Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಎಂ ಆಗಮನಕ್ಕೆ ಒತ್ತಾಯ : ಜೆಡಿಎಸ್ ನಿಂದ...

ಸಿಎಂ ಆಗಮನಕ್ಕೆ ಒತ್ತಾಯ : ಜೆಡಿಎಸ್ ನಿಂದ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ21 Dec 2016 6:33 PM IST
share
ಸಿಎಂ ಆಗಮನಕ್ಕೆ ಒತ್ತಾಯ : ಜೆಡಿಎಸ್ ನಿಂದ ಉಪವಾಸ ಸತ್ಯಾಗ್ರಹ

ಮಡಿಕೇರಿ ಡಿ.21 : ದಿಡ್ಡಳ್ಳಿಯಲ್ಲಿ ಆದಿವಾಸಿಗಳನ್ನು ಬೀದಿಪಾಲು ಮಾಡಿದ ಘಟನೆಯನ್ನು ಖಂಡಿಸಿ ಹಾಗೂ ಸರ್ಕಾರ ನಿರಾಶ್ರಿತರಿಗೆ ತಕ್ಷಣ ನಿವೇಶನ ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಿ ಜಾತ್ಯಾತೀತ ಜನತಾದಳ ಪಕ್ಷದ ಜಿಲ್ಲಾ ಘಟಕ ನಗರದ ಗಾಂಧಿ ಮಂಟಪದ ಎದುರು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿತು.

      ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಅವರ ನೆೇತೃತ್ವದಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಆದಿವಾಸಿಗಳು ಅಧಿಕಾರಿಗಳ ಕ್ರಮವನ್ನು ಖಂಡಿಸಿ ಕ್ರಾಂತಿ ಗೀತೆಗಳನ್ನು ಹಾಡಿದರು. ಆದಿವಾಸಿಗಳನ್ನು ಕಡೆಗಣಿಸಿದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

      ಈ ಸಂದರ್ಭ ಮಾತನಾಡಿದ ಸಂಕೇತ್ ಪೂವಯ್ಯ, ಅನಾದಿಕಾಲದಿಂದಲೂ ಜಿಲ್ಲೆಯ ವಿವಿಧೆಡೆ ನೆಲೆ ಕಂಡುಕೊಂಡಿರುವ ಪ್ರತಿಯೊಂದು ಗಿರಿಜನ ಕುಟುಂಬಗಳಿಗೆ ಭೂಮಿಯ ಹಕ್ಕನ್ನು ನೀಡಬೇಕು. ಆದರೆ, ಆರು ತಿಂಗಳ ಹಿಂದೆ ದಿಡಳ್ಳಿ ವ್ಯಾಪ್ತಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸವಾಗಿದ್ದವರನ್ನು ಏಕಾಏಕಿ ಬೀದಿ ಪಾಲು ಮಾಡಿದ ಹಿನ್ನೆಲೆ ಮಾನವೀಯ ನೆಲೆಗಟ್ಟಿನಡಿ ಈ ನಿರಾಶ್ರಿತ 577 ಕುಟುಂಬಗಳ ಪರವಾಗಿ ಹೋರಾಟ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದರು.

      ಮುಖ್ಯಮಂತ್ರಿಗಳು ದಿಡ್ಡಳ್ಳಿಗೆ ಆಗಮಿಸಿ ಗಿರಿಜನರ ಸಮಸ್ಯೆಗಳನ್ನು ಆಲಿಸಿ, ನಿವೇಶನ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ದಿಡ್ಡಳ್ಳಿ ನಿರಾಶ್ರಿತರ ಪರವಾದ ಪಕ್ಷದ ಹೋರಾಟ ನಿರಂತರವಾಗಿ ನಡೆಯಲಿದ್ದು, ಡಿ.23 ರಂದು ಮಡಿಕೇರಿ ನಗರದಲ್ಲಿ ನಡೆಯುವ ಆದಿವಾಸಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸುವುದಾಗಿ ತಿಳಿಸಿದರು. ಡಿ.24 ರಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ನ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿಯವರು ದಿಡ್ಡಳ್ಳಿಗೆ ಭೇಟಿ ನೀಡಿ, ನಿರಾಶ್ರಿತರ ನೋವನ್ನು ಹಂಚಿಕೊಳ್ಳಲಿದ್ದಾರೆ.ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರು ಲಾಟರಿ, ಸಾರಾಯಿ ನಿಷೇಧ ಹಾಗೂ ಗ್ರಾಮ ವಾಸ್ತವ್ಯದ ಮೂಲಕ ಜನಪರ ಕಾಳಜಿಯನ್ನು ಹೊಂದಿದ್ದರು. ಇದೇ ರೀತಿಯ ಕಾಳಜಿ ದಿಡ್ಡಳ್ಳಿ ನಿರಾಶ್ರಿತರ ಪರವಾಗಿಯೂ ತೋರಲಿದ್ದಾರೆ ಎಂದು ಸಂಕೇತ್ ಪೂವಯ್ಯ ಹೇಳಿದರು.

      ಪಕ್ಷದ ಜಿಲ್ಲಾ ವಕ್ತಾರ ಪಿ.ಎಸ್. ಭರತ್ ಕುಮಾರ್, ಮಡಿಕೆೇರಿ ತಾಲ್ಲೂಕು ಅಧ್ಯಕ್ಷ ಡಾ ಯಾಲದಾಳು ಮನೋಜ್ ಬೋಪಯ್ಯ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಿ.ಎಲ್. ವಿಶ್ವ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮನ್ಸೂರ್ ಆಲಿ, ಪಕ್ಷದ ಮಾಜಿ ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಮುಖರಾದ ಸುರೇಶ್ ಗೋಪಿ, ಅಬ್ರಾರ್, ಶಶಿಕಲಾ ಸುವರ್ಣ ಐಗೂರು ಪಂಚಾಯ್ತಿ ಸದಸ್ಯ ಚೆನ್ನಪ್ಪ, ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಜಿಲ್ಲಾಧ್ಯಕ್ಷ ಸಂದೇಶ್ ಜೋಸೆಪ್ ಡಿಸೋಜ, ಮಹಿಳಾ ಘಟಕದ ಅಧ್ಯಕ್ಷೆ ಪಡಿಕಲ್ ಕುಸುಮಾವತಿ ಚಂದ್ರಶೇಖರ್, ಬೊಳ್ಳಿಯಂಡ ಗಣೇಶ್, ಯಾದವ್, ಮಂದಣ್ಣ ಮತ್ತಿತರ ಪ್ರಮುಖರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X