Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯಾಗುವುದಕ್ಕೆ ಮುನ್ನ ಸಹಾರಾದಿಂದ...

ಪ್ರಧಾನಿಯಾಗುವುದಕ್ಕೆ ಮುನ್ನ ಸಹಾರಾದಿಂದ 40 ಕೋ.ರೂ.ಪಡೆದಿದ್ದ ಮೋದಿ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ21 Dec 2016 8:25 PM IST
share
ಪ್ರಧಾನಿಯಾಗುವುದಕ್ಕೆ ಮುನ್ನ ಸಹಾರಾದಿಂದ 40 ಕೋ.ರೂ.ಪಡೆದಿದ್ದ ಮೋದಿ: ರಾಹುಲ್ ಗಾಂಧಿ

ಹೊಸದಿಲ್ಲಿ,ಡಿ.21: ಕೇಂದ್ರ ಸರಕಾರದ ವಿರುದ್ಧ ತನ್ನ ದಾಳಿಯನ್ನು ಬುಧವಾರ ಇನ್ನಷ್ಟು ತೀವ್ರಗೊಳಿಸಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮುನ್ನ ಸಹಾರಾ ಇಂಡಿಯಾ ಉದ್ಯಮ ಸಮೂಹವು ಅವರಿಗೆ 40 ಕೋ.ರೂ.ಗಳನ್ನು ಪಾವತಿಸಿತ್ತು ಎಂದು ಆರೋಪಿಸಿದರು.

ಉತ್ತರ ಗುಜರಾತ್‌ನ ಮೆಹ್ಸಾನಾದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2013-14 ರಲ್ಲಿ ಆರು ತಿಂಗಳ ಅವಧಿಯಲ್ಲಿ ಒಂಬತ್ತು ಬಾರಿ ಸಹಾರಾದಿಂದ ಹಣವನ್ನು ಪಡೆದು ಕೊಂಡಿದ್ದರು ಎಂದು ಹೇಳಿದರು. 2014ರಲ್ಲಿ ಸಹಾರಾದ ಕಚೇರಿಯ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು 2013,ಅಕ್ಟೋಬರ್-2014,ಫೆಬ್ರವರಿ ನಡುವೆ ಮೋದಿಯವರಿಗೆ ಹಣ ಪಾವತಿಯನ್ನು ತೋರಿಸುವ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದರು ಎಂದ ಅವರು, ಎರಡೂವರೆ ವರ್ಷಗಳಾದರೂ ಆದಾಯ ತೆರಿಗೆ ಇಲಾಖೆಯು ಈ ದಾಖಲೆಗಳ ಬಗ್ಗೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಬೆಟ್ಟು ಮಾಡಿದರು.

 ಆದಾಯ ತೆರಿಗೆ ಇಲಾಖೆಯ ಬಳಿಯಿರುವ ದಾಖಲೆಗಳಂತೆ ಮೋದಿಯವರಿಗೆ 2013ರ ಅ.30ರಂದು 2.5 ಕೋ.ರೂ.,ನ.12ರಂದು 5ಕೋ.ರೂ.,ನ.27ರಂದು 2.5 ಕೋ.ರೂ., ನ.29ರಂದು 5 ಕೋ.ರೂ.,ಡಿ.6ರಂದು 5 ಕೋ.ರೂ. ಮತ್ತು ಡಿ.19ರಂದು 5 ಕೋ.ರೂ.,2014ರ ಜ.13ರಂದು 5 ಕೋ.ರೂ.,ಜ.28ರಂದು 5 ಕೋ.ರೂ.ಮತ್ತು ಫೆ.22ರಂದು 5 ಕೋ.ರೂ.ಗಳನ್ನು ಸಹಾರಾ ಪಾವತಿಸಿದೆ ಎಂದು ರಾಹುಲ್ ವಿವರಿಸಿದರು.
ನೋಟು ರದ್ದತಿ ಕುರಿತು ಮೋದಿ ವಿರುದ್ಧ ತನ್ನ ದಾಳಿಯನ್ನು ಮುಂದುವರಿಸಿದ ಅವರು, ಸರಕಾರದ ಕ್ರಮವು ಭ್ರಷ್ಟಾಚಾರ ಅಥವಾ ಕಪ್ಪುಹಣದ ವಿರುದ್ಧ ಅಲ್ಲ, ಅದು ಪ್ರಾಮಾಣಿಕ ಬಡಜನರ ವಿರುದ್ಧದ ಕ್ರಮವಾಗಿದೆ ಎಂದರು.

ನೋಟು ರದ್ದತಿಯ ಬಳಿಕ ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ಪ್ರಸ್ತಾಪಿಸಿದ ಅವರು, ರೈತರು ಚೆಕ್ ಅಥವಾ ಕಾರ್ಡ್ ಬಳಸಿ ಬೀಜಗಳನ್ನು ಖರೀದಿಸುವುದಿಲ್ಲ, ಅವರು ನಗದು ಹಣ ನೀಡುತ್ತಾರೆ. ಪ್ರಧಾನಿ ಮೋದಿಯವರು ಅವರಿಂದ ಆ ದುಡ್ಡನ್ನೂ ಕಸಿದುಕೊಂಡಿದ್ದಾರೆ ಎಂದರು.
ಭ್ರಷ್ಟಾಚಾರವನ್ನು ನಿರ್ಮೂಲಿಸಲು ಸರಕಾರವು ಏನಾದರೂ ಕ್ರಮ ಕೈಗೊಂಡಿದ್ದಿದ್ದರೆ ಕಾಂಗ್ರೆಸ್ ಅದನ್ನು ಬೆಂಬಲಿಸುತ್ತಿತ್ತು ಎಂದ ಅವರು, ಮೋದಿಯವರು ಸಂಸತ್ತಿನಲ್ಲಿ ಕಾರ್ಮಿಕ ವರ್ಗವನ್ನು ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿದರು.

 ನೋಟು ರದ್ದತಿ ಕುರಿತಂತೆ ಸರಕಾರವನ್ನು ತರಾಟೆಗೆತ್ತಿಕೊಂಡ ರಾಹುಲ್, ಎಲ್ಲ ಹಣವೂ ಕಪ್ಪುಹಣವಲ್ಲ ಮತ್ತು ಎಲ್ಲ ಕಪ್ಪುಹಣವೂ ನೋಟುಗಳಲ್ಲ ಎಂದರು. ಸರಕಾರವು ಕಳಂಕಿತ ಉದ್ಯಮಿ ವಿಜಯ ಮಲ್ಯರ ಸಾಲವನ್ನು ಮನ್ನಾ ಮಾಡಿರುವುದನ್ನು ಪ್ರಸ್ತಾಪಿಸಿದ ಅವರು, ಶೇ.1ರಷ್ಟು ಶ್ರೀಮಂತರು ಸಾಲದ ರೂಪದಲ್ಲಿ ಪಡೆದಿರುವ ಹಣವನ್ನು ವಾಪಸ್ ತರಲು ಮೋದಿಯವರಿಗೆ ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಅವರ ಸಾಲವನ್ನು ಕೆಟ್ಟಸಾಲವೆಂದು ತೊಡೆದುಹಾಕಲು ಬಡವರ ಹಣವನ್ನು ಮೋದಿ ಬಳಸಿಕೊಳ್ಳುತ್ತಿದ್ದಾರೆ. ಸ್ವಿಸ್ ಬ್ಯಾಂಕುಗಳಲ್ಲಿ ಕಪ್ಪುಹಣವನ್ನಿಟ್ಟವರ ಪಟ್ಟಿಯನ್ನು ಸ್ವಿಟ್ಜರ್‌ಲ್ಯಾಂಡ್ ಮೋದಿಯವರಿಗೆ ನೀಡಿರುವಾಗ ಅವರ ಹೆಸರುಗಳನ್ನು ಸಂಸತ್ತಿನಲ್ಲೇಕೆ ಬಹಿರಂಗೊಳಿಸುತ್ತಿಲ್ಲ ಎಂದು ಪ್ರಶ್ನಿಸಿದರು.

♦♦♦♦♦♦♦♦♦♦♦♦♦♦♦♦♦♦♦♦♦♦♦♦♦

ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?

ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X