Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಲಿತರಿಗಿಂತ ಮೇಲ್ವರ್ಗಕ್ಕೇ ಹೆಚ್ಚು...

ದಲಿತರಿಗಿಂತ ಮೇಲ್ವರ್ಗಕ್ಕೇ ಹೆಚ್ಚು ಮೀಸಲಾತಿ: ಡಾ.ಸಿ.ಜಿ.ಲಕ್ಷ್ಮೀಪತಿ

ಸಮಾನತೆಯ ಆಶಯ ಮತ್ತು ರಾಜಕಾರಣ

ವಾರ್ತಾಭಾರತಿವಾರ್ತಾಭಾರತಿ24 Dec 2016 7:20 PM IST
share
ದಲಿತರಿಗಿಂತ ಮೇಲ್ವರ್ಗಕ್ಕೇ ಹೆಚ್ಚು ಮೀಸಲಾತಿ: ಡಾ.ಸಿ.ಜಿ.ಲಕ್ಷ್ಮೀಪತಿ

ಮಂಗಳೂರು, ಡಿ.24: ಜಾತಿ ಇಲ್ಲ ಅಂದರೆ ಇಲ್ಲ , ಇದೆ ಅಂದರೆ ಇದೆ. ಜಾತಿ ಎಂಬುದು ಕೆಲವರಿಗೆ ದಾಸ್ಯವಾಗಿ ಪರಿಣಮಿಸಿದೆ. ಕೆಲವರಿಗೆ ಜಾತಿ ಎಂಬುದೇ ಬಂಡವಾಳವಾಗಿದೆ. ಮೇಲ್ವರ್ಗ ಅದನ್ನು ಚೆನ್ನಾಗಿ ಬಳಸಿಕೊಳ್ಳುತ್ತಿದೆ. ಆ ಮೂಲಕ ದಲಿತ ವರ್ಗ ಪಡೆಯುವ ಮೀಸಲಾತಿಗಿಂತಲೂ ಮೇಲ್ವರ್ಗ ಹೆಚ್ಚು ಅವಕಾಶಗಳನ್ನು ಮತ್ತು ಮೀಸಲಾತಿಯನ್ನು ಪಡೆಯುತ್ತಿದೆ ಎಂದು ಡಾ. ಸಿ.ಜಿ.ಲಕ್ಷ್ಮೀಪತಿ ಹೇಳಿದರು.

‘ಅಭಿಮತ ಮಂಗಳೂರು’ ನಗರದ ನಂತೂರು ಶಾಂತಿಕಿರಣದಲ್ಲಿ ಆಯೋಜಿಸಿದ ‘ಜನನುಡಿ’ಯ ‘ಸಮಾನತೆಯ ಆಶಯ ಮತ್ತು ಮೀಸಲಾತಿ’ ಎಂಬ ವಿಚಾರಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮೀಸಲಾತಿ ಅಂದ ತಕ್ಷಣ ಅದು ದಲಿತರ ಅಸ್ಮಿತೆಯ ಪ್ರಶ್ನೆಯಾಗಿ ಬಿಡುತ್ತದೆ. ಆದರೆ, ದಲಿತರು ಪಡೆಯುವ ಮೀಸಲಾತಿಗಿಂತ ಮೇಲ್ವರ್ಗ ಎಲ್ಲ ಬಗೆಯ ಅವಕಾಶಗಳನ್ನು ಪಡೆದುಕೊಳ್ಳುತ್ತಿದೆ. ಅಷ್ಟೇ ಅಲ್ಲ, ದಲಿತರನ್ನು ಭೌತಿಕವಾಗಿ ದಾಸ್ಯರನ್ನಾಗಿಸಿ ಸಬಲಗೊಳ್ಳುತ್ತಿದೆ. ಇದನ್ನು ಅರಿತುಕೊಂಡು ಎಚ್ಚರಿಕೆ ವಹಿಸಬೇಕಾಗಿದೆ ಎಂದು ಡಾ.ಸಿ.ಜಿ.ಲಕ್ಷ್ಮೀಪತಿ ನುಡಿದರು.

ಇತ್ತೀಚಿನ ನೋಟು ಅಮಾನ್ಯ ಸಂದರ್ಭ ಮುಸ್ಲಿಂ ಅಧಿಕ ಇರುವ ಪ್ರದೇಶಗಳಲ್ಲಿ ಎಟಿಎಂಗಳಲ್ಲೂ ಹಣ ತುಂಬದೆ ಅನ್ಯಾಯ ಎಸಗಿದ ವಿದ್ಯಮಾನ ನಡೆದಿದೆ. ಸುಳ್ಳು ಸುದ್ದಿಗಳನ್ನು ಹಬ್ಬುವ ಮೂಲಕ ಅಹಿಂದ ವರ್ಗದಲ್ಲಿ ಭಿನ್ನಮತ ಹುಟ್ಟು ಹಾಕುತ್ತಿವೆ. ಇದರ ವಿರುದ್ಧ ಪ್ರಗತಿಪರ ದಲಿತರು, ಮುಸ್ಲಿಮರು, ಕ್ರೈಸ್ತರು ಒಂದಾಗಬೇಕು. ರಾಜಕೀಯ ಸಂಚಲನಕ್ಕೆ ಮನಸ್ಸನ್ನು ತೆರೆದಿಡಬೇಕು ಎಂದು ಡಾ.ಸಿ.ಜಿ.ಲಕ್ಷ್ಮೀಪತಿ ಹೇಳಿದರು.

ವಿಚಾರ ಮಂಡಿಸಿದ ಹುಲಿಕುಂಟೆ ಮೂರ್ತಿ, ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳನ್ನು ಕೀಳಾಗಿ ಕಾಣಲಾಗುತ್ತದೆ. ಮೀಸಲಾತಿ ವಿಚಾರದಲ್ಲಂತೂ ದಲಿತ ವಿದ್ಯಾರ್ಥಿಗಳಿಗೆ ನಿರಂತರ ಹಿಂಸೆ ನೀಡಲಾಗುತ್ತದೆ. ಇದನ್ನು ಎದುರಿಸಲಾಗದೆ ರೋಹಿತ್ ವೇಮುಲಾ ಮಾತ್ರವಲ್ಲ, ಇನ್ನೂ ಅನೇಕ ದಲಿತ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡದ್ದಿದೆ. ಆದರೆ, ಅವು ಬೆಳಕಿಗೆ ಬಾರದ ಕಾರಣ ಚರ್ಚೆಗಳಾಗಲಿಲ್ಲ ಎಂದರು.

ಮನುಷ್ಯನನ್ನು ಮನುಷ್ಯನನ್ನಾಗಿ ಗುರುತಿಸುವ ಪ್ರಕ್ರಿಯೆಯೇ ಮೀಸಲಾತಿಯಾಗಿದೆ. ಮೀಸಲಾತಿ ಅನರ್ಹರಿಗೆ ನೀಡಲಾಗುವ ಅವಕಾಶ ಎಂಬ ಭಾವನೆ ಇದೆ. ಆದರೆ, ಅದು ಅರ್ಹರ ಪ್ರತಿಭೆಯನ್ನು ಗುರುತಿಸಲು ಜಾತಿ ವ್ಯವಸ್ಥೆ ಸಮಾಜ ವಿಫಲವಾದ ಕಾರಣ ಕಿತ್ತೆಸೆಯುವುದಾಗಿದೆ. ಮೀಸಲಾತಿ ಆರ್ಥಿಕ ಅವಕಾಶ ಅಲ್ಲ. ವ್ಯಕ್ತಿಗತವೂ ಅಲ್ಲ. ಅದೊಂದು ಸಮುದಾಯದ ಭಾಗವಷ್ಟೆ ಎಂದು ಡಾ. ಕಿರಣ್ ಗಾಜನೂರು ಹೇಳಿದರು.

ಮುರಳಿ ಕಾಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X