವುದು ಒಬ್ಬ ವ್ಯಕ್ತಿಯ ವೈಯಕ್ತಿಕ ಮತ್ತು ಕುಟುಂಬ ವಿಷಯಗಳಿಗೆ ಸಂಬಂಧಿಸಿದ ಕಾನೂನು.

ಮೋದಿಯವರ ಆಡಳಿತದಲ್ಲಿ, ದೇಶವನ್ನು ನುಂಗುತ್ತಿರುವ ದೈತ್ಯ ಬಂಡವಾಳಿಗಳ ವಿಜೃಂಭಣೆಯನ್ನು, ಸಾಮಾನ್ಯ ಜನರಲ್ಲಿ ಉಂಟಾಗುತ್ತಿರುವ ಬೆಲೆ ಏರಿಕೆಯ ಪರಿಣಾಮಗಳು,  ಕೊಲೆ, ಅಸಹಿಷ್ಣುತೆ, ದಲಿತ ವಿರೋಧಿ ದಾಳಿಗಳು, ಮುಂಚೂಣಿಗೆ ಬರುತ್ತಿರುವ ದಲಿತ ಮುನ್ನಡೆಗಳು ಮೊದಲಾದವುಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಿ ಬಿಡಲು ಈ ಅಪಪ್ರಚಾರ ನಡೆಸಲಾಗುತ್ತಿದೆ. ದೇಶದ ಸಂವಿಧಾನದಿಂದ ಪ್ರಜಾಪ್ರಭುತ್ವ, ಸಮಾಜವಾದವನ್ನು ತೆಗೆದು ಹಾಕುವ ಪ್ರಯತ್ನಗಳು ಕೂಡ ಈಗಾಗಲೆ ಬಹಿರಂಗವಾಗಿವೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಇಲ್ಲಿ ಮೂರು ತಲಾಕಿಗಿಂತಲೂ ಒಪ್ಪತ್ತಿನ ಊಟಕ್ಕಾಗಿ ಪರದಾಡುತ್ತಿರುವಂತಹ ತೀವ್ರವಾದ ದಾರಿದ್ರ್ಯವಿದೆ.  ಕೊಳಚೆ ಪ್ರದೇಶಗಳಲ್ಲಿ ವಾಸಿಸುವಂತಹ, ತಮ್ಮ ಶಿಕ್ಷಣಕ್ಕಾಗಿ,  ಜೀವನೋಪಾಯಕ್ಕಾಗಿ ವೇಶ್ಯಾವಾಟಿಕೆಗಳಿಗೆ ಬಲಿಯಾದಂತಹ ,  ಅತ್ಯಾಚಾರ, ಒಂಟಿ ಬದುಕು, ಭಿಕ್ಷಾಟನೆಗೆ ಒಳಗಾಗಿರುವಂತಹ ಲಕ್ಷಾಂತರ ಮಹಿಳೆಯರಿದ್ದಾರೆ. ಅವರಿಗೆ ಘನತೆಯ ಬದುಕು ಒದಗಿಸುವಂತಹ ಕೆಲಸ ಸರಕಾರ ಮಾಡಬೇಕು. ಅವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಉದ್ಧಾರಕ್ಕಾಗಿ ಸರಕಾರ ಮುಂದೆ ಬರಬೇಕು ಎಂದು ಆಗ್ರಹಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X