Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿ : 'ತಲೆ...

ನೋಟು ರದ್ದತಿ : 'ತಲೆ ಚಚ್ಚಿಕೊಳ್ಳುತ್ತಿರುವ' ನಾಯ್ಡು ತಿಪ್ಪರಲಾಗ

ವಾರ್ತಾಭಾರತಿವಾರ್ತಾಭಾರತಿ20 Dec 2016 10:59 PM IST
share
ನೋಟು ರದ್ದತಿ : ತಲೆ ಚಚ್ಚಿಕೊಳ್ಳುತ್ತಿರುವ ನಾಯ್ಡು ತಿಪ್ಪರಲಾಗ

ಹೈದರಾಬಾದ್,ಡಿ.20: ಪ್ರಧಾನಿ ನರೇಂದ್ರ ಮೋದಿಯವರ ನೋಟು ರದ್ದತಿ ಕ್ರಮ ವನ್ನು ಆರಂಭದಲ್ಲಿ ಉತ್ಸಾಹದಿಂದಲೇ ಬೆಂಬಲಿಸಿದ್ದ ಬಿಜೆಪಿಯ ಮಿತ್ರ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಇದೀಗ ತಲೆ ಚಚ್ಚಿಕೊಳ್ಳುತ್ತಿದ್ದಾರೆ. ನೋಟು ರದ್ದತಿಯ ಬಳಿಕ ಸೃಷ್ಟಿಯಾಗಿರುವ ನಗದು ಹಣದ ಕೊರತೆಯಿಂದುಂಟಾಗಿರುವ ಬಿಕ್ಕಟ್ಟು ಸದ್ಯಕ್ಕೆ ಬಗೆಹರಿಯುವ ಲಕ್ಷಣಗಳು ಕಂಡು ಬರುತ್ತಿಲ್ಲ ಎಂಬ ಚಿಂತೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

ವಿಜಯವಾಡಾದಲ್ಲಿ ಪಕ್ಷದ ಸಮಾರಂಭವೊಂದರಲ್ಲಿ ಟಿಡಿಪಿ ಶಾಸಕರು ಮತ್ತು ಸಂಸದರನ್ನುದ್ದೇಶಿಸಿ ಮಾತನಾಡಿದ ಅವರು, ನೋಟು ರದ್ದತಿಯನ್ನು ನಾವು ಬಯಸಿರಲಿಲ್ಲ, ಆದರೆ ಅದು ಸಂಭವಿಸಿತು. ನೋಟು ರದ್ದತಿಗೊಂಡು 40ಕ್ಕೂ ಅಧಿಕ ದಿನಗಳು ಕಳೆದು ಹೋಗಿವೆ, ಆದರೆ ಇನ್ನೂ ಬಹಳಷ್ಟು ಸಮಸ್ಯೆಗಳು ಉಳಿದುಕೊಂಡಿವೆ. ಈವರೆಗೂ ಇವುಗಳಿಗೆ ಯಾವುದೇ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ ಎಂದರು.

ನ.8ರಂದು ಮೋದಿ ನೋಟು ನಿಷೇಧವನ್ನು ಪ್ರಕಟಿಸಿದಾಗ ಅದರ ಹೆಗ್ಗಳಿಕೆ ತನ್ನದೇ ಎಂದು ನಾಯ್ಡು ಹೇಳಿಕೊಂಡಿದ್ದರು. ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತು ಹಾಕಲು ದೊಡ್ಡ ಮುಖಬೆಲೆಯ ನೋಟುಗಳನ್ನು ನಿಷೇಧಿಸುವಂತೆ ತಾನು ಪ್ರಧಾನಿಯವರನ್ನು ಪದೇಪದೇ ಕೋರಿಕೊಂಡಿದ್ದೆ ಎಂದು ಅವರು ಆಗ ಕೊಚ್ಚಿಕೊಂಡಿದ್ದರು.

ನಗದುರಹಿತ ಆರ್ಥಿಕತೆಯನ್ನು ಸಾಧಿಸಲು ಮಾರ್ಗಸೂಚಿಯನ್ನು ರೂಪಿಸಲು ರಚಿಸಲಾಗಿರುವ ಮುಖ್ಯಮಂತ್ರಿಗಳ ಸಮಿತಿಯ ಅಧ್ಯಕ್ಷರಾಗಿ ಇತ್ತೀಚಿಗೆ ನೇಮಕ ಗೊಂಡಿರುವ ನಾಯ್ಡು, ನೋಟುಗಳ ನಿಷೇಧ ತನ್ನ ಟಿಡಿಪಿ ಪಕ್ಷದ ನೈತಿಕ ವಿಜಯವಾಗಿದೆ ಎಂದು ಆಗ ಟ್ವೀಟಿಸಿದ್ದರು.

ಆದರೆ ವಿಜಯವಾಡಾದ ಪಕ್ಷದ ಸಮಾರಂಭದಲ್ಲಿ ಅಕ್ಷರಶಃ ತಿಪ್ಪರಲಾಗ ಹಾಕಿದ ಅವರು, ಮೂಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ಜನರು ನಗದು ಹಣಕ್ಕಾಗಿ ಪರದಾಡುತ್ತಿದ್ದಾರೆ. ಆದರೆ ಬ್ಯಾಂಕುಗಳು ಮತ್ತು ಎಟಿಎಂಗಳು ಈಗಲೂ ಖಾಲಿಖಾಲಿಯಾಗಿವೆ. ನೋಟು ರದ್ದತಿಯಿಂದ ಎದುರಾಗಿರುವ ಕಷ್ಟಗಳನ್ನು ಹಗುರಾಗಿಸಲೆಂದೇ ನಾನು ದಿನಕ್ಕೆ ಎರಡು ಗಂಟೆಗಳನ್ನು ಮೀಸಲಿಟ್ಟಿದ್ದೇನೆ. ದಿನವೂ ನಾನು ತಲೆ ಚಚ್ಚಿಕೊಳ್ಳುತ್ತಿದ್ದೇನೆ, ಆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮಾತ್ರ ಸಾಧ್ಯವಾಗುತ್ತಿಲ್ಲ ಎಂದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X