Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಆದಿವಾಸಿಗಳ ಸ್ಥಳಾಂತರ ಸಲ್ಲದು’

‘ಆದಿವಾಸಿಗಳ ಸ್ಥಳಾಂತರ ಸಲ್ಲದು’

ವಾರ್ತಾಭಾರತಿವಾರ್ತಾಭಾರತಿ27 Dec 2016 11:07 PM IST
share

ಶಿವಮೊಗ್ಗ, ಡಿ.27: ಬೃಹತ್ ಪ್ರಮಾಣದಲ್ಲಿ ದೇಶದ ಜೀವವೈವಿಧ್ಯವನ್ನು ಒಂದೆಡೆ ನಾವು ಕಳೆದುಕೊಳ್ಳುತ್ತಿದ್ದೇವೆ. ಇನ್ನೊಂದೆಡೆ ಅರಣ್ಯವನ್ನು ಅವಲಂಬಿಸಿ ಬದುಕುತ್ತಿರುವ ಸಮುದಾಯಗಳ ಬಡತನವನ್ನು ನಿವಾರಿಸುವಲ್ಲಿಯೂ ವಿಫಲವಾಗಿದ್ದೇವೆ ಎಂದು ತಿರುವನಂತಪುರಂನ ಪರಿಸರ ನಿರ್ದೇಶನಾಲಯದ ಪರಿಸರ ತಜ್ಞ ಪ್ರೊ. ಎಸ್. ಫೈಝಿ ವಿಷಾದಿಸಿದ್ದಾರೆ. ಗರದ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲಿ ಮಂಗಳವಾರದಿಂದ ಆರಂಭವಾದ ಪರಿಸರ ವೈಪರೀತ್ಯ ಮತ್ತು ಕೃಷಿ ಪ್ರಾಧಾನ್ಯದ ಕೀಟಗಳ ಹಾಗೂ ಇತರ ಪ್ರಾಣಿಗಳ ನಿರ್ವಹಣೆ ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ಜೀವವೈವಿಧ್ಯದಲ್ಲಿ 96,373 ಪ್ರಭೇದಗಳಿವೆ. ಸುಮಾರು 56,515 ತಳಿಯ ಸಸ್ಯಗಳಿವೆ. ಇವುಗಳನ್ನು ರಕ್ಷಿಸುತ್ತಾ ಬದುಕುತ್ತಿರುವ ಅರಣ್ಯವಾಸಿಗಳು (ಆದಿವಾಸಿಗಳು) ಸುಮಾರು ಶೇ.8.6ರಷ್ಟು ಜನಸಂಖ್ಯೆಯ ಪ್ರಮಾಣದಲ್ಲಿದ್ದಾರೆ. ಇಷ್ಟಿದ್ದರೂ ಶೇ.30ರಷ್ಟು ಅರಣ್ಯ ಅಳಿವು, ಉಳಿವಿನ ಸಮಸ್ಯೆಯಲ್ಲಿ ಸಿಲುಕಿದೆ ಎಂದರು.


ಎಲ್ಲಿ ಹೆಚ್ಚಿನ ಪ್ರಮಾಣದ, ಶ್ರೀಮಂತ ಜೀವ ವೈವಿಧ್ಯವಿದೆಯೋ ಅಲ್ಲಿ ವಾಸಿಸುವ ಜನರು ಬಡತನ ಮತ್ತು ಹಸಿವಿನಿಂದ ಬಳಲುತ್ತಿದ್ದಾರೆ. ಇದು ಹಿಂದಿನ ವಸಾಹತುಶಾಹಿ ಕಾಲವನ್ನು ನೆನಪಿಸುತ್ತದೆ. ಇಲ್ಲಿ ವಾಸಿಸುವ ಜನರು ಯಾವುದೇ ಆಧುನಿಕ ಸೌಲಭ್ಯಗಳಿಲ್ಲದೇ, ಅಭಿವೃದ್ಧಿ ಎಂಬ ಶಬ್ದಕೇಳದೇ ಬದುಕುತ್ತಿದ್ದಾರೆ ಎಂದು ವಿಷಾದಿಸಿದರು.
 ಅರಣ್ಯಜೀವ ವೈವಿಧ್ಯ ಸುಧಾರಣೆಯಾಗಬೇಕು ಎನ್ನುವ ಉದ್ದೇಶದಿಂದ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅರಣ್ಯಗಳ ಸುಸ್ಥಿರ ಬಳಕೆ, ಲಾಭಗಳ ವಿಂಗಡಣೆ, ರಕ್ಷಣೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

2,000 ಇಸವಿಯಲ್ಲಿ ಜರಗಿದ ಜೀವವೈವಿಧ್ಯ ಜಾಗತಿಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೆ ತರುವಲ್ಲಿ ಕೆಲವು ಅಡ್ಡಿ ಆತಂಕಗಳು ಎದುರಾಗಿವೆ ಎಂದರು. ಭಾರತದ ಸಂವಿಧಾನದ 39ಬಿ ವಿಧಿಯಲ್ಲಿ ಸಾರ್ವಜನಿಕರಿಗೆ ಒಳ್ಳೆಯದಾಗುವ ದೃಷ್ಟಿಯಿಂದ ನೈಸರ್ಗಿಕ ಸಂಪನ್ಮೂಲಗಳನ್ನು ಹೊಂದುವ ಮತ್ತು ನಿಯಂತ್ರಿಸುವ ಅಧಿಕಾರ ಇದೆ. 48ಎ ವಿಧಿಯಲ್ಲಿ ಅರಣ್ಯ ಮತ್ತು ವನ್ಯಪ್ರಾಣಿಗಳನ್ನು ರಕ್ಷಿಸುವ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಲಾಗಿದೆ. ಈ ಸುಧಾರಣೆಯು ಸುಸ್ಥಿರ ಅಭಿವೃದ್ಧಿಗೆ ಸಾಕಷ್ಟು ಕಾಣಿಕೆಯನ್ನು ನೀಡುತ್ತಿದೆ ಎಂದು ವಿವರಿಸಿದರು.

ಜೀವವೈವಿಧ್ಯ ಉಳಿಸಿಕೊಳ್ಳಲು ಡೆಹ್ರಾಡೂನ್ ನಿರ್ಣಯ ಮತ್ತು ಚೆನ್ನೈ ನಿರ್ಣಯ ಜಾರಿಯಾಗಬೇಕು. 2002ರ ಜೀವ ವೈವಿಧ್ಯ ಕಾಯ್ದೆ ಅನುಷ್ಠಾನವಾಗಬೇಕು. ಸುಬ್ರಹ್ಮಣ್ಯಂ ಸಮಿತಿ ನೀಡಿದ ವರದಿ ಪ್ರಕಾರ ರಾಷ್ಟ್ರೀಯ ಅರಣ್ಯನೀತಿ ಜಾರಿಯಾಗಬೇಕು. ಮಾನವ-ವನ್ಯಪ್ರಾಣಿಗಳ ಸಂಘರ್ಷ ನಿಲ್ಲಬೇಕು. ರಾಷ್ಟ್ರೀಯ ಜೀವವೈವಿಧ್ಯ ಕಾರ್ಯಯೋಜನೆ ರೂಪಿಸಬೇಕು. ಅರಣ್ಯ ನಿರ್ವಹಣೆಯ ಜವಾಬ್ದಾರಿ ಜನರು ಮತ್ತು ಇಲಾಖೆಯ ಜಂಟಿ ಕರ್ತವ್ಯವಾಗಬೇಕು.

ಆದಿವಾಸಿಗಳ ಸ್ಥಳಾಂತರ ಸಲ್ಲದು ಎಂದು ಹೇಳಿದರು. ವಿಚಾರಸಂಕಿರಣದಲ್ಲಿ ಮುಖ್ಯ ಆತಿಥಿಗಳಾಗಿ ಬೆಂಗಳೂರಿನ ಇಥಾಲಾಜಿಕಲ್ ಸೊಸೈಟಿಯ ಅಧ್ಯಕ್ಷೆ ಪ್ರೊ. ಗೀತಾ ಬಾಲಿ ಉಪಸ್ಥಿತರಿದ್ದರು. ಕೃಷಿ ವಿವಿ ಆಡಳಿತ ಮಂಡಳಿಯ ಸದಸ್ಯರಾದ ಎಚ್.ಎಲ್. ಹರೀಶ್, ಪ್ರೊ. ಟಿ.ಕೆ. ಸಿದ್ದರಾಮೇಗೌಡ ಹಾಜರಿದ್ದರು. ಅಧ್ಯಕ್ಷತೆಯನ್ನು ವಿವಿ ಕುಲಪತಿ ಪ್ರೊ. ಸಿ. ವಾಸುದೇವಪ್ಪ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X