ಎತ್ತಿನಹೊಳೆ ಯೋಜನೆ ತಕ್ಷಣ ಕೈ ಬಿಡಿ: ಪೂಜಾರಿ
ಮಂಗಳೂರು, ಡಿ.31: ಯಾವ ಕಾರಣಕ್ಕೂ ಎತ್ತಿನಹೊಳೆ ಯೋಜನೆಯನ್ನು ಸರಕಾರ ಮುಂದುವರಿಸಬಾರದು. ಬಿಜೆಪಿ ಅವಧಿಯಲ್ಲಾದ ಈ ಯೋಜನೆಯನ್ನು ಕಾಂಗ್ರೆಸ್ ಸರಕಾರ ಮುಂದುವರಿಸುವುದು ಉಚಿತವಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಂಕಾರ ಬದಿಗಿಟ್ಟು ಈ ಯೋಜನೆಯನ್ನು ಕೈ ಬಿಡಬೇಕು ಮತ್ತು ಕಾಂಗ್ರೆಸ್ ಪಕ್ಷ ಉಳಿಸುವ ಕೆಲಸ ಮಾಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಹೇಳಿದರು.
ನಗರದ ಪ್ರೆಸ್ಕ್ಲಬ್ನಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಅಧಿಕಾರಕ್ಕೆ ಅಂಟಿಕೊಳ್ಳಬಾರದು. ಕೋಲಾರ ಜನತೆಗೆ ನೀರು ಒದಗಿಸುವುದಕ್ಕಾಗಿ ಕರಾವಳಿಯ ಜನತೆಗೆ ಅನ್ಯಾಯ ಮಾಡಬಾರದು. ಕೇಂದ್ರ ಅರಣ್ಯ ಸಚಿವ ಅನಿಲ್ ಮಾಧವ ಧವೆ ಎತ್ತಿನಹೊಳೆ ಯೋಜನೆಗೆ ಅನುಮತಿ ನೀಡಿಲ್ಲ ಎಂದು ಹೇಳಿಕೆ ನೀಡಿದ ಬಳಿಕವೂ ಮುಖ್ಯಮಂತ್ರಿ ಯೋಜನೆಯನ್ನು ಮಾಡಿಯೇ ಸಿದ್ಧ ಎಂದು ಹೇಳುತ್ತಿರುವುದು ಖಂಡನೀಯ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಕಳ್ಳಿಗೆ ತಾರನಾಥ ಶೆಟ್ಟಿ, ಮಾಜಿ ಮೇಯರ್ ಪುರಂದರದಾಸ್ ಕೂಳೂರು ಮತ್ತಿತರರು ಉಪಸ್ಥಿತರಿದ್ದರು
Next Story