Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸದ ನಳಿನ್ ಪ್ರಚೋದನಕಾರಿ ಹೇಳಿಕೆ : ...

ಸಂಸದ ನಳಿನ್ ಪ್ರಚೋದನಕಾರಿ ಹೇಳಿಕೆ : ಕಾಂಗ್ರೆಸ್ ನಿಂದ ಕೊಣಾಜೆ ಪೊಲೀಸ್ ಠಾಣೆಗೆ ದೂರು

ವಾರ್ತಾಭಾರತಿವಾರ್ತಾಭಾರತಿ2 Jan 2017 7:51 PM IST
share
ಸಂಸದ ನಳಿನ್ ಪ್ರಚೋದನಕಾರಿ ಹೇಳಿಕೆ :  ಕಾಂಗ್ರೆಸ್ ನಿಂದ ಕೊಣಾಜೆ ಪೊಲೀಸ್ ಠಾಣೆಗೆ ದೂರು

ಕೊಣಾಜೆ , ಜ.2 : ಅಸೈಗೋಳಿಯ ಕೊಣಾಜೆ ಪೊಲೀಸ್ ಠಾಣೆಯೆದುರು ರವಿವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಹತ್ತು ದಿನದೊಳಗೆ ಬಂಧಿಸದಿದ್ದರೆ ದ.ಕ.ಜಿಲ್ಲೆಗೆ ಬೆಂಕಿ ಹಚ್ಚಲು ಸಿದ್ದರಿದ್ದೇವೆ ಎಂಬ ಪ್ರಚೋದನಕಾರಿ ಹೇಳಿಕೆಯ ವಿರುದ್ದ ಉಳ್ಳಾಲ ವಲಯ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಸೋಮವಾರ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ.

 ಅಮಾಯಕ ಜನರು ನ್ಯಾಯಯುತ ಬೇಡಿಕೆಗಾಗಿ ಮೌನ ಪ್ರತಿಭಟನೆ ನಡೆಸುತ್ತಿದ್ದಾಗ ಸಂಸದ ನಳಿನ್ ಅವರು ಈ ಸಂದರ್ಭವನ್ನು ದುರುಪಯೋಗ ಪಡಿಸಿ ಆಕ್ರೋಶಕಾರಿ ಮಾತುಗಳನ್ನು ಆಡುವ ಮೂಲಕ ಜನರಿಗೆ ದಂಗೆ ಏಳುವಂತೆ ಪ್ರಚೋದನೆ ನೀಡಿರುತ್ತಾರೆ. ಇನ್ನು ಹತ್ತು ದಿನದೊಳಗೆ ಹಂತಕರನ್ನು ಬಂಧಿಸದಿದ್ದರೆ ಇಡೀ ಜಿಲ್ಲೆ ಬೆಂಕಿ ಹಚ್ಚುವುದಾಗಿ ಘೋಷಿಸಿದ್ದಾರೆ. ಜಿಲ್ಲೆಯ ಜವಾಬ್ಧಾರಿತ ಸಂಸದನಾಗಿ ಜಿಲ್ಲೆಯ ಜನರ ಪ್ರಾಣ ಹಾಗೂ ಆಸ್ತಿಪಾಸ್ತಿಗಳಿಗೆ ರಕ್ಷಣೆ ನೀಡಬೇಕಾದಂತಹ ಜವಬ್ಧಾರಿಯುತ ಸ್ಥಾನದಲ್ಲಿರುವ ನಳಿನ್ ಕುಮಾರ್ ಕಟೀಲ್ ಅವರು ಈ ರೀತಿ ಹೇಳಿಕೆ ನೀಡಿರುವುದು ದುರಂತವೇ ಸರಿ. ಈ ರೀತಿಯ ಬೆಂಕಿ ಉಗುಳುವ ಭಾಷಣದ ಮೂಲಕ ಜಿಲ್ಲೆಯ ಜನರಿಗೆ ಭಯದ ವಾತಾವರಣವನ್ನು ಉಂಟುಮಾಡಿರುವುದಕ್ಕೆ ತಕ್ಷಣ ಅವರನ್ನು ಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿದಕ್ಕಾಗಿ ಮೊಕದ್ದಮೆಗಳನ್ನು ದಾಖಲಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

 ಪೊಲೀಸರಿಗೆ ಮನವಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್‌ನ ಅಧ್ಯಕ್ಷ ಮಿಥುನ್ ರೈ, ಸೌಹಾರ್ದಯುತ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ರೇಕಕಾರಿ ಭಾಷಣ ಮಾಡುವ ಮೂಲಕ ಜಿಲ್ಲೆಯಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಈಗಾಗಲೇ ಸಿಓಡಿಗೆ ಪ್ರಕರಣವನ್ನು ಒಪ್ಪಿಸುವಂತೆ ಒತ್ತಾಯಿಸಲಾಗಿದೆ. ಈ ನಡುವೆ ನಳಿನ್ ಅವರು ಜಿಲ್ಲೆಗೆ ಬೆಂಕಿ ಹಚ್ಚುತ್ತೇವೆ ಎಂದು ಹೇಳಿರುವುದು ಸೌಹರ್ದತೆಗೆ ಧಕ್ಕೆ ತಂದಿದೆ. ಬಿಜೆಪಿಯವರು ರಾಜಕೀಯ ಲಾಭಕ್ಕಾಗಿ ಏನು ಮಾಡಲೂ ಹೇಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತರಾಮ ಶೆಟ್ಟಿ ಮಾತನಾಡಿ, ಕೊಲೆಯಾದ ಕಾರ್ತಿಕ್ ತಂದೆ ನನ್ನ ಗೆಳೆಯ, ಮೌನ ಪ್ರತಿಭಟನೆ ಎಂದು ನಾನೂ ಭಾಗವಹಿಸಿದ್ದೆ. ಆದರೆ ಈ ಸಂದರ್ಭದಲ್ಲಿ ಈ ರೀತಿ ಉದ್ರೇಕಕಕಾರಿ ಭಾಷಣ ಮಾಡುವುದನ್ನು ಊಹಿಸಿರಲಿಲ್ಲ. ಈ ಘಟನೆ ಬೇಸರ ತಂದಿದೆ ಎಂದರು.

 ಕಾಂಗ್ರೆಸ್ ಮುಖಂಡರಾದ ಉಮ್ಮರ್ ಪಜೀರು, ಅಬ್ದುಲ್ ರಹಿಮಾನ್ ಕೋಡಿಜಾಲ್, ರಮೇಶ್ ಶೆಟ್ಟಿ, ರವಿರಾಜ್ ಶೆಟ್ಟಿ, ಶೌಕತ್ ಆಲಿ, ನಝರ್ ಷಾ, ಮಹಾಬಲ ಶೆಟ್ಟಿ, ಗಣೇಶ್ ಶೆಟ್ಟಿ ತಲಪಾಡಿ, ಪದ್ಮನಾಭ ಮುಟ್ಟಿಂಜ, ಸುರೇಖಾ ಚಂದ್ರಹಾಸ್, ಹೇಮಾ, ದೇವಕಿ ಉಳ್ಳಾಲ್, ಪದ್ಮಾವತಿ, ಸುಲೈಮಾನ್ ಹಾಜಿ, ಸಿದ್ದೀಕ್ ತಲಪಾಡಿ, ಎನ್.ಎಸ್.ಕರೀಂ, ಲುಕ್ಮಾನ್, ಹೈದರ್ ಕೈರಂಗಳ, ನಾಸೀರ್ ಸಾಮಣಿಗೆ, ಸಿದ್ದೀಕ್ ಕಿನ್ಯಾ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X