Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಹಾದಂಗಡಿಯಲ್ಲಿ ಡಿಜಿಟಲ್ ಪಾವತಿಗೆ...

ಚಹಾದಂಗಡಿಯಲ್ಲಿ ಡಿಜಿಟಲ್ ಪಾವತಿಗೆ ಪಾಸ್ವಾನ್ ವಿಫಲ

ವಾರ್ತಾಭಾರತಿವಾರ್ತಾಭಾರತಿ21 Dec 2016 8:04 PM IST
share
ಚಹಾದಂಗಡಿಯಲ್ಲಿ ಡಿಜಿಟಲ್ ಪಾವತಿಗೆ ಪಾಸ್ವಾನ್ ವಿಫಲ

ಹಾಜಿಪುರ(ಬಿಹಾರ), ಡಿ.21: ಕೇಂದ್ರ ಸಚಿವ ರಾಂವಿಲಾಸ್ ಪಾಸ್ವಾನ್, ನಗದು ರಹಿತ ವ್ಯವಹಾರಕ್ಕೆ ಪ್ರೋತ್ಸಾಹ ನೀಡುವುದಕ್ಕಾಗಿ ತನ್ನ ಹಾಜಿಪುರ ಲೋಕಸಭಾ ಕ್ಷೇತ್ರಕ್ಕೆ ಬಂದಿದ್ದರು. ಆದರೆ, ನಿಧಾನಗತಿಯ ಅಂತರ್ಜಾಲ ಸಂಪರ್ಕದಿಂದಾಗಿ ಅವರ ಈ ಪ್ರಯತ್ನ ವಿಫಲವಾಗಿದೆ.

ಹಾಜಿಪುರದ ಅಂಗಡಿಯೊಂದರಲ್ಲಿ ಚಹಾ ಸೇವಿಸಿದ ಬಳಿಕ ಪಾಸ್ವಾನ್ ಕಾರ್ಡ್‌ನ ಮೂಲಕ ಹಣಪಾವತಿಸಲು ಪ್ರಯತ್ನಿಸುತ್ತಿದ್ದರು. ಅವರು ಸುಮಾರು ಅರ್ಧ ತಾಸಿನ ಕಾಲ ಪ್ರಯತ್ನಿಸಿದರಾದರೂ, ಅಂತರ್ಜಾಲ ಸಂಪರ್ಕ ನಿಧಾನವಾಗಿದ್ದುದರಿಂದ ಆನ್‌ಲೈನ್ ಪಾವತಿಗೆ ವಿಫಲರಾದರೆಂದು ವರದಿಯೊಂದು ತಿಳಿಸಿದೆ.

ಹಲವು ಬಾರಿ ಪ್ರಯತ್ನಿಸಿದರೂ ಆನ್‌ಲೈನ್ ಪಾವತಿಗೆ ವಿಫಲರಾದ ಪಾಸ್ವಾನ್ ಅಸಹಾಯಕರಾಗಿ ನೋಡುತ್ತಿದ್ದರು. ಬಳಿಕ ಅವರ ಆಪ್ತ ಕಾರ್ಯದರ್ಶಿ ತನ್ನ ಫೋನ್‌ನ ಮೂಲಕ ಹಣ ಪಾವತಿ ಮಾಡಿದರು. ನಗದು ರಹಿತ ವಹಿವಾಟಿಗೆ ಉತ್ತೇಜನ ನೀಡುವ ಸಲುವಾಗಿ ಇಲ್ಲಿಗೆ ಬಂದಿದ್ದ ಪಾಸ್ವಾನ್, ಕಾರ್ಡ್ ಬಳಸಿ ಕೆಲವು ವಸ್ತುಗಳನ್ನು ಖರೀದಿಸಲು ಬಯಸಿದ್ದರು. ಈ ಮೂಲಕ ಜನಸಾಮಾನ್ಯರೂ ನಗದುರಹಿತ ವಹಿವಾಟು ನಡೆಸಬಹುದೆಂದು ತೋರಿಸುವುದು ಅವರ ಉದ್ದೇಶವಾಗಿತ್ತು. ಮೊದಲು ಸಿನೆಮಾ ರಸ್ತೆಯ ಸಿಹಿತಿಂಡಿಗಳ ಅಂಗಡಿಯೊಂದಕ್ಕೆ ಹೋದ ಪಾಸ್ವಾನ್, ಸಿಹಿ ತಿಂಡಿ ಹಾಗೂ ಕೇಕ್ ಖರೀದಿಸಿ, ಕಾರ್ಡ್ ಮೂಲಕ ಹಣ ಪಾವತಿಸಿದ್ದರು. ಆದರೆ, ಚಹಾದಂಗಡಿಯಲ್ಲಿ ಆನ್‌ಲೈನ್ ಪಾವತಿಗೆ ಅವರು ವಿಫಲರಾದರೆಂದು ಕೆಲವು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ.
ಅಲ್ಲಿಂದ ಪಾಸ್ವಾನ್ ಬಟ್ಟೆಯಂಗಡಿಗೆ ಹೋಗಿ 2 ಜೊತೆ ಸಾಕ್ಸ್ ಖರೀದಿಸಿ ಆನ್‌ಲೈನ್ ಪಾವತಿ ಮಾಡಿದ್ದಾರೆ.

ಭಾರತದಾದ್ಯಂತ ಜನರು ನಗದು ರಹಿತ ಪಾವತಿ ವಿಧಾನ ಬಳಸಬೇಕು. ಇದರಿಂದ ಖರೀದಿದಾರರಿಗೂ, ಅಂಗಡಿಗಾರರಿಗೂ ಲಾಭವಿದೆಯೆಂದು ಅವರು ಬಳಿಕ ಹೇಳಿದ್ದಾರೆ.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X