Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಎಸ್ಪಿಯ ಠೇವಣಿಗೆ ಪೈಸೆ ಪೈಸೆ...

ಬಿಎಸ್ಪಿಯ ಠೇವಣಿಗೆ ಪೈಸೆ ಪೈಸೆ ಲೆಕ್ಕವಿದೆ: ಮಾಯಾವತಿ

ವಾರ್ತಾಭಾರತಿವಾರ್ತಾಭಾರತಿ27 Dec 2016 7:16 PM IST
share
ಬಿಎಸ್ಪಿಯ ಠೇವಣಿಗೆ ಪೈಸೆ ಪೈಸೆ ಲೆಕ್ಕವಿದೆ: ಮಾಯಾವತಿ

ಹೊಸದಿಲ್ಲಿ, ಡಿ.27: ನೋಟು ರದ್ದತಿಯ ಬಳಿಕ ತನ್ನ ಪಕ್ಷದ ಖಾತೆಯಲ್ಲಿ ಠೇವಣಿ ಇರಿಸಲಾಗಿರುವ ರೂ.100 ಕೋಟಿಗೂ ಹೆಚ್ಚು ಮೊತ್ತದ ಹಣಕ್ಕೆ ಪೈಸೆ ಪೈಸೆ ಲೆಕ್ಕ ತಮ್ಮಲ್ಲಿದೆಯೆಂದು ಬಿಎಸ್ಪಿ ವರಿಷ್ಠ ಮಾಯಾವತಿ ಇಂದು ಪ್ರತಿಪಾದಿಸಿದ್ದಾರೆ. ಉತ್ತರಪ್ರದೇಶದ ನಿರ್ಣಾಯಕ ಚುನಾವಣೆಗೆ ಮುನ್ನ ತನ್ನ ಪಕ್ಷದ ವರ್ಚಸ್ಸಿಗೆ ಧಕ್ಕೆ ತರಲು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಧಿಕಾರದ ದುರುಪಯೋಗ ಮಾಡುತ್ತಿದ್ದಾರೆಂದು ಅವರು ಆರೋಪಿಸಿದ್ದಾರೆ.

ಹಣವು ಪಕ್ಷಕ್ಕೆ ಸೇರಿದುದಾಗಿದೆ. ಸೂಕ್ತ ಪ್ರಕ್ರಿಯೆಯ ಬಳಿಕವೇ ಅದನ್ನು ಠೇವಣಿಯಿರಿಸಲಾಗಿದೆ. ತಾವು ಬ್ಯಾಂಕ್‌ನಲ್ಲಿರಿಸಿರುವ ಪ್ರತಿ ರೂಪಾಯಿಗೂ ತಮ್ಮಲ್ಲಿ ಲೆಕ್ಕವಿದೆ. ಆದರೆ ಬಿಜೆಪಿಯ ಠೇವಣಿಗಳಿಗಿದೆಯೇ? ಎಂದು ಪ್ರಶ್ನಿಸಿರುವ ಮಾಯಾವತಿ, ಬಿಜೆಪಿಯ ಬ್ಯಾಂಕ್ ಠೇವಣಿಗಳನ್ನು ಬಹಿರಂಗಪಡಿಸುವಂತೆ ಪ್ರಧಾನಿ ಮೋದಿಯವರಿಗೆ ಸವಾಲು ಹಾಕಿದ್ದಾರೆ.

ಅವರಿಗೆ ಪ್ರಾಮಾಣಿಕತೆ ಹಾಗೂ ವಿಧೇಯತೆ ಇರುವುದೇ ಹೌದಾದರೆ ಬಿಜೆಪಿಯ ಯಾವುದೇ ದೊಡ್ಡ ಖರ್ಚು, ಠೇವಣಿಗಳ ಹೇಳಿಕೆಗಳು ಹಾಗೂ ವೆಚ್ಚಗಳನ್ನು ಬಹಿರಂಗಪಡಿಸುವಂತೆ ತಾನು ಪ್ರಧಾನಿಗೆ ಹೇಳಲಿಚ್ಛಿಸುತ್ತೇನೆ. ಅದೆಲ್ಲವೂ ಬಹಿರಂಗವಾಗಲಿ ಎಂದು ಲಕ್ನೊದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯೊಂದರಲ್ಲಿ ಅವರು ಹೇಳಿದ್ದಾರೆ.

ನೋಟು ರದ್ದತಿಯ ಬಳಿಕ 7 ವಾರಗಳಲ್ಲಿ ಯೂನಿಯನ್ ಬ್ಯಾಂಕ್‌ನಲ್ಲಿರುವ ಬಿಎಸ್ಪಿಯ ಖಾತೆಗೆ ಸುಮಾರು ರೂ.104 ಕೋಟಿ ಜಮೆಯಾಗಿದೆ. ಅದೇ ಬ್ಯಾಂಕ್‌ನಲ್ಲಿ ಮಾಯಾವತಿಯವರ ಸೋದರ ಆನಂದ ಕುಮಾರ್ ಎಂಬವರ ಖಾತೆಯಲ್ಲಿ ರೂ.1.43 ಕೋಟಿ ಠೇವಣಿಯಿರಿಸಲಾಗಿದೆಯೆಂದು ಜಾರಿ ನಿರ್ದೇಶನಾಲಯದ ಮೂಲಗಳು ಬಹಿರಂಗಪಡಿಸಿದ್ದವು.

  ತಮ್ಮ ಪಕ್ಷವು ಶೀಘ್ರವೇ ನಡೆಯಲಿರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಗಾಗಿ ಬೆಂಬಲಿಗರಿಂದ ದೇಣಿಗೆ ಸಂಗ್ರಹಿಸುತ್ತಿದ್ದಾಗಲೇ ನೋಟು ನಿಷೇಧವನ್ನು ಘೋಷಿಸಲಾಯಿತು ಪಕ್ಷದ ಬಳಿಯಿದ್ದ ಹಳೆಯ ನೋಟುಗಳನ್ನು ಸೂಕ್ತ ಪ್ರಕ್ರಿಯೆ ನಡೆಸಿ ಠೇವಣಿಯಿರಿಸಲಾಗಿದೆ. ಲೆಕ್ಕವನ್ನು ಸ್ವತಃ ಪರಿಶೀಲಿಸಿದ್ದೇನೆ ಎಂದ ಮಾಯಾವತಿ, ಮತ್ತೆ ಹಳೆಯ ನೋಟುಗಳನ್ನು ತಾವು ಎಸೆಯಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ತನ್ನ ಸೋದರನ ವಿರುದ್ಧ ಆರೋಪವನ್ನು ತಳ್ಳಿಹಾಕಿರುವ ಅವರು, ಆತನಿಗೆ ವ್ಯಾಪಾರವಿದೆ. ಆದಾಯ ತೆರಿಗೆ ನಿಯಮದಂತೆಯೇ ಆತ ಬ್ಯಾಂಕ್‌ಖಾತೆಯಲ್ಲಿ ಹಣ ಠೇವಣಿಯಿರಿಸಿದ್ದಾರೆಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X