Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾಗೆ ಈ ಮೂರು ಪ್ರತಿಷ್ಠಿತ...

ಜಯಲಲಿತಾಗೆ ಈ ಮೂರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಗೌರವಿಸಬೇಕು ಎನ್ನುತ್ತಿದೆ ಎಐಎಡಿಎಂಕೆ !

ಇನ್ನೂ ಒಂದು ಪ್ರಮುಖ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ29 Dec 2016 12:26 PM IST
share
ಜಯಲಲಿತಾಗೆ ಈ ಮೂರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಗೌರವಿಸಬೇಕು ಎನ್ನುತ್ತಿದೆ ಎಐಎಡಿಎಂಕೆ !

ಚೆನ್ನೈ, ಡಿ.29 : ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮರಣಾ ನಂತರ ಪ್ರಪ್ರಥಮ ಬಾರಿಗೆ ಸಭೆ ಸೇರಿದ ಎಐಎಡಿಎಂಕೆ ಜನರಲ್ ಕೌನ್ಸಿಲ್‌ ಪಕ್ಷದ ದಿವಂಗತ ಅಧಿನಾಯಕಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಅಲ್ಲದೆ ರಾಮನ್ ಮ್ಯಾಗ್ಸೇಸೆ ಪ್ರಶಸ್ತಿ ಹಾಗೂ ನೊಬೆಲ್ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಲು ನಿರ್ಧರಿಸಿದೆ. ತನ್ನ ನಾಯಕಿಯ ಕಂಚಿನ ಪುತ್ಥಳಿಯನ್ನು ಸಂಸತ್ತಿನಲ್ಲಿ ಸ್ಥಾಪಿಸಬೇಕೆಂಬ ಬೇಡಿಕೆಯನ್ನೂ ಪಕ್ಷ ಇಟ್ಟಿದೆ.

ಗುರುವಾರ ನಡೆದ ಸಭೆಯಲ್ಲಿ ಪಕ್ಷ ಒಟ್ಟು 14 ನಿರ್ಣಯಗಳನ್ನು ಅಂಗೀಕರಿಸಿದ್ದು, ಪಕ್ಷ ಹಾಗೂ ತಮಿಳುನಾಡಿನ ಜನತೆಯ ಕಲ್ಯಾಣಕ್ಕಾಗಿ ಜಯಲಲಿತಾ ಮಾಡಿದ ಹಲವು ತ್ಯಾಗಗಳನ್ನುಸ್ಮರಿಸುತ್ತಾ ಆಕೆಯ ಕೆಲಸಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಕ್ರಮ ಕೈಗೊಳ್ಳಲು ನಿರ್ಧರಿಸಿದೆ.

ಸಭೆ ಅಂಗೀಕರಿಸಿದ ಇತರ ನಿರ್ಣಯಗಳೆಂದರೆ, ಜಯಲಲಿತಾ ನಿಧನದ ಹಿನ್ನೆಲೆಯಲ್ಲಿ ಹೊಸ ಪ್ರಧಾನ ಕಾರ್ಯದರ್ಶಿಯನ್ನು ನೇಮಿಸಬೇಕು, ಆಕೆಯ ಜನ್ಮ ದಿನವನ್ನು ರೈತರ ದಿನವೆಂದು ಘೋಷಿಸಬೇಕು, ಎಲ್ಲರಿಗೂ ಪೌಷ್ಠಿಕಾಂಶ ಭರಿತ ಆಹಾರ ದೊರೆಯಲು ಯಶಸ್ವಿಯಾದ ಆಕೆಗೆ ಈ ನಿಟ್ಟಿನಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು ಹಾಗೂ ಎಂಜಿಆರ್ ಅವರ 100ನೇ ಜನ್ಮ ದಿನಾಚರಣೆಯನ್ನು ಮಕ್ಕಲ್ ಪಾನಿಸಾಮಾಜಿಕ ಕಾರ್ಯ ದಿನ ಎಂದು ಘೊಷಿಸಬೇಕು.

ಪುರಚ್ಚಿ ತಳೈವಿ ಅಮ್ಮ ತೋರಿಸಿದ ಹಾದಿಯಂತೆ ಪಕ್ಷವು ಗೌರವಾನ್ವಿತ ಚಿನ್ನಮ್ಮ ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದು ಎಂಬ ನಿರ್ಣಯವನ್ನೂ ಅಂಗೀಕರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X