Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರ ಜನರದ್ದೆಂದು ನೆನಪಿರಲಿ: ಪಿಣರಾಯಿ

ಸರಕಾರ ಜನರದ್ದೆಂದು ನೆನಪಿರಲಿ: ಪಿಣರಾಯಿ

ವಾರ್ತಾಭಾರತಿವಾರ್ತಾಭಾರತಿ27 Dec 2016 4:23 PM IST
share
ಸರಕಾರ ಜನರದ್ದೆಂದು ನೆನಪಿರಲಿ: ಪಿಣರಾಯಿ

ತಿರುವನಂತಪುರಂ,ಡಿ.27: ರಾಜ್ಯದಲ್ಲಿ ಎಲ್‌ಡಿಎಫ್ ಅಧಿಕಾರದಲ್ಲಿ ಇದ್ದರೂ ಸರಕಾರ ಜನರದ್ದೆನ್ನುವುದು ನೆನಪಿರಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಸರಕಾರಿ ಕ್ರಮಗಳು ತೀರ್ಮಾನಗಳು ಜನರಿಗಾಗಿರಬೇಕು. ಅಲ್ಲಿ ವ್ಯಕ್ತಿ, ರಾಜಕೀಯ ಹಿತಾಸಕ್ತಿಗಳಿಗೆ ಸ್ಥಾನವಿಲ್ಲ ಎಂದು ಸರಕಾರದ ಟೀಕಾಕಾರಿಗೆ ಕಟು ಉತ್ತರ ನೀಡಿದ್ದಾರೆ.

ಅವರು ಮುಖ್ಯಮಂತ್ರಿ, ಇತರ ಸಚಿವರ ವೈಯಕ್ತಿಕ ಸಿಬ್ಬಂದಿಗಳ ಸಭೆಯಲ್ಲಿ ಮಾತಾಡುತ್ತಿದ್ದರು.

ಭ್ರಷ್ಟಾಚಾರವನ್ನುಯಾವ ಕಾರಣಕ್ಕೂ ಸಹಿಸಲಾಗದು. ಕಳೆದಸರಕಾರದ ಸಮಯದಲ್ಲಿ ಕೆಳಗಿನಿಂದ ಮೇಲಿನವರೆಗೂ ಭ್ರಷ್ಟಾಚಾರ ರಾರಾಜಿಸುತ್ತಿತ್ತು. ಇದರಿಂದ ಹತಾಶ ಜನರು ಎಲ್‌ಡಿಎಫ್‌ನ್ನು ಗೆಲ್ಲಿಸಿದ್ದಾರೆ. ಆ ನೆನಪು ಪರ್ಸನಲ್ ಸ್ಟಾಫ್‌ಗಳಲ್ಲಿರಬೇಕು. ವಿವಿಧ ಕಚೇರಿಗಳಿಗೆ ಕೆಲವರು ಈಗಲೂ ಚೀಲ ಹಿಡಿದುಕೊಂಡು ಹೋಗಿ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.

ಇವರು ದೂರುದಾರರನ್ನು ಕರೆದುಕೊಂಡು ಕಚೇರಿಗಳಿಗೆ ಬರುತ್ತಾರೆ. ಇವರು ಮಧ್ಯವರ್ತಿಗಳಾಗಿರುತ್ತಾರೆ. ದೂರುದಾರರನ್ನು ಹೊರಗೆ ನಿಲ್ಲಿಸಿ ಮಧ್ಯವರ್ತಿಗಳು ಸಚಿವರ ಕಚೇರಿಯ ಒಳಗೆ ಬರುತ್ತಾರೆ. ದೂರುದಾರರ ಕಾರಣಗಳನ್ನು ಪರ್ಸನಲ್ ಸ್ಟಾಫ್‌ಗಳೊಡನೆ ಚರ್ಚಿಸುತ್ತಾರೆ. ಹೊರಗೆ ಇರುವ ದೂರುದಾರರಲ್ಲಿ ವ್ಯವಹಾರ ಕುದುರಿದೆ ಎಂದು ಹೇಳುತ್ತಾರೆ. ಸಹಜವಾಗಿ ನಡೆದ ಕೆಲಸಕ್ಕೂ ಅವರು ದೂರುದಾರರಿಂದ ಹಣವನ್ನು ಪಡೆಯುತ್ತಾರೆ ಇಂತಹವರನ್ನು ದೂರವಿರಿಸಬೇಕೆಂದು ಮುಖ್ಯಮಂತ್ರಿ ಸಲಹೆ ನೀಡಿದರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X