Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಲ್ಲಾ ಕರಾವಳಿ ಉತ್ಸವಕ್ಕೆ ಮೆರಗು ನೀಡಿದ...

ಜಿಲ್ಲಾ ಕರಾವಳಿ ಉತ್ಸವಕ್ಕೆ ಮೆರಗು ನೀಡಿದ ಸಾಂಸ್ಕೃತಿಕ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ23 Dec 2016 6:43 PM IST
share
ಜಿಲ್ಲಾ ಕರಾವಳಿ ಉತ್ಸವಕ್ಕೆ ಮೆರಗು ನೀಡಿದ ಸಾಂಸ್ಕೃತಿಕ ಮೆರವಣಿಗೆ

ಮಂಗಳೂರು, ಡಿ.23: ರಾಜ್ಯ ಮತ್ತು ಪಶ್ಚಿಮ ಕರಾವಳಿಯನ್ನು ಪ್ರತಿಬಿಂಬಿಸುವ ಎಲ್ಲ ಭಾಷೆ, ಧರ್ಮ, ಜೀವನ ಸಂಸ್ಕೃತಿ, ಜನಪದ, ಯಕ್ಷಗಾನ ಇತ್ಯಾದಿ ಪ್ರಕಾರದ ಸುಮಾರು 70ಕ್ಕೂ ಹೆಚ್ಚು ತಂಡಗಳ ಸಾಂಸ್ಕೃತಿಕ ಮೆರವಣಿಗೆ - ದಿಬ್ಬಣ ಹಾಗು ವಸ್ತು ಪ್ರದರ್ಶನದೊಂದಿಗೆ ಶುಕ್ರವಾರ ಜಿಲ್ಲಾ ಕರಾವಳಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
 
ಕರಾವಳಿ ಉತ್ಸವ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ವಸ್ತು ಪ್ರದರ್ಶನಕ್ಕೆ ಮತ್ತು ಸಚಿವ ಯು.ಟಿ. ಖಾದರ್ ಸಾಂಸ್ಕೃತಿಕ ಮೆರವಣಿಗೆಯನ್ನು ಉದ್ಘಾಟಿಸಿದರು.

ಈ ಸಂದರ್ಭ ಮೇಯರ್ ಹರಿನಾಥ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಬ್ಯಾರಿ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾ ಕರಾವಳಿ ಉತ್ಸವ ಮೆರವಣಿಗೆ ಸಮಿತಿಯ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು.

ಮೆರವಣಿಗೆಯು ಕರಾವಳಿ ಉತ್ಸವ ಮೈದಾನದಿಂದ ಹೊರಟು ಹ್ಯಾಟ್‌ಹಿಲ್ ಪಂಪ್‌ಹೌಸ್ ಮುಂಭಾಗ, ರಾಮಕೃಷ್ಣ ವಿದ್ಯಾರ್ಥಿ ನಿಲಯ, ಗಣೇಶ್ ಬೀಡಿ ಕಾಂಪೌಂಡ್, ಪೂಂಜಾ ಬಿಲ್ಡಿಂಗ್, ಕಲ್ಯಾಣ್ ಜ್ಯುವೆಲ್ಲರಿ, ಬಳ್ಳಾಲ್‌ಭಾಗ್ ಸರ್ಕಲ್‌ನಲ್ಲಿ ಹಿಂದಿರುಗಿ ಎಸ್.ಡಿ.ಎಂ. ನೇತ್ರಾಲಯ, ಮನಪಾ ಮುಂಭಾಗ, ಮಹಾತ್ಮಾಗಾಂಧಿ ವೃತ್ತ, ಲಾಲ್‌ಭಾಗ್, ಕೆಎಸ್ಸಾರ್ಟಿಸಿ ಬಿಜೈ ಸರ್ಕಲ್, ಬಿಜೈ ಬಟ್ಟಗುಡ್ಡ, ಸರ್ಕ್ಯೂಟ್ ಹೌಸ್ ಜಂಕ್ಷನ್, ಕದ್ರಿ ಪಾರ್ಕ್ ರಸ್ತೆಯಲ್ಲಿ ಮುಂದುವರಿದು ಕದ್ರಿ ಉದ್ಯಾನವನದ ಒಳಗಡೆ ಇರುವ ಕರಾವಳಿ ಉತ್ಸವ ವೇದಿಕೆಯ ಎರಡು ಪಾರ್ಶ್ವಗಳಲ್ಲಿ ಸಂಪನ್ನಗೊಂಡಿತು.

ಮೆರವಣಿಗೆಯಲ್ಲಿ ಮಂಗಳವಾದ್ಯ, ತಟ್ಟಿರಾಯ, ಪಕ್ಕಿನಿಶಾನೆ, ಕೊಂಬು, ಚೆಂಡೆ, ರಣಕಹಳೆ, ಜಿಲ್ಲಾ ಪೊಲೀಸ್ ಬ್ಯಾಂಡ್, ಬಣ್ಣದ ಕೊಡೆಗಳು, ಬಸವ ತಂಡ, ಶಂಖದಾಸರು, ಕನ್ನಡ ಭುವೇಶ್ವರಿ ಸ್ತಬ್ಧ ಚಿತ್ರ, ಕೀಲು ಕುದುರೆ, ಕರಗ, ಕುಸ್ತಿಪಟುಗಳ ತಂಡ, ಹಾಸ್ಯಗೊಂಬೆ ತಂಡ, ದಪ್ಪು, ಅರೆಭಾಷೆ ಜನರ ಕುದುರೆ ಸವಾರಿ, ಒಪ್ಪಣಿ ತಂಡ, ಕೋಲ್ಕಳಿ, ಕೊಡವ ನೃತ್ಯ, ತಾಲೀಮು, ಮರಕಾಲು ಹುಲಿವೇಷ ಮತ್ತು ಹುಲಿವೇಷ, ಶಾರ್ದೂಲ - ಕರಡಿ ಕುಣಿತ, ಡೋಲು ಕುಣಿತ, ಆಟಿಕಳಂಜ, ಛತ್ರ ಕುಣಿತ, ಬೊಳ್ಗುಡೆ ನಲಿಕೆ, ಇರೆನಲಿಕೆ, ಪರಕೋಲು ನಲಿಕೆ, ಯಕ್ಷಗಾನ ವೇಷ, ಯಕ್ಷಗಾನದ ಬೃಹತ್ ಗೊಂಬೆ, ವೀರಭದ್ರ ಕುಣಿತ, ಬೇಡರಕುಣಿತ, ಮೈಸೂರು ನಗಾರಿ, ಗೊರವರ ಕುಣಿತ, ಡೊಳ್ಳು ಕುಣಿತ, ಜಗ್ಗಳಿಕೆ, ಫಟ್ಟಾಕುಣಿತ, ಪೂಜಾಕುಣಿತ, ಕಂಸಾಳೆ, ಮಹಿಳಾ ವೀರಗಾಸೆ, ಪುರವಂತಿಕೆ, ಸಿದ್ದಿ ದಮಾಮ್ ಕುಣಿತ, ಅಕ್ಕಮಹಾದೇವಿ, ವೀರಶೈವ ಮಹಿಳಾ ತಂಡ, ಹಾಲಕ್ಕಿ ಸುಗ್ಗಿ ಕುಣಿತ, ಕೋಲಾಟ, ಕಂಗೀಲು ನೃತ್ಯ, ಸೊಮನ ಕುಣಿತ ಇತ್ಯಾದಿ ಕಲಾತಂಡಗಳಿಂದ ಸಾಂಸ್ಕೃತಿಕ ಕಲಾ ಪ್ರದರ್ಶನಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X