ಯಡಿಯೂರಪ್ಪ ವಿರುದ್ಧ ಅಕ್ರಮ ಆಸ್ತಿ ಆರೋಪ ನಿರಾಧಾರ
ಶಿವಮೊಗ್ಗ ಸಿವಿಲ್ ನ್ಯಾಯಾಲಯ ತೀರ್ಪು

ಶಿವಮೊಗ್ಗ, ಡಿ.29: ಅಕ್ರಮ ಆಸ್ತಿ ಸಂಪಾದನೆ ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಲ್ಲಿನ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದೆ. ಈ ತೀರ್ಪಿನಿಂದ ಬಿಎಸ್ವೈ ನಿರಾಳರಾಗಿದ್ದಾರೆ.
ಬಿಎಸ್ವೈ ಆಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆಂದು ಆರೋಪಿಸಿ ಸ್ಥಳೀಯ ವಕೀಲ ವಿನೋದ್ ನ್ಯಾಯಾಲಯಕ್ಕೆ 3 ಅರ್ಜಿಗಳನ್ನು ಸಲ್ಲಿಸಿದ್ದರು.
ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯ ಬಿಎಸ್ ಯಡಿಯೂರಪ್ಪರ ವಿರುದ್ಧ ಆರೋಪ ನಿರಾಧಾರವಾಗಿದೆ ಎಂದು ಹೇಳಿ ಅರ್ಜಿಗಳನ್ನು ವಜಾಗೊಳಿಸಿತು.
Next Story





