Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯ ನಿರ್ಧಾರ ಆರ್ಥಿಕ ದರೋಡೆ:...

ನೋಟು ಅಮಾನ್ಯ ನಿರ್ಧಾರ ಆರ್ಥಿಕ ದರೋಡೆ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ23 Dec 2016 7:47 PM IST
share
ನೋಟು ಅಮಾನ್ಯ ನಿರ್ಧಾರ ಆರ್ಥಿಕ ದರೋಡೆ: ರಾಹುಲ್ ಗಾಂಧಿ

ಅಲ್ಮೊರಾ, ಡಿ.23: ದೇಶದಿಂದ ಭ್ರಷ್ಟಾಚಾರವನ್ನು ನಿರ್ಮೂಲನಗೊಳಿಸಲು ಕಾಂಗ್ರೆಸ್ ಪಕ್ಷ ಬಯಸುತ್ತದೆ. ಭ್ರಷ್ಟಾಚಾರದ ವಿರುದ್ಧ ಕೈಗೊಳ್ಳಲಾಗುವ ಯಾವುದೇ ಕ್ರಮವನ್ನು ಪಕ್ಷ ಬೆಂಬಲಿಸುತ್ತದೆ. ಆದರೆ ನೋಟು ಅಮಾನ್ಯ ನಿರ್ಧಾರವು ಕಪ್ಪುಹಣ ಅಥವಾ ಭ್ರಷ್ಟಾಚಾರದ ವಿರುದ್ಧ ಕೈಗೊಂಡ ಕ್ರಮಗಳಲ್ಲ. ಇದೊಂದು ಆರ್ಥಿಕ ದರೋಡೆಯಾಗಿದೆ ಎಂದು ಕಾಂಗ್ರೆಸ್ ಉಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಉತ್ತರಾಖಂಡದ ಅಲ್ಮೋರಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ರ್ಯಾಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರಧಾನಿ ಮೋದಿ ರೈತರ ಬವಣೆ ಆಲಿಸುತ್ತಿಲ್ಲ. ಆದರೆ 15 ಮಂದಿ ಶ್ರೀಮಂತರಿಂದ ಬರಬೇಕಾದ 1.40 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದವರು ಹೇಳಿದರು.

  ಸಂಸತ್ತಿನಲ್ಲಿ ಕಾರ್ಮಿಕರ ಬಗ್ಗೆ ಮಾತನಾಡಿದ ಮೋದಿ, ಕಾರ್ಮಿಕರನ್ನು ಬಿಲ ತೋಡುವವರು ಎಂದು ಕರೆದು ತಮಾಷೆ ಮಾಡಿದ್ದರು. ಆದರೆ ಮೋದೀಜಿ, ಭಾರತದ ಕಾರ್ಮಿಕರು ಬಿಲ ತೋಡುವುದಿಲ್ಲ, ಅವರು ದೇಶವನ್ನು ಕಟ್ಟುವ ಕಾರ್ಯ ಮಾಡುತ್ತಿದ್ದಾರೆ. ನೀವು ದೇಶವನ್ನು ಎರಡು ಭಾಗವಾಗಿ ಮಾಡಿದ್ದೀರಿ. ಒಂದು ಭಾಗದಲ್ಲಿ ಭಾರತದ 50 ಮಂದಿ ಅಗರ್ಭ ಶ್ರೀಮಂತರಿಂದ ಕೂಡಿದ ಶೇ.1ರಷ್ಟು ಮಂದಿ, ಇನ್ನೊಂದು ಭಾಗದಲ್ಲಿ ದೇಶದ ಶೇ.99 ಮಂದಿ ಇದ್ದಾರೆ. ಬಡವರು, ಪ್ರಾಮಾಣಿಕರು, ಶ್ರಮಜೀವಿಗಳು ಈ ಶೇ. 99ರ ಭಾಗದಲ್ಲಿದ್ದಾರೆ. ಎನ್‌ಡಿಎ ಆಡಳಿತದಲ್ಲಿ ದೇಶದ ಸಂಪತ್ತಿನ 60 ಶೇಕಡಾದಷ್ಟು ಪಾಲು ಶೇ.1ರ ಭಾಗದಲ್ಲಿರುವ ಜನರ ಬಳಿಯಿದೆ ಎಂದು ರಾಹುಲ್ ಹೇಳಿದರು.

  ಕಪ್ಪುಹಣದ ಶೇ.94ರಷ್ಟು ಪಾಲು ಸ್ವಿಸ್ ಬ್ಯಾಂಕ್ ಖಾತೆ, ಚಿನ್ನ ಮತ್ತು ಆಸ್ತಿಯ ರೂಪದಲ್ಲಿದೆ. ಕೇವಲ ಶೇ.6ರಷ್ಟು ಕಪ್ಪುಹಣ ನಗದಿನ ರೂಪದಲ್ಲಿದೆ. ಮೋದಿಯವರು ಈ ಶೇ.6ರಷ್ಟಿರುವ ಕಪ್ಪುಹಣವನ್ನು ತಮ್ಮ ಗುರಿಯಾಗಿಸಿಕೊಂಡಿರುವುದು ದೇಶದ ದುರಂತ ಎಂದರು.

  ಕಪ್ಪುಹಣದ ವಿರುದ್ಧದ ಹೋರಾಟ ಎನ್ನುತ್ತಾ ಬಡಜನರನ್ನು ಗುರಿಯಾಗಿಸಿಕೊಂಡು ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ. ಉದ್ಯಮಿ ವಿಜಯ ಮಲ್ಯರಿಗೆ 1,200 ಕೋಟಿ ರೂಪಾಯಿಯ ಮಿಠಾಯಿ ತಿನ್ನಿಸಿದ್ದೀರಿ. ಆದರೆ ಉತ್ತರಾಖಂಡದ ಜನತೆಗೆ ನಯಾಪೈಸೆ ಕೂಡಾ ನೀಡಲಿಲ್ಲ. ಇದು ಸೂಟ್‌ಬೂಟ್ ಸರಕಾರ ಎಂದು ಟೀಕಿಸಿದರು.

 8 ಲಕ್ಷ ಕೋಟಿಯಷ್ಟು ಸಾಲ ಶ್ರೀಮಂತ ವ್ಯಕ್ತಿಗಳಿಂದ ವಸೂಲಾಗಬೇಕಿದೆ. ರೈತರು ಸಾಲ ಕಟ್ಟದಿದ್ದರೆ ಅವರ ಮನೆ, ಭೂಮಿ ಕಿತ್ತುಕೊಳ್ಳುವ ನೀವು, ಶ್ರೀಮಂತ ವ್ಯಕ್ತಿಗಳು ಸಾಲ ಕಟ್ಟಲು ವಿಫಲವಾದರೆ ಅವರನ್ನು ಸುಸ್ತಿದಾರರು ಎಂದು ಕರೆದು, ಅವರ ಸಾಲವನ್ನು ಅನುತ್ಪಾದಕ ಆಸ್ತಿ(ನಾನ್ ಪರ್ಫಾರ್ಮಿಂಗ್ ಅಸೆಟ್) ಖಾತೆಗೆ ವರ್ಗಾಯಿಸಿ ಬಿಡುತ್ತೀರಿ.ಅವರ ಸಾಲವನ್ನು ವಸೂಲು ಮಾಡುವ ಬದಲು ಅದನ್ನು ನವೀಕರಿಸುತ್ತೀರಿ ಎಂದು ಕೇಂದ್ರ ಸರಕಾರವನ್ನು ಟೀಕಿಸಿದರು.

   ಇದೀಗ ಬಡವರ ಹಣವನ್ನು ಸುದೀರ್ಘ ಕಾಲ ಬ್ಯಾಂಕ್‌ನಲ್ಲಿ ಠೇವಣಿ ಇರಿಸುವಂತೆ ಬಲವಂತಮಾಡಿ, ಅದನ್ನು ಶ್ರೀಮಂತ ಕುಳಗಳಿಗೆ ಹಂಚುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಬಡವರಿಂದ ಪಡೆದ ಹಣದಿಂದ ಶ್ರೀಮಂತರ 8 ಕೋಟಿ ಸಾಲ ಮನ್ನಾ ಮಾಡಲು ಸರಕಾರ ಉದೆ್ದೀಶಿಸಿದೆ ಎಂದು ರಾಹುಲ್ ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X