ಕುಖ್ಯಾತ ಆರೋಪಿ ಪ್ರದೀಪ್ ಮೆಂಡನ್ ಸೆರೆ
![ಕುಖ್ಯಾತ ಆರೋಪಿ ಪ್ರದೀಪ್ ಮೆಂಡನ್ ಸೆರೆ ಕುಖ್ಯಾತ ಆರೋಪಿ ಪ್ರದೀಪ್ ಮೆಂಡನ್ ಸೆರೆ](https://www.varthabharati.in/sites/default/files/images/articles/2016/12/21/21 mendon.jpg)
ಮಂಗಳೂರು,ಡಿ.21: ಕೊಲೆ, ಕೊಲೆಯತ್ನ ಹಾಗೂ ಶಸಾಸ ಕಾಯ್ದೆ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಉಡುಪಿ ಅಂಬಲಪಾಡಿ ಆದಿ ಉಡುಪಿಯ ಪ್ರದೀಪ್ ಮೆಂಡನ್ (46) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದ ಈತ ಕಳೆದ 7 ತಿಂಗಳುಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅಲ್ಲದೆ ಬೇರೆ ವ್ಯಕ್ತಿಯ ಹೆಸರಿನಲ್ಲಿ ಸಿಮ್ ಕಾರ್ಡ್ ಉಪಯೋಗಿಸಿ ಈತ ಕಾರ್ಯಾಚರಿಸುತ್ತಿದ್ದ.
ನಗರದ ಕದ್ರಿ ಪಾರ್ಕ್ ಬಳಿಯಿರುವ ಗೋರಕ್ಷನಾಥ ಹಾಲ್ ಬಳಿ ಈತ ಇದ್ದ್ದಾನೆಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡರು. ಅಲ್ಲದೆ ಈತ ಉಪಯೋಗಿಸುತ್ತಿದ್ದ ಸಿಮ್ಕಾರ್ಡ್ ಹಾಗೂ ಮೊಬೈಲ್ ೆನ್ನ್ನು ವಶಪಡಿಸಿಕೊಂಡಿದ್ದಾರೆ.
ಬೇರೆ ವ್ಯಕ್ತಿಗಳ ಹೆಸರಿನಲ್ಲಿದ್ದ ಸಿಮ್ ಕಾರ್ಡ್ ಉಪಯೋಗಿಸಿದ್ದರಿಂದ ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿ ಪ್ರಕರಣ ದಾಖಲಿಸಲಾಗಿದೆ.
ಪ್ರದೀಪ್ ಮೆಂಡನ್ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 3 ಕೊಲೆ, 6 ಕೊಲೆಯತ್ನ, 2 ಶಸಾಸ ಕಾಯ್ದೆ ಪ್ರಕರಣ, ಪಾಸ್ಪೋರ್ಟ್ ಕಾಯ್ದೆ ಪ್ರಕರಣ ದಾಖಲಾಗಿದೆ. ಆ ಪೈಕಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾದ ಬಿಜೈ ರಾಜಾ ಕೊಲೆ ಪ್ರಕರಣ, ಶಸಾಸ ಕಾಯ್ದೆ ಪ್ರಕರಣ ಹಾಗೂ ಬೆಂಗಳೂರಿನ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪಾಸ್ಪೋರ್ಟ್ ಕಾಯ್ದೆ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಇದಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಸುನೀಲ್ ವೈ. ನಾಯ್ಕೆ ಮತ್ತು ಎಸ್ಸೈ ಶ್ಯಾಮ್ಸುಂದರ್ ಹಾಗೂ ಸಿಬ್ಬಂದಿ ವರ್ಗ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
♦♦♦♦♦♦♦♦♦♦♦♦♦♦♦♦♦♦♦♦♦♦♦♦♦
ಈ ಸುದ್ದಿ / ಲೇಖನದ ಬಗ್ಗೆ ನಿಮ್ಮ ಅಭಿಪ್ರಾಯ, ಅನಿಸಿಕೆಯೇನು ?
ಕೆಳಗೆ ಕಮೆಂಟ್ ವಿಭಾಗದಲ್ಲಿ ಬರೆಯಿರಿ.