Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ

ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ

ಶಿವಮೊಗ್ಗ-ದಾವಣಗೆರೆ ಭಾಗದ ಸಂಸದರ ನಿರಾಸಕ್ತಿ?

ವಾರ್ತಾಭಾರತಿವಾರ್ತಾಭಾರತಿ20 Dec 2016 11:07 PM IST
share
ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ

 ಬಿ. ರೇಣುಕೇಶ್
ಶಿವಮೊಗ್ಗ, ಡಿ. 20: ಮಲೆನಾಡು ಹಾಗೂ ಉತ್ತರ ಕರ್ನಾಟಕ ಮತ್ತು ಮಧ್ಯ ಕರ್ನಾಟಕ ಭಾಗದ ರೈಲು ಸಂಪರ್ಕ ವ್ಯವಸ್ಥೆಗೆ ಹೊಸ ದಿಕ್ಕು ನೀಡಲಿರುವ, ಆರ್ಥಿಕಾಭಿವೃದ್ಧ್ದಿಗೆ ಪೂರಕವಾಗಿರುವ ಶಿವಮೊಗ್ಗ-ಹರಿಹರ ರೈಲು ಮಾರ್ಗ ನಿರ್ಮಾಣ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರಾಸಕ್ತಿಯಿಂದ ಅಕ್ಷರಶಃ ನನೆಗುದಿಗೆ ಬಿದ್ದಿದ್ದು, ಸದ್ಯದ ಮಟ್ಟಿಗೆ ಈ ಯೋಜನೆ ಅನುಷ್ಠಾನವಾಗುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.


ಕೇಂದ್ರ-ರಾಜ್ಯ ಸರಕಾರಗಳು ಶೇ.50-50ರ ವೆಚ್ಚ ಭರಿಸುವ ಸಹಭಾಗಿತ್ವದಲ್ಲಿ ಈ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಮಾರ್ಗ ಹಾದು ಹೋಗುವ ಸ್ಥಳವನ್ನ್ನೂ ಗುರುತಿಸಲಾಗಿದೆ. ಕಳೆದೆರೆಡು ರೈಲ್ವೆ ಬಜೆಟ್‌ನಲ್ಲಿ ಈ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿಕೊಂಡು ಬರುತ್ತಿದ್ದು, ಪ್ರಸ್ತುತ ಭೂ ಸ್ವಾಧೀನ ಪ್ರಕ್ರಿಯೆ ಹಂತದಲ್ಲಿದೆ. ಆದರೆ ಒಂದೆಡೆ ರಾಜ್ಯ ಸರಕಾರವು ಸಹಭಾಗಿತ್ವದ ರೈಲ್ವೆ ಯೋಜನೆಗಳಿಗೆ ತನ್ನ ಪಾಲಿನ ಅನುದಾನ ನೀಡಲು ಮೀನಮೇಷ ಎಣಿಸುತ್ತಿದೆ.

ಇನ್ನೊಂದೆಡೆ ಕೇಂದ್ರ ರೈಲ್ವೆ ಇಲಾಖೆಯು ತಾನೇ ಘೋಷಿಸಿ ಅನುಮತಿಯಿತ್ತಿರುವ ಈ ಯೋಜನೆಯ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸಿಕೊಂಡು ಬರುತ್ತಿದ್ದು, ತನಗೂ ಈ ಯೋಜನೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದೆ. ಮತ್ತೊಂದೆಡೆ ಶಿವಮೊಗ್ಗ ಹಾಗೂ ದಾವಣಗೆರೆ ಭಾಗದ ಜನಪ್ರತಿನಿಧಿಗಳಿಗೂ ಈ ಯೋಜನೆಯ ಕಾರ್ಯಗತದ ಬಗ್ಗೆ ಮೊದಲಿದ್ದಷ್ಟು ಆಸಕ್ತಿ ಪ್ರಸ್ತುತ ಇಲ್ಲವಾಗಿದೆ. ಈ ಎಲ್ಲ ಕಾರಣಗಳಿಂದ ಮಹತ್ವದ ಯೋಜನೆಯು ನನೆಗುದಿಗೆ ಬಿದ್ದಿದ್ದು, ಕಳೆದ ಹಲವು ವರ್ಷಗಳಿಂದ ಭೂ ಸ್ವಾಧೀನ ಪ್ರಕ್ರಿಯೆಯೇ ಪೂರ್ಣಗೊಳ್ಳದಂತಾಗಿದೆ. ಈ ಯೋಜನೆಗೆ ಸಂಬಂಧಿಸಿದ ಕಡತಗಳು ಧೂಳು ಹಿಡಿಯುತ್ತಿವೆ.

ಬದಲಾಗಿತ್ತು ಮಾರ್ಗ: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಶಿವಮೊಗ್ಗ-ಹರಿಹರ ನಡುವೆ ರೈಲು ಮಾರ್ಗ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಅಂದು ಕೇಂದ್ರ ರೈಲ್ವೆ ಸಚಿವರಾಗಿದ್ದ ಮಮತಾ ಬ್ಯಾನರ್ಜಿಯವರಿಗೆ ಮನವಿ ಮಾಡಿದ್ದರು. ಯೋಜನೆಗೆ ತಗಲುವ ವೆಚ್ಚದಲ್ಲಿ ಶೇ.50ರಷ್ಟನ್ನು ರಾಜ್ಯ ಸರಕಾರದ ವತಿಯಿಂದ ಭರಿಸುವುದರ ಜೊತೆಗೆ ಅಗತ್ಯವಾದ ಭೂಮಿಯನ್ನು ಒದಗಿಸಿ ಕೊಡುವುದಾಗಿ ಬಿಎಸ್‌ವೈ ಭರವಸೆ ನೀಡಿದ್ದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿಯವರು ತಾವು ಮಂಡಿಸಿದ ರೈಲ್ವೆ ಬಜೆಟ್‌ನಲ್ಲಿ ಶಿವಮೊಗ್ಗ-ಹರಿಹರ ರೈಲು ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿ, ಸರ್ವೇಗೆ ಆದೇಶಿಸಿದ್ದರು. ಅಂದು ಶಿವಮೊಗ್ಗ ನಗರದಿಂದ ಹೊಳೆಲೂರು, ಹೊನ್ನಾಳ್ಳಿ ಮಲೇಬೆನ್ನೂರು ಮಾರ್ಗದ ಸರ್ವೇ ನಡೆದು ಇದಕ್ಕೆ ಕೇಂದ್ರ ರೈಲ್ವೆ ಇಲಾಖೆ ಕೂಡ ಅನುಮೋದನೆ ನೀಡಿತ್ತು. ಇನ್ನೇನೂ ಮಾರ್ಗ ನಿರ್ಮಾಣ ಕಾರ್ಯ ಆರಂಭವಾಗಬೇಕು ಎನ್ನುವಷ್ಟರಲ್ಲಿ ಹೊಳಲೂರು ಸುತ್ತಮುತ್ತಲಿನ ಭಾಗದ ನಾಗರಿಕರು ತಮ್ಮ ಭಾಗದಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಬೀದಿಗಿಳಿದು ಹೋರಾಟ ನಡೆಸಿದ್ದರು. ಇದರಿಂದ ರೈಲ್ವೆ ಇಲಾಖೆಯು ಈ ಮಾರ್ಗ ಕೈಬಿಟ್ಟು ಶಿವಮೊಗ್ಗ ನಗರದ ಸೋಮಿನಕೊಪ್ಪ, ಬಸವಗಂಗೂರು, ಕೊಮ್ಮನಾಳು ಮಾರ್ಗವಾಗಿ ಹರಿಹರಕ್ಕೆ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ ನಡೆಸಿತ್ತು.

ಈ ಮಾರ್ಗ ಕಾರ್ಯಸಾಧುವಾಗಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಹೊಸ ಮಾರ್ಗ ನಿರ್ಮಾಣಕ್ಕೆ ಅನುಮತಿ ಹಾಗೂ ಅನುದಾನ ಕೂಡ ಬಿಡುಗಡೆಯಾಗಿ ಭೂ ಸ್ವಾಧೀನ ಪ್ರಕ್ರಿಯೆಗೆ ಕ್ರಮಕೈಗೊಳ್ಳಲಾಗಿತ್ತು.
ಗೊಂದಲದಲ್ಲಿ ರೈತ ಸಮುದಾಯ...
 ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅಗತ್ಯವಾದ ಭೂಮಿಯನ್ನು ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಜಿಲ್ಲಾಡಳಿತಗಳು ಈಗಾಗಲೇ ಗುರುತಿಸಿವೆ. ಭೂ ಸ್ವಾಧೀನ ಪ್ರಕ್ರಿಯೆ ಕೂಡ ಆರಂಭಿಸಿದ್ದು, ಇದು ಆರಂಭವಾಗಿ ಸರಿಸುಮಾರು ಎರಡು, ಮೂರು ವರ್ಷ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಜಮೀನು ಮಾಲಕರಿಗೆ ದರ ನಿಗದಿಯೂ ಮಾಡಿಲ್ಲ. ಮತ್ತೊಂದೆಡೆ ಈ ಯೋಜನೆ ಅನುಷ್ಠಾನವಾಗಲಿದೆಯೋ? ಇಲ್ಲವೋ? ಎಂಬ ಅನುಮಾನ ಕೂಡ ಕಾಡಲಾರಂಭಿಸಿದೆ. ಇನ್ನೊಂದೆಡೆ ರೈಲು ಮಾರ್ಗ ಹಾದು ಹೋಗಲಿದೆ ಎಂಬ ಕಾರಣದಿಂದ ಸಂಬಂಧಿಸಿದ ಭೂ ಮಾಲಕರು ತಮ್ಮ ಜಮೀನುಗಳ ಪರಭಾರೆ ಮಾಡಲು, ಆಸ್ತಿ ಹಂಚಿಕೆ ಸೇರಿದಂತೆ ಮತ್ತಿತರ ಜಮೀನು ಸಂಬಂಧಿತ ಕೆಲಸ ಕಾರ್ಯ ಮಾಡಿಕೊಳ್ಳಲು ಅಡ್ಡಿಯಾಗಿದೆ. ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X