Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಿಮಗೇಕೆ ಈವರೆಗೆ ರಾಷ್ಟ್ರ ಪ್ರಶಸ್ತಿ...

ನಿಮಗೇಕೆ ಈವರೆಗೆ ರಾಷ್ಟ್ರ ಪ್ರಶಸ್ತಿ ಬಂದಿಲ್ಲ ಎಂದು ಕೇಳಿದ್ದಕ್ಕೆ ಶಾರುಕ್ ನೀಡಿದ ಉತ್ತರವೇನು ?

ವಾರ್ತಾಭಾರತಿವಾರ್ತಾಭಾರತಿ22 Dec 2016 12:31 PM IST
share
ನಿಮಗೇಕೆ ಈವರೆಗೆ ರಾಷ್ಟ್ರ ಪ್ರಶಸ್ತಿ ಬಂದಿಲ್ಲ ಎಂದು ಕೇಳಿದ್ದಕ್ಕೆ ಶಾರುಕ್ ನೀಡಿದ ಉತ್ತರವೇನು ?

ಮುಂಬೈ, ಡಿ.22: ಮುಂಬೈ ಮಹಾನಗರಿಯಲ್ಲಿರುವ ಬಾಲಿವುಡ್ ನಟ ಶಾರುಕ್ ಖಾನ್ ಅವರ ವೈಭವೋಪೇತ ಮನೆಯಲ್ಲಿ ಅವರು ಪಡೆದ ಹಲವಾರು ಪ್ರಶಸ್ತಿ ಹಾಗೂ ಟ್ರೋಫಿಗಳಿವೆ. ಆದರೆ ಈ ಪ್ರಶಸ್ತಿಗಳಲ್ಲಿ ರಾಷ್ಟ್ರಪ್ರಶಸ್ತಿ ಮಾತ್ರ ಇಲ್ಲ. ಈ ಪ್ರತಿಷ್ಠಿತ ಪ್ರಶಸ್ತಿ ಈ ಪ್ರತಿಭಾವಂತ ನಟನ ಪಾಲಿಗೆ ಇನ್ನೂ ಒಲಿದು ಬಂದಿಲ್ಲ. ತನ್ನ ಈ ಹಿಂದಿನ ನಿರ್ವಹಣೆ ರಾಷ್ಟ್ರ ಪ್ರಶಸ್ತಿ ಗಳಿಸುವಷ್ಟು ಅರ್ಹವಾಗಿರದೇ ಇರಬಹುದು ಎಂಬುದು ಈ ನಟನ ಅನಿಸಿಕೆ.

ನಿಮಗೇಕೆ ಇಲ್ಲಿಯ ತನಕ ರಾಷ್ಟ್ರಪ್ರಶಸ್ತಿ ಬಂದಿಲ್ಲ ಎಂಬ ಪ್ರಶ್ನೆಗೆ ಶಾರುಕ್ ಉತ್ತರ ಹೀಗಿದೆ, ‘‘ನಾನಿರುವ ಸ್ಥಳದಲ್ಲಿರುವ ಪ್ರೇಕ್ಷಕರು, ತೀರ್ಪುಗಾರರು ಮತ್ತು ಚಿತ್ರ ನಿರ್ಮಾತೃಗಳು ಬಹಳಷ್ಟು ಒಳ್ಳೆಯವರಾಗಿರುವುದರಿಂದ ನನಗೆ ಅನೇಕ ಪ್ರಶಸ್ತಿಗಳು ಬಂದಿವೆ. ಹಾಗೆಯೇ ಕುಳಿತುಕೊಂಡು ನನಗೆ ಆ ಚಿತ್ರಕ್ಕೆ ಪ್ರಶಸ್ತಿ ದೊರೆಯಬಹುದಿತ್ತು ಎಂದು ನಾನು ಯೋಚಿಸತೊಡಗಿದರೆ ಆ ಪ್ರಶಸ್ತಿಗೇ ಅವಮಾನ ಮಾಡಿದಂತೆ. ನನಗೆ ಪ್ರಶಸ್ತಿ ದೊರೆತಿಲ್ಲವೆಂದಾದರೆ ನಾನು ಅದಕ್ಕೆ ಅರ್ಹನಲ್ಲವೆಂದು ಅರ್ಥ. ಅದು ಅಷ್ಟೇ ಸರಳ. ಆದುದರಿಂದ ನಾನು ಇಲ್ಲಿಯವರೆಗೆ ನಟಿಸಿದ ಚಿತ್ರಗಳಲ್ಲಿ ರಾಷ್ಟ್ರಪ್ರಶಸ್ತಿ ದೊರೆಯುವಂತಹ ಅಭಿನಯ ನಾನು ನೀಡಿಲ್ಲ. ಪ್ರಶಸ್ತಿಗಾಗಿ ನಾನು ಅಭಿನಯಿಸುತ್ತಿಲ್ಲ. ಚಿತ್ರ ಚೆನ್ನಾಗಿ ಮೂಡಿ ಬರಬೇಕೆಂಬುದೇ ನನ್ನ ಇಚ್ಛೆ. ನನಗೆ ಅಂತಹ ಪ್ರಶಸ್ತಿಯೇನಾದರೂ ಬಂದರೆ ಆ ಪ್ರಶಸ್ತಿಗೆ ನಾನು ಅರ್ಹನೆಂದು ನಾನು ತಿಳಿಯುತ್ತೇನೆ’’ ಎಂದು ಮುಂಬೈ ನಗರದ ಅಮೆರಿಕ ರಾಯಭಾರಿ ಕಚೇರಿಯಲ್ಲಿ ನಡೆದ ಇಂಡಿಯನ್ ಅಕಾಡಮಿ ಪ್ರಶಸ್ತಿ ಸಮಾರಂಭದಲ್ಲಿ ಹೇಳಿದರು.

‘‘ವಿಶ್ವದಾದ್ಯಂತ ಅತ್ಯುತ್ತಮ ಸಿನೆಮಾಗಳಿಗೆ ನೀಡಲಾಗುವ ಹಲವಾರು ಪ್ರಶಸ್ತಿಗಳಿದ್ದರೂ ಆಸ್ಕರ್ ಪ್ರಶಸ್ತಿಗೆ ತನ್ನದೇ ಆದ ಮಹತ್ವವಿದೆ. ಅಂತೆಯೇ ಭಾರತದಲ್ಲೂ ಕೂಡ ಇಂತಹುದೇ ಒಂದು ಪ್ರಶಸ್ತಿ ನೀಡುವ ಪರಿಪಾಠವಿರಬೇಕು’’ ಎಂದು ಶಾರುಕ್ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X