Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 16 ವರ್ಷಕ್ಕೆ ಅಮ್ಮನಾಗಿ, 23ವರ್ಷಕ್ಕೆ...

16 ವರ್ಷಕ್ಕೆ ಅಮ್ಮನಾಗಿ, 23ವರ್ಷಕ್ಕೆ ಅಂತ್ಯಕಂಡ ಎಂಟಿವಿ ರಿಯಾಲಿಟಿ ಸ್ಟಾರ್

ಈಕೆ ಮಾದಕವಸ್ತು ವ್ಯಸನಕ್ಕೆ ಬಲಿಯಾದ ದುರಂತ ನಾಯಕಿ

ವಾರ್ತಾಭಾರತಿವಾರ್ತಾಭಾರತಿ23 Dec 2016 4:15 PM IST
share
16 ವರ್ಷಕ್ಕೆ ಅಮ್ಮನಾಗಿ, 23ವರ್ಷಕ್ಕೆ ಅಂತ್ಯಕಂಡ ಎಂಟಿವಿ ರಿಯಾಲಿಟಿ ಸ್ಟಾರ್

2010ರಲ್ಲಿ ಎಂಟಿವಿ ಹಿಟ್ ರಿಯಾಲಿಟಿ ಶೋ ಸ್ಟಾರ್ ಆಗಿ ಬೆಳಕಿಗೆ ಬಂದಿದ್ದ ವಲೇರಿ ಫೇರ್‌ಮೆನ್ ಬುಧವಾರ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೇವಲ 23 ವರ್ಷ ವಯಸ್ಸಿಗೆ ಈ ಅದ್ಭುತ ಪ್ರತಿಭೆ ಮಾದಕವಸ್ತು ವ್ಯಸನಕ್ಕೆ ಬಲಿಯಾಗಿದ್ದಾಳೆಂದು ವರದಿಯಾಗಿದೆ. ಮಿತಿಮೀರಿದ ಮಾದಕ ಬಳಕೆ ಚಟ ಅವಳ ಸಾವಿಗೆ ಕಾರಣವಾಗಿದ್ದು, ಸ್ವಚ್ಛಂದ ಜೀವನಶೈಲಿಯ ಪ್ರತೀಕವಾಗಿದ್ದ ಆಕೆ ತನ್ನ ಹದಿನಾರನೆ ವಯಸ್ಸಿಗೆ ಹೆಣ್ಣುಮಗುವಿಗೆ ಜನ್ಮವಿತ್ತಿದ್ದಳು. ಪುತ್ರಿ ನಿವಾಯೊಹ್ನಾಳಿಗೆ ಈಗ ಏಳುವರ್ಷ ವಯಸ್ಸು, ಪೊಲೀಸರನ್ನೇ ವಂಚಿಸಿದ ಪ್ರಕರಣದಲ್ಲಿ ಕಳೆದ ವಾರ ವಲೇರಿಯನ್ನು ಬಂಧಿಸಲಾಗಿತ್ತು.

ರಿಯಾಲಿಟಿ ಸ್ಟಾರ್‌ಳ ಸಾವನ್ನು ಗೆಳೆಯರು ಮತ್ತು ಕುಟುಂಬ ಮೂಲಗಳು ಸಾಮಾಜಿಕ ಮಾಧ್ಯಮಗಳ ಮೂಲಕ ನಿನ್ನೆ ದೃಢಪಡಿಸಿತ್ತು. ವಲೇರಿಗೆ ಸಂಗೀತಗಾರ ರಸ್‌ಬೋಸ್‌ನೊಂದಿಗೆ ಮದುವೆ ನಿಶ್ಚಿತಾರ್ಥ ನಡೆದಿತ್ತು ಎನ್ನಲಾಗಿದೆ. ಎಂಟಿವಿ ಮಾದಕವಸ್ತು ಸೇವನೆಗೆ ವಲೇರಿ ಬಲಿಯಾಗಿದ್ದಾಳೆಂದು ತಿಳಿಸಿದೆ. ಮಾದಕವಸ್ತು ಚಟದಿಂದ ಸುದೀರ್ಘಕಾಲದಿಂದ ವಲೇರಿ ನರಳುತ್ತಿದ್ದಳು, ಅದಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಅವಳಿಗಿದ್ದವು. ಗೆಳೆಯನ ಅಪಾರ್ಟ್‌ಮೆಂಟ್ ಬಾತ್‌ರೂಮ್‌ಗೆ ಹೋದ ವಲೇರಿ ಹೆಚ್ಚು ಹೊತ್ತಾದರೂ ಮರಳಿ ಬಂದಿರಲಿಲ್ಲ. ಗೆಳೆಯ ಹೋಗಿ ನೋಡಿದಾಗ ಅವಳು ಅಲ್ಲಿ ನಿಶ್ಚಳಾಗಿ ಬಿದ್ದಿದ್ದು ಕಂಡು ಬಂದಿತ್ತು.

ಮಾದಕವಸ್ತು ಓವರ್ ಡೋಸ್ ಸಾವಿಗೆ ಕಾರಣವೆನ್ನಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯ ಬಳಿಕ ಸ್ಪಷ್ಟ ಕಾರಣ ತಿಳಿಯಬಹುದು. ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಂಡದ್ದಕ್ಕೆ ಈ ಹಿಂದೆ ವಲೇರಿಯನ್ನು ಬಂಧಿಸಲಾಗಿತ್ತು. ಪೊಲೀಸರಿಗೆ ನಕಲಿ ದಾಖಲೆ ತೋರಿಸಿದ್ದಕ್ಕಾಗಿ ಕಳೆದವಾರ ವಲೇರಿಯನ್ನು ಪೊಲೀಸರು ಬಂಧಿಸಿದ್ದರು. ನಂತರ 1,500 ಡಾಲರ್ ಜಾಮೀನಿನನಲ್ಲಿ ಆಕೆಯನ್ನು ಬಿಡುಗಡೆಗೊಳಿಸಲಾಗಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X