Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಂಟಿಕೊಪ್ಪ: ಗ್ರಾಮಲೆಕ್ಕಾಧಿಕಾರಿ ಎಸಿಬಿ...

ಸುಂಟಿಕೊಪ್ಪ: ಗ್ರಾಮಲೆಕ್ಕಾಧಿಕಾರಿ ಎಸಿಬಿ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ30 Dec 2016 11:07 PM IST
share

ಲಂಚ ಸ್ವೀಕರಿಸುತ್ತಿದ್ದ ವೇಳೆ ಬಂಧನ
ಸುಂಟಿ ಕೊಪ್ಪ,ಡಿ.30: ಗ್ರಾಮಲೆಕ್ಕಾಧಿ ಕಾರಿಯೊಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಸುಂಟಿಕೊಪ್ಪ ನಾಡ ಕಚೇರಿಯಲ್ಲಿ ಚೆಟ್ಟಳ್ಳಿ ಮತ್ತು 7ನೆ ಹೊಸಕೋಟೆ ಗ್ರಾಮಗಳ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಚಂದ್ರಪ್ರಸಾದ್ ಎಂಬ ಅಧಿಕಾರಿಯೇ ಲಂಚದ ಆಸೆಗೆ ಬಲಿಯಾಗಿ ಶ್ರೀಕೃಷ್ಣನ ಜನ್ಮಸ್ಥಾನಕ್ಕೆ  ಸೇರಿದ್ದಾರೆ.

ಚೆಟ್ಟಳ್ಳಿಯ ಚೇರಳ ಶ್ರೀಮಂಗಲ ಗ್ರಾಮದ ಕಾಫಿ ಬೋರ್ಡ್ ನಿವಾಸಿಯಾಗಿರುವ ಪೇರಿಯನ ಉದಯ ಎಂಬವವರಿಂದ ರೂ. 7 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರು ಬಲೆ ಬೀಸಿದ್ದಾರೆ.


     ಪೇರಿಯನ ಉದಯ ಹಾಗೂ ಅವರ ಸಹೋದರರ ಆಸ್ತಿ ಪಾಲುಪರಿಕತ್ತಿಗೆ ಸಂಬಂಧಿಸಿದಂತೆ ನಮೂನೆ 29 ಮತ್ತು ಪಹಣಿ ಮಾಡಿಸಲು ಡಿ. 8 ರಂದು ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಈ ಕೆಲಸವನ್ನು ಮಾಡಿಕೊಡದೆ ಕಡತವನ್ನು ಬದಿಗಿರಿಸಿ ಕಚೇರಿಗೆ ಅಲೆದಾಡಿಸುತ್ತಾ ರೂ. 10 ಸಾವಿರದ ಲಂಚಕ್ಕೆ ಬೇಡಿಕೆ ಮುಂದಿಟ್ಟಿದ್ದರು ಎನ್ನಲಾಗಿದೆ. 29 ರಂದು ಪೇರಿಯನ ಉದಯರವರು ನಾಡ ಕಚೇರಿಗೆ ಬಂದಾಗ ಇವರಿಬ್ಬರ ನಡುವೆ 3 ಸಾವಿರಕ್ಕೆ ಒಡಂಬಡಿಕೆ ಏರ್ಪಟ್ಟಿತ್ತು ಎನ್ನಲಾಗಿದೆ. ಅದರಂತೆ ಇಂದು ಮಧ್ಯಾಹ್ನ 12:45ರ ಸಮಯದಲ್ಲಿ ಪೇರಿಯನ ಉದಯರವರಿಂದ ರೂ. 3 ಸಾವಿರದ ಬದಲಾಗಿ ಪೂರ್ವನಿಯೋಜಿತ ಸಂಚಿನಂತೆ ರೂ. 7 ಸಾವಿರ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗ ಭ್ರಷ್ಟಾಾರ ನಿಗ್ರಹ ದಳದ ಡಿವೈಎಸ್ಪಿ ಮತ್ತು ಸಿಬ್ಬಂದಿ ಮಿಂಚಿನ ದಾಳಿ ನಡೆಸಿ ಲಂಚದ ಹಣದ ಸಮೇತ ಆರೋಪಿ ಗ್ರಾಮ ಲೆಕ್ಕಿಗ ಚಂದ್ರಶೇಖರ್ ಅವರನ್ನು ವಶಕ್ಕೆ ತೆಗೆದುಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
 ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಗ್ರಾಮಲೆಕ್ಕಿಗ ಚಂದ್ರಪ್ರಸಾದ್ ಅವರು ಕಳೆದ ಮೂರು ತಿಂಗಳಿನಿಂದ ಸುಂಟಿಕೊಪ್ಪ ನಾಡ ಕಚೇರಿಯಲ್ಲಿ ಗ್ರಾಮಲೆಕ್ಕಿಗನಾಗಿ ಕರ್ತವ್ಯ ನಿರ್ವಹಿಸಿಕೊಂಡು ಬರುತ್ತಿದ್ದರು.

ನಾಡ ಕಚೇರಿ ಒಳಗೆ ಸ್ಥಳದ ಅಭಾವವಿದ್ದುದರಿಂದ ಪ್ರವಾಸಿ ಮಂದಿರದ ಪ್ರತ್ಯೇಕವಾದ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಕಚೇರಿಯ ಕೊಠಡಿ ನಾಡ ಕಚೇರಿಯಿಂದ ಪ್ರತ್ಯೇಕವಾಗಿದ್ದು, ಜನರ ಸುಳಿದಾಟ ಕಡಿಮೆಯಿದ್ದುದರಿಂದ ಕ್ಷಣಮಾತ್ರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದವರು ದಾಳಿ ಮಾಡಿದ ವಿಷಯ ಹೊರಬರಲು ಕೊಂಚ ತಡವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X