Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ರದ್ದತಿಗೆ ವಿರುದ್ಧವಾಗಿರುವವರು...

ನೋಟು ರದ್ದತಿಗೆ ವಿರುದ್ಧವಾಗಿರುವವರು ‘ಪಾಕಿಸ್ತಾನದಂತಹವರು’: ಪ್ರಧಾನಿ

ನೋಟು ರದ್ದತಿ

ವಾರ್ತಾಭಾರತಿವಾರ್ತಾಭಾರತಿ22 Dec 2016 7:05 PM IST
share
ನೋಟು ರದ್ದತಿಗೆ ವಿರುದ್ಧವಾಗಿರುವವರು ‘ಪಾಕಿಸ್ತಾನದಂತಹವರು’: ಪ್ರಧಾನಿ

ಹೊಸದಿಲ್ಲಿ, ಡಿ.22: ನೋಟು ರದ್ದತಿಗೆ ವಿರುದ್ಧವಾಗಿರುವವರು ‘ಪಾಕಿಸ್ತಾನದಂತಹವರು’ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೊಡ್ಡ ವೌಲ್ಯದ ನೋಟು ನಿಷೇಧವನ್ನು ಟೀಕಿಸುತ್ತಿರುವ ವಿಪಕ್ಷೀಯರ ವಿರುದ್ಧ ಇಂದು ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನಲ್ಲಿ ಎಬ್ಬಿಸಿದ್ದ ಕೋಲಾಹಲವು, ಭಾರತದೊಳಗೆ ಭಯೋತ್ಪಾದಕರು ನುಸುಳುವುದನ್ನು ಖಚಿತಪಡಿಸಲು ಪಾಕಿಸ್ತಾನವು ನಡೆಸುವ ಗುಂಡು ದಾಳಿಯಂತೆ. ಅದೇ ರೀತಿ ಸಂಸತ್ತಿನಲ್ಲಿ ನಡೆಸುವ ಕೋಲಾಹಲ ವಂಚಕರಿಗೆ ಪಾರಾಗಲು ಅವಕಾಶ ಕಲ್ಪಿಸುತ್ತದೆಯೆಂದು ಅವರು ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ರಾಜಕಾರಣಿಗಳು ಭ್ರಷ್ಟರಿಗೆ ಬೆಂಬಲವಾಗಿ ನಿಲ್ಲತ್ತಾರೆಂಬುದನ್ನು ತಾನೆಂದೂ ಕಲ್ಪಿಸಿರಲಿಲ್ಲವೆಂದು ಮೋದಿ ಟೀಕಿಸಿದ್ದಾರೆ.

ನೋಟು ರದ್ದತಿಯ ಕುರಿತಾಗಿ ಚರ್ಚೆಗೆ ವಿಪಕ್ಷಗಳ ಪಟ್ಟು ಹಾಗೂ ಆಳುವ ಪಕ್ಷಗಳ ನಿರಾಕರಣೆಯಿಂದಾಗಿ ಸಂಪೂರ್ಣ ವಿಫಲವಾದ ಸಂಸತ್ತಿನ ಇತ್ತೀಚಿನ ಚಳಿಗಾಲದ ಅಧಿವೇಶನವನ್ನುಲ್ಲೇಖಿಸಿ ಅವರು ಮಾತನಾಡುತ್ತಿದ್ದರು.

ಪ್ರತಿಯೊಂದನ್ನು ಪ್ರತಿಭಟಿಸುತ್ತಿರುವುದಕ್ಕಾಗಿ ವಿಪಕ್ಷಗಳನ್ನು ಪ್ರಧಾನಿ ಟೀಕಿಸಿದ್ದಾರೆ.

ನಮ್ಮ ಸೇನೆ ನಮಗೆ ಹೆಮ್ಮೆ ತರುತ್ತಿದೆ. ಆದರೆ, ಕೆಲವರು ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದ್ದಾರೆ. ಸಂಸ್ಥೆಗಳನ್ನು ಆರೀತಿ ನೋಡುವುದು ಸರಿಯೇ ಎಂದವರು ಪ್ರಶ್ನಿಸಿದ್ದಾರೆ. ಈ ಮೂಲಕ ಅವರು ಸೆಪ್ಟಂಬರ್‌ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್ ದಾಳಿ ನಿಜವಾಗಿಯೂ ನಡೆದಿದೆಯೇ ಎಂದು ಪ್ರಶ್ನಿಸಿದ ಕೆಲವು ರಾಜಕಾರಣಿಗಳನ್ನು ಚುಚ್ಚಿದ್ದಾರೆ.

ಆನ್‌ಲೈನ್ ಬ್ಯಾಂಕಿಂಗ್‌ನತ್ತ ಸಾಗುವಂತೆ ಯುವಕರನ್ನು ಹುರಿದುಂಬಿಸಿದ ಮೋದಿ, ತಂತ್ರಜ್ಞಾನವು ಭಾರತವನ್ನು ಬಡತನದಿಂದ ಮೇಲೆತ್ತುವ ಸಾಧನ ಎಂದಿದ್ದಾರೆ.

ಶೇ.50ರಷ್ಟು ಬಡವರಿರುವ ದೇಶವೊಂದರಲ್ಲಿ ತಂತ್ರಜ್ಞಾನದಂತಹ ವಿಷಯಗಳು ಏನುತಾನೇ ಮಾಡಿಯಾವು? ಎಂದು ಕಾಂಗ್ರೆಸ್‌ನ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದರು. ಸಿಂಗ್, ಅವರದೇ ಪ್ರಗತಿ ಪತ್ರ ನೀಡಿದ್ದಾರೆಯೇ ಅಥವಾ ತನ್ನದೇ? ಎಂಬುದನ್ನು ಜನರೇ ಹೇಳಲಿ. ಈ ಶೇ.50 ಬಡತನ ಯಾರ ಕೊಡುಗೆ? ಎಂದವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X