Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿಯಲ್ಲಿ ಸರಣಿ ಅಪಘಾತ

ಮುಲ್ಕಿಯಲ್ಲಿ ಸರಣಿ ಅಪಘಾತ

ವಾರ್ತಾಭಾರತಿವಾರ್ತಾಭಾರತಿ29 Dec 2016 10:27 PM IST
share
ಮುಲ್ಕಿಯಲ್ಲಿ  ಸರಣಿ ಅಪಘಾತ

ಮುಲ್ಕಿ, ಡಿ. 29: ರಾಷ್ಟ್ರೀಯ ಹೆದ್ದಾರಿ 66ರ ಕೋಲ್ನಾಡು ಬಳಿಯಲ್ಲಿ ಲಾರಿ ಮತ್ತು ಕಂಟೈನರ್ ಮತ್ತು ಟಾಟಾ ಸುಮೋ ನಡುವೆ ಗುರುವಾರ ತಡರಾತ್ರಿ ನಡೆದ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 ಅಪಘಾತದಲ್ಲಿ ಗಾಯಗೊಂಡವರನ್ನು ಕಂಟೈನರ್ ಚಾಲಕ ತಮಿಳುನಾಡು ನಿವಾಸಿ ವೆಂಕಟೇಶ್(52), ಲಾರಿಯ ಚಾಲಕರಾದ ಮಹಾರಾಷ್ಟ್ರ ಮೂಲದ ದತ್ತಾತ್ರೇಯ ಮತ್ತು ವೆಂಕಟರಮಣ ಎಂದು ಗುರುತಿಸಲಾಗಿದೆ.

 ಮಂಗಳೂರಿನಿಂದ ಪಡುಬಿದ್ರೆ ಕಂಪನಿಯ ಸಾಮಾನುಗಳನ್ನು ಕೊಂಡುಹೋಗುತ್ತಿದ್ದ ಕಂಟೈನರ್ ಪುಣೆಯಿಂದ ಮಂಗಳೂರು ಕಡೆಗೆ ನೀರುಳ್ಳಿ ಹೇರಿಕೊಂಡು ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಆ ವೇಳೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳದ ಕಮರಿಗೆ ಉರುಳಿ ಬಿದ್ದಿದೆ.

 ಅಪಘಾತದ ವೇಳೆ ಲಾರಿಯ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಟಾಟಾ ಸುಮೋ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಜಖಂಗೊಂಡಿದೆ. ಅಪಘಾತದ ರಭಸಕ್ಕೆ ಲಾರಿ ಚಾಲಕನ ನಿಯಂತ್ರಣ ತಪ್ಪಿಹೆದ್ದಾರಿಯ ವಿಭಜಕವನ್ನು ಮೇಲೇರಿ ನಿಂತಿದೆ ಎಂದು ತಿಳಿದು ಬಂದಿದೆ.

ಅಪಘಾತದಿಂದ ಟಾಟಾ ಸುಮೋ ವಾಹನಕ್ಕೂ ಹಾನಿಯಾಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
 
ತಪ್ಪಿದ ಹೆಚ್ಚಿನ ಅನಾಹುತ:

ಕಂಟೈನರ್ ಪಲ್ಟಿಯಾದ ಸ್ಥಳದಲ್ಲಿ ಸ್ಥಳೀಯ ನಿವಾಸಿ ದಿನೇಶ್ ಕೋಲ್ನಾಡು ಎಂಬವರ ಮನೆ ಹಾಗೂ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ವಾಹನ ಕೂದಲೆಳೆಯ ಅಂತರದಿಂದ ಪಾರಾಗಿದೆ.

 ಹೆದ್ದಾರಿ ಸಂಚಾರ ಅಸ್ತವ್ಯಸ್ತ:

ಅಪಘಾತದಿಂದ ಹೆದ್ದಾರಿ ಸಂಚಾರ ಸುಮಾರು ಎರಡು ಗಂಟೆಗಳ ಕಾಲ ಅಸ್ತವ್ಯಸ್ತಗೊಂಡಿತ್ತು. ಸುರತ್ಕಲ್ ಸಂಚಾರಿ ಪೊಲೀಸರು ಇನ್ಸ್‌ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಸುಗಮ ಸಂಚಾರಕ್ಕೆ ಹರಸಾಹಸ ಪಡಬೇಕಾಯಿತು.

ಅಪಾಯಕಾರಿ ದ್ವಿಮುಖ ರಸ್ತೆ:

ಮುಲ್ಕಿಗೆ ಬರುವ ತುಂಬೆ ನೀರಿನ ಪೈಪ್‌ಲೈನ್ ರಾಷ್ಟ್ರೀಯ ಹೆದ್ದಾರಿಯ ಅಡಿಯಲ್ಲಿ ಅಳವಡಿಸಲಾಗಿದೆ. ಇದು ಕಳೆದ ಹಲವು ದಿನಗಳಿಂದ ಸೋರುತ್ತಿರುವ ಕಾರಣ ಹೆದ್ದಾರಿಯನ್ನು ಅಗೆದು ದುರಸ್ತಿ ಕಾರ್ಯನಡೆಸಲಾಗುತ್ತಿದೆ. ಈ ಕಾರಣದಿಂದಾಗಿ ಕೋಲ್ನಾಡಿನಿಂದ ಪಡುಪಣಂಬೂರು ವರೆಗೆ ಏಕಮುಖ ಹೆದ್ದಾರಿಯನ್ನು ದ್ವಿಮುಖ ರಸ್ತೆಯನ್ನಾಗಿ ಮಾಡಲಾಗಿದೆ. ಇದರಿಂಗಾಗಿ ಪ್ರತೀ ದಿನ ಅಪಘಾತಗಳು ನಡೆಯುತ್ತಿರುತ್ತವೆ ಎಂದು ಸ್ಥಳೀಯರು ದೂರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X