Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಲ್ಲಿ ಬಸ್ಸಿನಲ್ಲಿ ಖಾಲಿ ಸೀಟಿದ್ದರೂ...

ಇಲ್ಲಿ ಬಸ್ಸಿನಲ್ಲಿ ಖಾಲಿ ಸೀಟಿದ್ದರೂ ಕುಳಿತುಕೊಳ್ಳುವಂತಿಲ್ಲ!

ಕಾರಣವೇನು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ29 Dec 2016 9:12 AM IST
share
ಇಲ್ಲಿ ಬಸ್ಸಿನಲ್ಲಿ ಖಾಲಿ ಸೀಟಿದ್ದರೂ ಕುಳಿತುಕೊಳ್ಳುವಂತಿಲ್ಲ!

ಆಗ್ರಾ, ಡಿ.29: ಇದು ಉತ್ತರ ಪ್ರದೇಶದ ವಿಚಿತ್ರ ಸಂಗತಿ. ಉತ್ತರ ಪ್ರದೇಶ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಖಾಲಿ ಸೀಟಿದ್ದರೂ ನೀವು ಕೂರುವಂತಿಲ್ಲ. ಏಕೆ ಎಂಬ ಕುತೂಹಲವೇ?

ಇಂಥದ್ದೇ ಕುತೂಹಲ ದಿವ್ಯಕುಮಾರಿ (22) ಎಂಬ ಕಾಲೇಜು ಯುವತಿಗೂ ಬಂತು. ಆಗ್ರಾದಿಂದ ಕಾಸಗಂಜ್‌ನಲ್ಲಿರುವ ಕಾಲೇಜಿಗೆ ತೆರಳಲು ಬಸ್ಸೇರಿದಳು. ಬಸ್ಸಿನಲ್ಲಿ ಎರಡು ಆಸನಗಳು ಖಾಲಿ ಇರುವುದು ಗಮನಿಸಿದಳು. ಪಕ್ಕದಲ್ಲಿದ್ದ ಪ್ರಯಾಣಿಕರನ್ನು ಕುರಿತು, ನಾನು ಕೂರಬಹುದೇ ಎಂದು ಕೇಳಿದಳು. "ಇಲ್ಲ" ಎಂಬ ಉತ್ತರ ಆ ದಂಪತಿಯಿಂದ ಬಂತು. "ಏಕೆ" ಎಂಬ ಪ್ರಶ್ನೆಗೆ ದೊರಕಿದ ಉತ್ತರ, "ನಾವು ಆ ಸೀಟಿಗೆ ಟಿಕೆಟ್ ಖರೀದಿಸಿದ್ದೇವೆ"

ಇಲ್ಲದವರಿಗಾಗಿ ಏಕೆ ಟಿಕೆಟ್ ಎಂಬ ಕುತೂಹಲ ಮತ್ತಷ್ಟು ಹೆಚ್ಚಿ ಪ್ರಶ್ನಿಸಿದಾಗ ತಿಳಿದು ಬಂದದ್ದು ಇಷ್ಟು. ಮಧ್ಯಪ್ರದೇಶ ಹಾಗೂ ರಾಜಸ್ಥಾನದ ಜತೆ ಗಡಿ ಹಂಚಿಕೊಳ್ಳುವ ಈ ಪ್ರದೇಶದಲ್ಲಿ ಜನ, ತಮ್ಮ ಸಂಬಂಧಿಕರ ಅಥವಾ ಸ್ನೇಹಿತರ ಅಂತ್ಯಸಂಸ್ಕಾರಕ್ಕೆ ತೆರಳುವಾಗ, "ಮೃತ ವ್ಯಕ್ತಿ"ಗಳಿಗಾಗಿ ಕೂಡಾ ಟಿಕೆಟ್ ಖರೀದಿಸಿ ಇಡುತ್ತಾರೆ. ಇದು ಇಲ್ಲಿನ ರೂಢಿ ಎಂಬ ಅಚ್ಚರಿಯ ಅಂಶ.

ಈ ದಂಪತಿ ಕಾಸಗಂಜ್‌ನ ಸರೋನ್ ಪ್ರದೇಶಕ್ಕೆ ಅಸ್ಥಿ ವಿಸರ್ಜನೆಗಾಗಿ ತೆರಳುತ್ತಿದ್ದರು. ಈ ರಾಜ್ಯಗಳ ಹಲವು ಕಡೆಗಳಲ್ಲಿ ಈ ಪದ್ಧತಿ ಇದೆ ಎಂದು ಸಾರಿಗೆ ಸಂಸ್ಥೆ ಸಿಬ್ಬಂದಿ ವಿವರಿಸಿದರು. ಅಸ್ಥಿ ವಿಸರ್ಜನೆಗೆ ತೆರಳುವ ವೇಳೆ, ಮೃತ ವ್ಯಕ್ತಿಗಳು ಕೂಡಾ ಸಂಬಂಧಿಕರ ಜತೆಗೆ ಪ್ರಯಾಣಿಸುತ್ತಾರೆ ಎಂಬ ನಂಬಿಕೆಯಿಂದ ಜನ, ಅವರಿಗಾಗಿಯೂ ಟಿಕೆಟ್ ಖರೀದಿಸುವುದು ಇಲ್ಲಿ ಸಾಮಾನ್ಯ ಎಂದು ಪ್ರಾದೇಶಿಕ ವ್ಯವಸ್ಥಾಪಕ ರಾಜೀವ್‌ಕುಮಾರ್ ಶರ್ಮಾ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X