Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಸ್ತೆ ದುರಸ್ತಿಗೊಳಿಸುವಂತೆ...

ರಸ್ತೆ ದುರಸ್ತಿಗೊಳಿಸುವಂತೆ ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ30 Dec 2016 11:31 PM IST
share
ರಸ್ತೆ ದುರಸ್ತಿಗೊಳಿಸುವಂತೆ ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಸಚಿವಾಲಯ

ಪುತ್ತೂರು, ಡಿ.30 : ನಮ್ಮ ಊರಿನ ರಸ್ತೆಯು ತೀರಾ ಹದೆಗೆಟ್ಟಿದ್ದು, ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ 8ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪ್ರಧಾನಿಗೆ ಪತ್ರ ಬರೆದಿದ್ದು, ಈ ಪತ್ರಕ್ಕೆ ಸ್ಪಂಧನೆ ನೀಡಿದ ಪ್ರಧಾನಿ ಸಚಿವಾಲಯ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ದೂರನ್ನು ತುರ್ತಾಗಿ ಪರಿಶೀಲಿಸಿ ಕ್ರಮ ಕೈಗೊಂಡು ವರದಿ ನೀಡುವಂತೆ ಆದೇಶಿಸಿದೆ. 

ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ನಿವಾಸಿ ಆರ್.ಬಿ. ಸುವರ್ಣ ಅವರ ಪುತ್ರಿ ನಗರದ ಸೈಂಟ್ ವಿಕ್ಟರ್ಸ್‌ ಹೆಣ್ಮಕ್ಕಳ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಶ್ರಾವ್ಯ ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿನಿ.

‘ನಮ್ಮ ಊರಿನ ರಸ್ತೆ ತೀರಾಹದಗೆಟ್ಟಿದೆ, ಕಳೆದ ಕೆಲವು ವರ್ಷಗಳಿಂದ ಇದೇ ದುಸ್ಥಿತಿಯಲ್ಲಿದೆ, ರಸ್ತೆ ದುರಸ್ಥಿ ಮಾಡಿ ಎಂದು ನಾವೆಲ್ಲರೂ ಸೇರಿ ಪ್ರತಿಭಟನೆಯನ್ನು ಮಾಡಿದ್ದೆವು.  ಆದರೆ ಅನುದಾನ ನೀಡುವುದಾಗಿ ಅಕಾರಿಗಳು ಭರವಸೆ ನೀಡುತ್ತಾರೆಯೇ ವಿನಃ ರಸ್ತೆಯನ್ನು ದುರಸ್ಥಿ ಮಾಡುತ್ತಿಲ್ಲ. ಹೊಂಡಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಮಗೆ ಓಡಾಡಲು ಕಷ್ಟವಾಗುತ್ತಿದೆ. ಬಸ್ಸು ನಿಧಾನಕ್ಕೆ ಚಲಿಸುವ ಕಾರಣ ಅಥವಾ ರಸ್ತೆಯ ದುಸ್ಥಿತಿಯ ಕಾರಣಕ್ಕೆ ಬಸ್ಸುಗಳು ಬಾರದೇ ಇರುವುದರಿಂದ ನಮಗೆ ತೀವ್ರ ತೊಂದರೆಯಾಗಿದೆ.  ದಯವಿಟ್ಟು ನಮ್ಮ ದೇವಸ್ಯ- ಚೆಲ್ಯಡ್ಕ ರಸ್ತೆಯನ್ನು ದುರಸ್ಥಿ ಮಾಡಿಸಿ ’ ಹೀಗೆಂದು ಶ್ರಾವ್ಯ ಪ್ರಧಾನಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿದ ಪ್ರಧಾನಿ ಸಚಿವಾಲಯದಿಂದ ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯಲಾಗಿದ್ದು,  ವಿದ್ಯಾರ್ಥಿನಿ ದೂರನ್ನು ತುರ್ತಾಗಿ ಪರಿಶೀಲಿಸಿ ಕ್ರಮಕೈಗೊಂಡು ವರದಿ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.

ಪುತ್ತೂರು ನಗರದಿಂದ ಪಾಣಾಜೆ ಮೂಲಕ ಕೇರಳಕ್ಕೆ ಸಂಪರ್ಕವಿರುವ ಜಿಲ್ಲಾ ಪಂಚಾಯತ್ ರಸ್ತೆಯು ಪುತ್ತೂರಿನಿಂದ ಸುಮಾರು 5 ಕಿ.ಮೀ ದೂರದ ದೇವಸ್ಯದಿಂದ ಚೆಲ್ಯಡ್ಕ ಎಂಬಲ್ಲಿನತನಕ ಸುಮಾರು 4 ಕಿ.ಮೀ ತೀರಾ ಹದೆಗೆಟ್ಟಿದ್ದು, ಈ ರಸ್ತೆ ಬಳ್ಳೇರಿ ರಕ್ಷಿತಾರಣ್ಯ ಪ್ರದೇಶದಲ್ಲಿ ಸಾಗುವ ಕಾರಣ ಮಳೆ ನೀರಿಗೆ ರಸ್ತೆ ಕೆಟ್ಟು ಹೋಗಿದೆ. ಅಲ್ಲದೆ ಸೂಕ್ತ ಚರಂಡಿ ಇಲ್ಲದ ಕಾರಣ ಮಳೆಯ ನೀರು ರಸ್ತೆಯಲ್ಲೇ ಹರಿಯುವ ಕಾರಣ ರಸ್ತೆಯಲ್ಲಿನ ಡಾಮರನ್ನು ಕೊಚ್ಚಿಕೊಂಡು ಹೋಗಿದೆ.

ಈ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು ವಾಹನಗಳ ಸಂಚಾರಕ್ಕೆ ಅಯೋಗ್ಯವಾಗಿದೆ. ರಸ್ತೆ ಹದಗೆಟ್ಟಿರುವ ಕಾರಣ ರಸ್ತೆಯಲ್ಲಿ ಖಾಸಗಿ ಬಸ್ಸುಗಳು ಮಾತ್ರ ಓಡಾಡುತ್ತಿದ್ದು ಉಳಿದ ವಾಹನಗಳ ಓಡಾಟವೂ ಕಡಿಮೆಯಾಗಿದ್ದು ಸರಕಾರಿ ಬಸ್ಸುಗಳು ಈ ರಸ್ತೆಯಲ್ಲಿ ಸಂಚಾರವಿಲ್ಲ. ರಸ್ತೆಯನ್ನು ದುರಸ್ಥಿ ಮಡಿ ಎಂದು ಗ್ರಾಮಸ್ಥರು ಕಳೆದ ವರ್ಷ ಪ್ರತಿಭಟನೆಯನ್ನು ಮಾಡಿದ್ದರು.

ಇದೀಗ ವಿದ್ಯಾರ್ಥಿನಿ ಶ್ರಾವ್ಯ ಪ್ರಧಾನಿ ಮೋದಿಯವರಿಗೆ ಪತ್ರ ಬರೆದು ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ. ತನ್ನ ಪತ್ರಕ್ಕೆ ಪ್ರಧಾನಿ ಸ್ಪಂದನೆ ನೀಡಿರುವ ಕುರಿತು ವಿದ್ಯಾರ್ಥಿನಿ ಶ್ರಾವ್ಯ ಸಂತಸಗೊಂಡಿದ್ದು , ಇನ್ನಾದರೂ ನಮ್ಮೂರಿನ ರಸ್ತೆ ಅಭಿವೃದ್ದಿಯಾಗಬಹುದು ಎಂಬ ಖುಷಿಯಲ್ಲಿದ್ದಾರೆ.

ಜಿಪಂ ಇಲಾಖೆಯ ಇಂಜನಿಯರ್‌ಗಳು ಬಂದು ರಸ್ತೆಯನ್ನು ಪರಿಶೀಲಿಸಿ ತೆರಳಿದ್ದಾರೆ ಎಂದು ಸ್ಥಳೀಯ ಗ್ರಾಮಸಸ್ಥರು ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X