Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರೋಗ್ಯ ವಿಮೆ: ಅದಾನಿ ಯುಪಿಸಿಎಲ್...

ಆರೋಗ್ಯ ವಿಮೆ: ಅದಾನಿ ಯುಪಿಸಿಎಲ್ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ23 Dec 2016 11:08 PM IST
share

ಪಡುಬಿದ್ರಿ , ಡಿ. 23 : ಅದಾನಿ ಯುಪಿಸಿಎಲ್ ವತಿಯಿಂದ ಗ್ರಾಮಸ್ಥರಿಗೆ ಆರೋಗ್ಯ ವಿಮೆ ಮಾಡಿಸಲಾಗುವುದು ಎಂದು ಹೇಳಿ ಕೆಲವು ಕಿಡಿಗೇಡಿಗಳು ಎರ್ಮಾಳ್ ಗ್ರಾಮದಲ್ಲಿ ಬಡ ಕುಟುಂಬದವರಿಂದ ಹಣ ವಸೂಲಿ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ. 

ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಅದಾನಿ ಯುಪಿಸಿಎಲ್‌ನ ಅಧಿಕಾರಿಗಳು, ಯುಪಿಸಿಎಲ್ ಇಲ್ಲಿಯವರೆಗೆ ಎಲ್ಲೂರು ಹಾಗೂ ಮುದರಂಗಡಿ ಗ್ರಾಮಸ್ಥರಿಗೆ ಮಾತ್ರ ಅದಾನಿ ಆರೋಗ್ಯ ವಿಮೆ ಚೀಟಿಯನ್ನು ಆಯಾಯ ಗ್ರಾಮ ಪಂಚಾಯಿತಿಯ ಮುಖಾಂತರ ವಿಮೆ ಚೀಟಿಯನ್ನು ಗ್ರಾಮಸ್ಥರಿಗೆ ವಿತರಿಸಿದೆ. ಗ್ರಾಮೀಣ ಜನರ ಅನುಕೂಲಕ್ಕಾಗಿ ಈ ವಿನೂತನ ಆರೋಗ್ಯ ವಿಮೆಯ ಯೋಜನೆಯನ್ನು ಅದಾನಿ ಯುಪಿಸಿಎಲ್ ತನ್ನ ಸಿ.ಎಸ್.ಆರ್ ಕಾರ್ಯಕ್ರಮದಡಿ ಆಯೋಜಿಸಿದೆ ಹಾಗೂ ಗ್ರಾಮಸ್ಥರಿಗೆ ಸಂಪೂರ್ಣವಾಗಿ ಉಚಿತ ಆರೋಗ್ಯ ಚೀಟಿಯನ್ನು ವಿತರಿಸಿದೆ. ಇದಕ್ಕೆ ಯಾವುದೇ ರೀತಿಯ ಹಣ ಗ್ರಾಮಸ್ಥರಿಂದ ಪಡೆಯಲಾಗಿಲ್ಲ.

ಅದಾನಿ ಯುಪಿಸಿಎಲ್ ಈ ಯೋಜನೆಯನ್ನು ಇತರೆ ಗ್ರಾಮಗಳಿಗೆ ವಿಸ್ತರಿಸಬೇಕಾದರೆ ಆಯಾ ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಗ್ರಾಮಸ್ಥರ ಮಾಹಿತಿಯನ್ನು ಪಡೆದು ಪಂಚಾಯತಿಯ ಪರಾಮರ್ಶಿಸಿದ ಮೇಲೆ ಅದಾನಿ ಆರೋಗ್ಯ ವಿಮೆಯ ಸೌಲಭ್ಯವನ್ನು ಕಲ್ಪಿಸಲಾಗುವುದು. ಆರೋಗ್ಯ ವಿಮೆ ಗ್ರಾಮಸ್ಥರಿಗೆ ವಿಸ್ತರಿಸಲು ಅದಾನಿ ಯುಪಿಸಿಎಲ್ ಕಂಪನಿಯ ಅಧಿಕಾರಿಗಳೇ ಖುದ್ದು ಸಮೀಕ್ಷೆ ನಡೆಸಿ ಗ್ರಾಮಸ್ಥರ ಮಾಹಿತಿಯನ್ನು ಪಡೆಯುತ್ತಾರೆ, ಹೊರತು ಇತರ ಯಾವುದೇ ಸಂಘ ಸಂಸ್ಥೆಗೆ ಈ ಜವಾಬ್ದಾರಿಯನ್ನು ನೀಡಲಾಗುವುದಿಲ್ಲ.

ಈ ಸಂದರ್ಭದಲ್ಲಿ ಎರ್ಮಾಳು ಗ್ರಾಮದಲ್ಲಿ ಯಾರೋ ಕೆಲವು ಪಟ್ಟಬದ್ರ ಹಿತಾಸಕ್ತಿಗಳು ಕಂಪನಿಯ ತೇಜೋವದೆಗಾಗಿ ಅಡ್ಡದಾರಿ ಹಿಡಿದಿದ್ದು, ಯಾವುದೋ ಸಂಸ್ಥೆಯ ಹೆಸರಿನಲ್ಲಿ ಅದಾನಿ ವಿಮೆ ಮಾಡಿಸಲಾಗುವುದು ಎಂದು ಸುಳ್ಳು ಮಾಹಿತಿ ನೀಡಿ ಜನರಿಂದ ಹಣ ವಸೂಲಿ ಮಾಡುತ್ತಿರುವ ಕೃತ್ಯ ಅತ್ಯಂತ ಶೋಚನೀಯ. ಗ್ರಾಮಸ್ಥರು ಇಂತಹ ಕೃತ್ಯಗಳಿಗೆ ಮೋಸ ಹೋಗಬಾರದು ಎಂದು ಅದಾನಿ ಯುಪಿಸಿಎಲ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಅದಾನಿ ಆರೋಗ್ಯ ವಿಮೆಯ ಬಗ್ಗೆ ಯಾವುದೇ ಮಾಹಿತಿ ಬೇಕಾದರೂ ಗ್ರಾಮಸ್ಥರು ನೇರವಾಗಿ ಎಲ್ಲೂರಿನ ಯುಪಿಸಿಎಲ್ ನ ಸ್ಥಾವರದ ಕಚೇರಿಗೆ ನೇರವಾಗಿ ಭೇಟಿ ನೀಡಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ಪಷ್ಟೀಕರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X