Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತನ್ನ ಕುಗ್ರಾಮದ ದುಸ್ಥಿತಿ ಕುರಿತು...

ತನ್ನ ಕುಗ್ರಾಮದ ದುಸ್ಥಿತಿ ಕುರಿತು ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ

ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಶಾಲಾ ಬಾಲಕಿಯ ಪತ್ರ !

ವಾರ್ತಾಭಾರತಿವಾರ್ತಾಭಾರತಿ20 Dec 2016 11:08 PM IST
share
ತನ್ನ ಕುಗ್ರಾಮದ ದುಸ್ಥಿತಿ ಕುರಿತು ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ

ಅಝೀರ್ ಕಿರುಗುಂದ
ಚಿಕ್ಕಮಗಳೂರು, ಡಿ.20: ‘ನಮ್ಮ ಊರಲ್ಲಿ ಪ್ರಾಥಮಿಕ ಶಾಲೆ ಇಲ್ಲ. ಹಾಗಾಗಿ ಮಕ್ಕಳು ಅನಿವಾರ್ಯವಾಗಿ ಚಿಕ್ಕ ವಯಸ್ಸಿನಲ್ಲಿಯೇ ಹೆತ್ತವರ ಪ್ರೀತಿಯನ್ನು ತೊರೆದು ಶಿಕ್ಷಣಕ್ಕಾಗಿ ಊರು ಬಿಡಬೇಕಾದ ಪರಿಸ್ಥಿತಿ ಇದೆ. ನೀವು ಡಿಜಿಟಲ್ ಇಂಡಿಯಾ ಅಂತೀರಿ, ಆದರೆ, ನಮ್ಮ ಊರಲ್ಲಿ ಮೊಬೈಲ್ ನೆಟ್‌ವರ್ಕ್ ಸಿಗೋದೇ ಇಲ್ಲ’ ಎಂದು ವಿದ್ಯಾರ್ಥಿನಿ ಯೋರ್ವಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತನ್ನ ಗ್ರಾಮದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದ್ದಾಳೆ.
 ಪತ್ರಕ್ಕೆ ಸ್ಪಂದಿಸಿದಿಸಿರುವ ಪ್ರಧಾನಿ ಕಾರ್ಯಾ ಲಯದ ಅಧಿಕಾರಿಗಳು ಚಿಕ್ಕಮಗಳೂರು ಜಿಲ್ಲಾ ಪಂಚಾಯತ್‌ನ ಕಚೇರಿಗೆ ಪತ್ರ ಬರೆದು ತಕ್ಷಣ ಈ ಬಗ್ಗೆ ವರದಿ ನೀಡುವಂತೆ ಕೋರಿದ್ದಾರೆ.


 ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಪಂ ವ್ಯಾಪ್ತಿಗೆ ಸೇರಿದ ಅಲೆಖಾನ್ ಹೊರಟ್ಟಿ ಎಂಬ ಪುಟ್ಟ ಹಳ್ಳಿಯ ನಿವಾಸಿ ಗೋಪಾಲ್‌ಗೌಡ ಮತ್ತು ಪವಿತ್ರ ದಂಪತಿಯ ಪುತ್ರಿ ನಮನಾ ಜಿ., ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿಯಾಗಿದ್ದಾಳೆ. ನೀವು ದೇಶದ ಪ್ರಧಾನಿ ಆದ ಬಳಿಕ ನಿಮ್ಮ ಕೆಲಸ ಕಾರ್ಯಗಳನ್ನು ಪತ್ರಿಕೆ ಮತ್ತು ಟಿವಿ ಮಾಧ್ಯಮಗಳ ಮೂಲಕ ನೋಡಿ ಪ್ರಭಾವಿತಳಾಗಿದ್ದೇನೆ. ಆದ್ದರಿಂದಲೇ ನನ್ನ ಪುಟ್ಟ ಗ್ರಾಮವನ್ನು ಮಾದರಿ ಗ್ರಾಮವಾಗಿ ಪರಿವರ್ತಿಸಬೇಕೆಂದು ನಿಮಗೆ ಪತ್ರ ಬರೆಯುತ್ತಿರುವುದಾಗಿ ತಿಳಿಸಿದ್ದಾಳೆ.
‘ನನ್ನ ಊರು ಜಾವಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೇಖಾನ್ ಹೊರಟ್ಟಿ, ಚಿಕ್ಕಮ ಗಳೂರು ಜಿಲ್ಲೆಯ ಗಡಿ ಪ್ರದೇಶದ ಪಶ್ಚಿಮ ಘಟ್ಟದ ತಪ್ಪಲು ಚಾರ್ಮಾಡಿ ಘಾಟ್ ಎಂಬ ಪ್ರದೇಶದಲ್ಲಿ ಇದೆ. ಪ್ರಾಕೃತಿಕವಾಗಿ ಸುಂದರವಾಗಿಯೇ ಇದೆ. ಆದರೆ, ಜನಪ್ರತಿನಿಧಿಗಳ ನಿರ್ಲಕ್ಷಕ್ಕೆ ಒಳಗಾಗಿ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂದು ದೂರಿದ್ದಾಳೆ.


 ‘ಊರಿಗೆ ಮುಖ್ಯ ರಸ್ತೆಯಿಂದ ಕಾಡು ರಸ್ತೆಯಾಗಿ ಸುಮಾರು 5-6 ಕಿ.ಮೀ. ಕಾಲ್ನಡಿಗೆಯಾಗಿ ನಡೆದೇ ಹೋಗಬೇಕಾದ ಸ್ಥಿತಿ ಇದ್ದು, ಸಮರ್ಪಕ ರಸ್ತೆ ಕನಸಿನ ಮಾತಾಗಿದೆ’ಎಂದು ಪ್ರಧಾನಿ ಅವರಿಗೆ ತನ್ನ ಗ್ರಾಮವಾಸಿಗಳ ಸಂಕಷ್ಟಗಳನ್ನು ವ್ಯಕ್ತ ಪಡಿಸಿದ್ದಾಳೆ.
ಇಲ್ಲಿನ ಚಿಕ್ಕ-ಪುಟ್ಟ ಮಕ್ಕಳು 4ನೆ ತರಗತಿಯ ಪ್ರಾಥಮಿಕ ಹಂತದ ಶಾಲೆ ಮುಕ್ತಾಯದ ಬಳಿಕ ದೂರದ ವಸತಿ ಶಾಲೆಗಳು ಅಥವಾ ನೆಂಟರ ಮನೆಗಳಲ್ಲಿ ವಸತಿ ಪಡೆದು ಶಾಲೆಗಳಿಗೆ ತೆರಳುವಂತಹ ದುಸ್ಥಿತಿ ಇದೆ. ಇಲ್ಲಿಂದ ಪಟ್ಟಣಕ್ಕೆ, ಪ್ರೋಢಶಾಲೆ ಬಳಿಕ ಕಾಲೇಜುಗಳಿಗೆ ತೆರಳಲು ಕಾಡುರಸ್ತೆಯಾಗಿ ಪ್ರತಿನಿತ್ಯ ಐದಾರು ಕಿ.ಮೀ. ಒಬ್ಬಂಟಿಯಾಗಿ ಸಂಚರಿಸಬೇಕು. ಸಣ್ಣಪುಟ್ಟ ವಸ್ತುಗಳ ಖರೀದಿಗೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರಲು ಕೊಟ್ಟಿಗೆಹಾರ ತನಕ ಕಾಲ್ನಡಿಗೆ ಮೂಲಕ ನಡೆಯುವುದು ಅನಿವಾರ್ಯ ಎಂದು ಪತ್ರದಲ್ಲಿ ವಿವರಿಸಿದ್ದಾಳೆ.


  ಈ ಸಂಬಂಧ ಎಚ್ಚೆತುಕೊಂಡಿರುವ ಜಿಲ್ಲಾ ಪಂಚಾಯತ್ ಸಿಇಒ ಡಾ.ರಾಗಪ್ರಿಯ ಮತ್ತು ಕಚೇರಿಯ ಅಧಿಕಾರಿಗಳು, ತಕ್ಷಣವೇ ಮೂಡಿಗೆರೆ ತಾಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್ತ್ ಮತ್ತು ಜಾವಳಿ ಗ್ರಾಪಂ ಪಿಡಿಒ ಜೇಕುಂರನ್ನು ಜಿಪಂ ಕಚೇರಿಗೆ ಕರೆಯಿಸಿ ಹಳ್ಳಿಯ ದಯನೀಯ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ವರೆಗೆ ಕತ್ತಲ ಕೂಪವಾಗಿರುವ ಹಳ್ಳಿಯನ್ನು ಅಭಿವೃದ್ಧಿಪಡಿಸುವ ಮಾರ್ಗೋಪಾಯಗಳ ಬಗ್ಗೆತಿಳಿಯಲು ಮಂಗಳವಾರ ಜಿಲ್ಲಾಡಳಿತ ಮತ್ತು ಮೂಡಿಗೆರೆ ತಾಲೂಕು ಆಡಳಿತದ ಹಿರಿಯ ಅಧಿಕಾರಿಗಳು ಅಲೆಖಾನ್ ಹೊರಟ್ಟಿಯತ್ತ ತೆರಳಿದ್ದಾರೆ. ಇನ್ನಾದರೂ ಈ ಹಳ್ಳಿ ಅಧಿಕಾರಿಗಳ ಕಣ್ಣಿಗೆ ಬಿದ್ದು ಅಭಿವೃದ್ಧಿಯಾಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ.


ಮೂಲಭೂತ ಸೌಲಭ್ಯಗಳ ಕೊರತೆ
ಅಲೆಖಾನ್ ಹೊರಟ್ಟಿ ಎಂಬ ಈ ಕುಗ್ರಾಮಕ್ಕೆ ಡಾಂಬರು ರಸ್ತೆ ಇಲ್ಲ. ಅಂಗನವಾಡಿ ಕೇಂದ್ರವಿಲ್ಲ, ದೂರವಾಣಿ, ಮೊಬೈಲ್ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವೂ ಇಲ್ಲ. ವಾಹನ ಸಂಪರ್ಕವಂತೂ ಇಲ್ಲವೇ ಇಲ್ಲ. ಅಲ್ಲದೇ ಕುಡಿಯುವ ನೀರು ಸರಬರಾಜು ಕೂಡ ನಡೆಯುವುದಿಲ್ಲ. ಇಲ್ಲಿನ ಜನರು ನೈಸರ್ಗಿ ಕ ನೀರನ್ನು ಬಳಸುತ್ತಾರೆ. ಬೆರಳೆಣಿಕೆಯ ಕೆಲವು ಮನೆಗಳಲ್ಲಿ ಮಾತ್ರವೇ ಸೋಲಾರ್ ದೀಪಗಳು ಉರಿಯುತ್ತವೆ. ಒಂದೆರಡು ಮನೆಗಳಲ್ಲಿ ಮೊಬೈಲ್ ಫೋನ್‌ಗಳು ಇವೆಯಾದರೂ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಯಾವುದೇ ಸಂಪರ್ಕ ಸಾಧಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X